ನಾಸಿಕ್‌ ಬಂಟರ ಸಂಘದ ವಾರ್ಷಿಕ ವಿಹಾರಕೂಟ


Team Udayavani, Nov 15, 2017, 12:37 PM IST

12-Mum01.jpg

ನಾಸಿಕ್‌: ನಾಸಿಕ್‌ ಬಂಟರ ಸಂಘದ ವತಿಯಿಂದ ಸಮಾಜ ಬಾಂಧವರಿಗಾಗಿ ವಾರ್ಷಿಕ ವಿಹಾರಕೂಟವು  ನ 5ರಂದು ಕಲ್ವನ್‌ ತಾಲೂಕಿನ ಅತ್ಯಂತ ಆಕರ್ಷಣೀಯ ಅರ್ಜುನ್‌ ಆಣೆಕಟ್ಟು ಪರಿಸರದಲ್ಲಿ ಆಯೋಜಿಸಲಾಗಿತ್ತು.

ಸಂಘದ ಅಧ್ಯಕ್ಷ ಕರುಣಾಕರ ಶೆಟ್ಟಿ ಹಾಗೂ ವಿಜಯ್‌ ಶೆಟ್ಟಿ ನೇತೃತ್ವದಲ್ಲಿ ನಡೆದ ಈ ವಿಹಾರಕೂಟದಲ್ಲಿ  2 ಬಸ್ಸುಗಳ ಮೂಲಕ 100ಕ್ಕೂ ಮಿಕ್ಕಿ ಸಮಾಜ ಬಾಂಧವರು ಉತ್ಸಾಹದಿಂದ ಭಾಗವಹಿಸಿದರು. ಬೆಳಗ್ಗೆ  8 ರಿಂದ ನಾಸಿಕ್‌ನಿಂದ ಹೊರಟು ದಿಂಡೋರಿ ತಾಲೂಕಿನ ಹೊಟೇಲ್‌ ರಾಜ್‌ಘಡದಲ್ಲಿ ಉಪಾಹಾರ ಮುಗಿಸಿ 11ರ ಹೊತ್ತಿಗೆ ವಿಹಾರಕೂಟದ ಸ್ಥಳಕ್ಕೆ ತಲುಪಿದರು.

ಈ ಸಂದರ್ಭ ಸೇರಿದ್ದ ಸಮಾಜ ಬಾಂಧವರನ್ನುದ್ದೇಶಿಸಿ ಸಂಘದ ಅಧ್ಯಕ್ಷ ಕರುಣಾಕರ ಶೆಟ್ಟಿ ಅವರು ಮಾತನಾಡಿ, ನಾಸಿಕ್‌ ಬಂಟರ ಸಂಘದಲ್ಲಿ ಸದಸ್ಯರ ಸಂಖ್ಯೆ ಕಡಿಮೆಯಿದ್ದರೂ ಒಗ್ಗಟ್ಟಿನಲ್ಲಿ ಮಾದರಿಯಾಗಿದ್ದೇವೆ. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಇಂದು ಭಾಗವಹಿಸಿರುವಂತೆಯೇ ಸಂಘದ ಎಲ್ಲಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಸಂಘದ ಬಲವರ್ಧನೆಗೆ ಸಹಕಾರ ನೀಡಬೇಕು. ಇಂತಹ ಕಾರ್ಯಕ್ರಮಗಳಿಂದ ನಮ್ಮ ಯುವ ಪೀಳಿಗೆಗೆ ಹೆಚ್ಚಿನ ಉತ್ಸಾಹ ದೊರೆತು ಸಂಘದೊಂದಿಗೆ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಪ್ರೇರಣೆ ನೀಡುತ್ತದೆ ಎಂದರು.

ಈ ಸಂದರ್ಭ ಮಕ್ಕಳು ಮಹಿಳೆಯರು, ಪುರುಷರೆಲ್ಲರಿಗೊ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ಎಲ್ಲರೂ ಭಾಗವಹಿಸಿ ಸಂಭ್ರಮಿಸಿದರು. ವಿಹಾರ
ಕೂಟವನ್ನು ಆಯೋಜಿಸಲು ಹಾಗೂ ಸಂಘದ ಸದಸ್ಯರೆಲ್ಲರನ್ನೂ ಒಗ್ಗೊಡಿಸಿ ವಿಹಾರಕೂಟವನ್ನು ಯಶಸ್ವಿಗೊಳಿಸಲು ಸಂಘದ ಉಪಾಧ್ಯಕ್ಷ ಶಶಿಕಾಂತ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್‌ ಶೆಟ್ಟಿ, ಸದಸ್ಯರುಗಳಾದ ರತ್ನಾಕರ ಶೆಟ್ಟಿ, ರಾಮಚಂದ್ರ ಶೆಟ್ಟಿ, ರವೀಂದ್ರ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಹರಿಣಿ ಆಳ್ವ, ಉದಯ… ಶೆಟ್ಟಿ, ಅಶಿತ್‌ ಶೆಟ್ಟಿ,  ಗಣೇಶ್‌  ಶೆಟ್ಟಿ ಸಹಕರಿಸಿದರು.

ಸಂಘದ ಮಾಜಿ ಅಧ್ಯಕ್ಷರುಗಳಾದ ಲಿಂಗಪ್ಪ ಶೆಟ್ಟಿ ಮತ್ತು ರಾಜ್‌ಗೊಪಾಲ ಶೆಟ್ಟಿ ವಿಹಾರಕೂಟದಲ್ಲಿ ಉಪಸ್ಥಿತರಿದ್ದರು. ಮಧ್ಯಾಹ್ನದ ಭೋಜನವನ್ನು ನಿತ್ಯಾನಂದ ಶೆಟ್ಟಿ ಚಂದ್ರಶೇಖರ ಶೆಟ್ಟಿ ದಂಪತಿಗಳು ಪ್ರಾಯೋಜಿಸಿದ್ದರು. ಸಂಘದ ಸದಸ್ಯರಾದ ಜಯಕರ ಶೆಟ್ಟಿ ಮತ್ತು ನಿತ್ಯಾನಂದ ಶೆಟ್ಟಿ ಬೆಳಗ್ಗಿನ ಉಪಾಹಾರದ ವ್ಯವಸ್ಥೆಯನ್ನು ಮಾಡಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ  ಎಲ್ಲರನ್ನೂ ಸ್ವಾಗತಿಸಿ ವಂದಿಸಿದರು.

ನಾಸಿಕ್‌ ಬಂಟರ ಸಂಘದ ವಾರ್ಷಿಕ ವಿಹಾರಕೂಟ

ನಾಸಿಕ್‌: ನಾಸಿಕ್‌ ಬಂಟರ ಸಂಘದ ವತಿಯಿಂದ ಸಮಾಜ ಬಾಂಧವರಿಗಾಗಿ ವಾರ್ಷಿಕ ವಿಹಾರಕೂಟವು  ನ 5ರಂದು ಕಲ್ವನ್‌ ತಾಲೂಕಿನ ಅತ್ಯಂತ ಆಕರ್ಷಣೀಯ ಅರ್ಜುನ್‌ ಆಣೆಕಟ್ಟು ಪರಿಸರದಲ್ಲಿ ಆಯೋಜಿಸಲಾಗಿತ್ತು.

ಸಂಘದ ಅಧ್ಯಕ್ಷ ಕರುಣಾಕರ ಶೆಟ್ಟಿ ಹಾಗೂ ವಿಜಯ್‌ ಶೆಟ್ಟಿ ನೇತೃತ್ವದಲ್ಲಿ ನಡೆದ ಈ ವಿಹಾರಕೂಟದಲ್ಲಿ  2 ಬಸ್ಸುಗಳ ಮೂಲಕ 100ಕ್ಕೂ ಮಿಕ್ಕಿ ಸಮಾಜ ಬಾಂಧವರು ಉತ್ಸಾಹದಿಂದ ಭಾಗವಹಿಸಿದರು. ಬೆಳಗ್ಗೆ  8 ರಿಂದ ನಾಸಿಕ್‌ನಿಂದ ಹೊರಟು ದಿಂಡೋರಿ ತಾಲೂಕಿನ ಹೊಟೇಲ್‌ ರಾಜ್‌ಘಡದಲ್ಲಿ ಉಪಾಹಾರ ಮುಗಿಸಿ 11ರ ಹೊತ್ತಿಗೆ ವಿಹಾರಕೂಟದ ಸ್ಥಳಕ್ಕೆ ತಲುಪಿದರು.

ಈ ಸಂದರ್ಭ ಸೇರಿದ್ದ ಸಮಾಜ ಬಾಂಧವರನ್ನುದ್ದೇಶಿಸಿ ಸಂಘದ ಅಧ್ಯಕ್ಷ ಕರುಣಾಕರ ಶೆಟ್ಟಿ ಅವರು ಮಾತನಾಡಿ, ನಾಸಿಕ್‌ ಬಂಟರ ಸಂಘದಲ್ಲಿ ಸದಸ್ಯರ ಸಂಖ್ಯೆ ಕಡಿಮೆಯಿದ್ದರೂ ಒಗ್ಗಟ್ಟಿನಲ್ಲಿ ಮಾದರಿಯಾಗಿದ್ದೇವೆ. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಇಂದು ಭಾಗವಹಿಸಿರುವಂತೆಯೇ ಸಂಘದ ಎಲ್ಲಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಸಂಘದ ಬಲವರ್ಧನೆಗೆ ಸಹಕಾರ ನೀಡಬೇಕು. ಇಂತಹ ಕಾರ್ಯಕ್ರಮಗಳಿಂದ ನಮ್ಮ ಯುವ ಪೀಳಿಗೆಗೆ ಹೆಚ್ಚಿನ ಉತ್ಸಾಹ ದೊರೆತು ಸಂಘದೊಂದಿಗೆ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಪ್ರೇರಣೆ ನೀಡುತ್ತದೆ ಎಂದರು.

ಈ ಸಂದರ್ಭ ಮಕ್ಕಳು ಮಹಿಳೆಯರು, ಪುರುಷರೆಲ್ಲರಿಗೊ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ಎಲ್ಲರೂ ಭಾಗವಹಿಸಿ ಸಂಭ್ರಮಿಸಿದರು. ವಿಹಾರ
ಕೂಟವನ್ನು ಆಯೋಜಿಸಲು ಹಾಗೂ ಸಂಘದ ಸದಸ್ಯರೆಲ್ಲರನ್ನೂ ಒಗ್ಗೊಡಿಸಿ ವಿಹಾರಕೂಟವನ್ನು ಯಶಸ್ವಿಗೊಳಿಸಲು ಸಂಘದ ಉಪಾಧ್ಯಕ್ಷ ಶಶಿಕಾಂತ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್‌ ಶೆಟ್ಟಿ, ಸದಸ್ಯರುಗಳಾದ ರತ್ನಾಕರ ಶೆಟ್ಟಿ, ರಾಮಚಂದ್ರ ಶೆಟ್ಟಿ, ರವೀಂದ್ರ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಹರಿಣಿ ಆಳ್ವ, ಉದಯ… ಶೆಟ್ಟಿ, ಅಶಿತ್‌ ಶೆಟ್ಟಿ,  ಗಣೇಶ್‌  ಶೆಟ್ಟಿ ಸಹಕರಿಸಿದರು.

ಸಂಘದ ಮಾಜಿ ಅಧ್ಯಕ್ಷರುಗಳಾದ ಲಿಂಗಪ್ಪ ಶೆಟ್ಟಿ ಮತ್ತು ರಾಜ್‌ಗೊàಪಾಲ… ಶೆಟ್ಟಿ ವಿಹಾರಕೂಟದಲ್ಲಿ ಉಪಸ್ಥಿತರಿದ್ದರು. ಮಧ್ಯಾಹ್ನದ ಭೋಜನವನ್ನು ನಿತ್ಯಾನಂದ ಶೆಟ್ಟಿ ಚಂದ್ರಶೇಖರ ಶೆಟ್ಟಿ ದಂಪತಿಗಳು ಪ್ರಾಯೋಜಿಸಿದ್ದರು. ಸಂಘದ ಸದಸ್ಯರಾದ ಜಯಕರ ಶೆಟ್ಟಿ ಮತ್ತು ನಿತ್ಯಾನಂದ ಶೆಟ್ಟಿ ಬೆಳಗ್ಗಿನ ಉಪಾಹಾರದ ವ್ಯವಸ್ಥೆಯನ್ನು ಮಾಡಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ  ಎಲ್ಲರನ್ನೂ ಸ್ವಾಗತಿಸಿ ವಂದಿಸಿದರು.

ಟಾಪ್ ನ್ಯೂಸ್

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!

1-heall

Health; ಜೀವರಕ್ಷಕ ವ್ಯವಸ್ಥೆ ತೆಗೆಯಲು ಕುಟುಂಬದ ಒಪ್ಪಿಗೆ ಕಡ್ಡಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.