![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 13, 2021, 8:56 AM IST
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಸಂಚಾಲಿತ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಘನ್ಸೋಲಿ ಸ್ಥಳಾಂತರಿತ ಶಾಖೆಯು ಮೇ 10 ರಂದು ಉದ್ಘಾಟನೆಗೊಂಡಿತು.
ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಅಧ್ಯಕ್ಷ ಹರೀಶ್ ಜಿ. ಅಮೀನ್ ಅವರು ಶಾಖೆಯ ಎಟಿಎಂ ಸೆಂಟರ್ ಅನ್ನು ಉದ್ಘಾಟಿಸಿದರು. ಈ ಸಂದರ್ಭ ಬ್ಯಾಂಕ್ ಕಾರ್ಯಾಧ್ಯಕ್ಷ ಉಪೂ³ರು ಶಿವಾಜಿ
ಪೂಜಾರಿ, ಮೂಕಾಂಬಿಕಾ ದೇವಾಲಯದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಬ್ಯಾಂಕ್ನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿದ್ಯಾನಂದ ಎಸ್. ಕರ್ಕೇರ, ಜಂಟಿ ಆಡಳಿತ ನಿರ್ದೇಶಕ ದಿನೇಶ್ ಬಿ. ಸಾಲ್ಯಾನ್, ಉಪ ಮಹಾಪ್ರಬಂಧಕ ಪ್ರಭಾಕರ್ ಜಿ. ಪೂಜಾರಿ, ಶಾಖೆಯ ಮುಖ್ಯ ಪ್ರಬಂಧಕ ಸಂತೋಷ್ ಕೋಟ್ಯಾನ್, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕಾರ್ಯಕಾರಿ ಸಮಿತಿ ಸದಸ್ಯ ನಿಲೇಶ್ ಪೂಜಾರಿ, ಉದ್ಯಮಿಗಳು, ಗ್ರಾಹಕರು ಉಪಸ್ಥಿತರಿದ್ದರು.
You seem to have an Ad Blocker on.
To continue reading, please turn it off or whitelist Udayavani.