ಯುವ ಜನತೆಯನ್ನು ಯಕ್ಷಗಾನದೆಡೆಗೆ ಆಕರ್ಷಿಸಬೇಕು: ಪಟ್ಲ ಸತೀಶ್‌ ಶೆಟ್ಟಿ


Team Udayavani, Oct 23, 2022, 11:22 AM IST

ಯುವ ಜನತೆಯನ್ನು ಯಕ್ಷಗಾನದೆಡೆಗೆ ಆಕರ್ಷಿಸಬೇಕು: ಪಟ್ಲ ಸತೀಶ್‌ ಶೆಟ್ಟಿ

ಪುಣೆ: ತ್ರಿರಂಗ ಸಂಗಮ ನಮ್ಮನ್ನು ಕರೆಸಿ ಮಹಾರಾಷ್ಟ್ರದಲ್ಲಿ ಒಟ್ಟು 14 ಪ್ರದರ್ಶನಗಳನ್ನು ಏರ್ಪಡಿಸಿದೆ. ನಾವು ಇಂದು ಸಮಾರೋಪ ಪ್ರದರ್ಶನ ನೀಡುತ್ತಿರುವುದು ಬಹಳಷ್ಟು ಸಂತೋಷ ನೀಡಿದೆ. ಇಂದು ಪಿಂಪ್ರಿ-ಚಿಂಚ್ವಾಡ್‌ನ‌ಲ್ಲಿ ಅಪಾರ ಸಂಖ್ಯೆಯ ಕಲಾಭಿಮಾನಿಗಳು ಸೇರಿದ್ದಾರೆ. ಈ ಕಾಲದಲ್ಲಿಯೂ ಹೊರನಾಡಿನಲ್ಲಿ ಯಕ್ಷಗಾನ ಕಲೆಗೆ ಇಷ್ಟೊಂದು ಪ್ರೋತ್ಸಾಹ ಸಿಗುತ್ತಿದೆ ಎಂದರೆ ಇದಕ್ಕಿಂತ ದೊಡ್ಡ ಸಂತೋಷ ಇನ್ನೇನಿದೆ. ಇಂದು ಅಂಕಿತಾ ಎನ್ನುವ ಹುಡುಗಿ ನನ್ನ ಭಾವಚಿತ್ರವೊಂದನ್ನು ಪಡಮೂಡಿಸಿ ನನಗೆ ಗೌರವಿಸಿರುವುದು ಯುವ ಜನತೆಯನ್ನು ಯಕ್ಷಗಾನ ಎಷ್ಟು ಆಕರ್ಷಿಸುತ್ತದೆ ಎಂಬುದಕ್ಕೆ ಸಾಕ್ಷಿ. ಯುವ ಜನತೆಯನ್ನು ಯಕ್ಷಗಾನಕ್ಕೆ ಆಕರ್ಷಿಸುವ ಕಾರ್ಯ ನಮ್ಮಿಂದಾಗಬೇಕಾಗಿದೆ ಎಂದು ಯಕ್ಷಧ್ರುವ ಹಾಗೂ ಪಟ್ಲ ಫೌಂಡೇಶನ್‌ನ ಸ್ಥಾಪಕ, ಖ್ಯಾತ ಭಾಗವತ ಪಟ್ಲ ಸತೀಶ್‌ ಶೆಟ್ಟಿ ತಿಳಿಸಿದರು.

ಶ್ರೀ ಅಯ್ಯಪ್ಪ ಸೇವಾ ಮಂಡಲ ನೆಹರೂನಗರ ಪಿಂಪ್ರಿ – ಚಿಂಚ್ವಾಡ್‌ ಸಂಯೋಜನೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಸ್ಥಾಪಕ, ಪಟ್ಲ ಸತೀಶ್‌ ಶೆಟ್ಟಿ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವ್ರುಜ ಕ್ಷೇತ್ರ ಪಾವಂಜೆಯ ಪ್ರಸಿದ್ಧ ಕಲಾವಿದರಿಂದ ಅ. 20ರಂದು ಪಿಂಪ್ರಿಯ ಆಚಾರ್ಯ ಅತ್ರೆ ನಾಟ್ಯಗೃಹದಲ್ಲಿ ಆಯೋಜಿಸಿದ್ದ ಧರ್ಮ ಸಿಂಹಾಸನ ಯಕ್ಷಗಾನ ಪ್ರದರ್ಶನದ ಮಧ್ಯಾಂತರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಯಕ್ಷಗಾನ ಮನೋರಂಜನೆ ಜತೆಗೆ ಆರಾಧನ ಕಲೆಯಾಗಿದೆ. ಪಿಂಪ್ರಿ – ಚಿಂಚ್ವಾಡ್‌ ಶ್ರೀ ಅಯ್ಯಪ್ಪ ಸೇವಾ ಮಂಡಲ ಭಕ್ತಿಪೂರ್ವಕವಾಗಿ ಪೌರಾಣಿಕ ಯಕ್ಷಗಾನ ಪ್ರದರ್ಶನ ಆಯೋಜಿಸಿರುವುದಕ್ಕೆ ಸುಬ್ರಹ್ಮಣ್ಯ ದೇವರ ಅನುಗ್ರಹ ಖಂಡಿತಾ ಇದೆ. ಯಕ್ಷಗಾನ ನನಗೆ ಬಹಳಷ್ಟನ್ನು ನೀಡಿದ್ದು, ನಾನು ಯಕ್ಷಗಾನಕ್ಕೆ ಇನ್ನಷ್ಟು ಸೇವೆ ಸಲ್ಲಿಸಬೇಕಾಗಿದೆ. ನಾಡಿನ ಕಲೆಯನ್ನು, ಕಲಾವಿದರನ್ನು ಉಳಿಸಿ – ಬೆಳೆಸುವಲ್ಲಿ ನಿಮ್ಮೆಲ್ಲರ ಪ್ರೋತ್ಸಾಹ, ಸಹಕಾರ ನಿರಂತರವಾಗಿರಲಿ ಎಂದರು. ಪಿಂಪ್ರಿ-ಚಿಂಚ್ವಾಡ್‌ ಬಂಟರ ಸಂಘದ ಅಧ್ಯಕ್ಷ ರಾಕೇಶ್‌ ಶೆಟ್ಟಿ ಬೆಳ್ಳಾರೆ ಶುಭಹಾರೈಸಿದರು.

ಪ್ರಾರಂಭದಲ್ಲಿ ದೀಪ ಪ್ರಜ್ವಲಿಸಿ ಯಕ್ಷಗಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪಿಂಪ್ರಿ-ಚಿಂಚ್ವಾಡ್‌ ಬಂಟರ ಸಂಘದ ಅಧ್ಯಕ್ಷ ರಾಕೇಶ್‌ ಶೆಟ್ಟಿ ಬೆಳ್ಳಾರೆ, ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ, ಎರ್ಮಾಳ್‌ ವಿಶ್ವನಾಥ ಶೆಟ್ಟಿ, ಕೆ. ಪದ್ಮನಾಭ ಶೆಟ್ಟಿ, ಪಿಂಪ್ರಿ-ಚಿಂಚ್ವಾಡ್‌ ತುಳು ಸಂಘದ ಅಧ್ಯಕ್ಷ ಹರೀಶ್‌ ಶೆಟ್ಟಿ ಕುರ್ಕಾಲ್‌, ಮಾಜಿ ಅಧ್ಯಕ್ಷ ಶ್ಯಾಮ್‌ ಸುವರ್ಣ, ಪಿಂಪ್ರಿ-ಚಿಂಚ್ವಾಡ್‌ ಬಿಲ್ಲವ ಸಂಘದ ಅಧ್ಯಕ್ಷ ನವೀನ್‌ ಕೋಟ್ಯಾನ್‌, ಶ್ರೀ ಅಯ್ಯಪ್ಪ ಸೇವಾ ಮಂಡಲದ ಅಧ್ಯಕ್ಷ ಆನಂದ್‌ ನಾಯಕ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಮತಿ ಶೆಟ್ಟಿ ಉಪಸ್ಥಿತರಿದ್ದರು.

ಶ್ರೀ ಅಯ್ಯಪ್ಪ ಸೇವಾ ಮಂಡಲದ ವತಿಯಿಂದ ಪಟ್ಲ ಸತೀಶ್‌ ಶೆಟ್ಟಿ ಹಾಗೂ ರಾಕೇಶ್‌ ಶೆಟ್ಟಿ ಬೆಳ್ಳಾರೆ ಅವರನ್ನು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆ ನೀಡಿ ಸಮ್ಮಾನಿಸಲಾಯಿತು. ತ್ರಿರಂಗ ಸಂಗಮದ ಸಂಚಾಲಕರಾದ ಅಶೋಕ್‌ ಪಕ್ಕಳ, ಕರ್ನೂರು ಮೋಹನ್‌ ರೈ ಹಾಗೂ ನವೀನ ಶೆಟ್ಟಿ ಇನ್ನ ಬಾಳಿಕೆ ಅವರು ಶ್ರೀ ಅಯ್ಯಪ್ಪ ಸೇವಾ ಮಂಡಲದ ಅಧ್ಯಕ್ಷ ಆನಂದ್‌ ನಾಯಕ್‌, ಪಿಂಪ್ರಿ-ಚಿಂಚ್ವಾಡ್‌ ಬಂಟರ ಸಂಘದ ಅಧ್ಯಕ್ಷ ರಾಕೇಶ್‌ ಶೆಟ್ಟಿ ಬೆಳ್ಳಾರೆ, ಜಯಾನಂದ್‌ ಶೆಟ್ಟಿ ಹಾಗೂ ಜೀವನ್‌ ಶೆಟ್ಟಿ ದೊಂಡೇರಂಗಡಿ ಅವರುಗಳನ್ನು ಶಾಲು ಹೊದೆಸಿ, ಸ್ಮರಣಿಕೆ ಹಾಗೂ ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಕರ್ನೂರು ಮೋಹನ್‌ ರೈಯವರು ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟ ನೆಹರೂ ನಗರ ಅಯ್ಯಪ್ಪ ಸೇವಾ ಮಂಡಲದ ಕಾರ್ಯಕಾರಿ ಸಮಿತಿಗೆ ಹಾಗೂ ಸಹಕಾರ ನೀಡಿದ ಸರ್ವ ಕಲಾಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.

ಶ್ರೀ ಅಯ್ಯಪ್ಪ ಸೇವಾ ಮಂಡಲದ ಅಧ್ಯಕ್ಷ ಆನಂದ್‌ ನಾಯಕ್‌, ಮಾಜಿ ಅಧ್ಯಕ್ಷ ಶ್ರೀಧರ ಶೆಟ್ಟಿ, ಜಯಾನಂದ್‌ ಶೆಟ್ಟಿ, ಗಣೇಶ್‌ ಅಂಚನ್‌, ಕಾರ್ಯದರ್ಶಿ ವಿಟ್ಠಲ್‌ ಪೂಜಾರಿ, ಕೋಶಾಧಿಕಾರಿ ಗೋಪಾಲ್‌ ಪೂಜಾರಿ, ಉಪಾಧ್ಯಕ್ಷ ಸಂಜೀವ್‌ ಮೂಲ್ಯ, ಸದಸ್ಯರಾದ ಶೇಖರ್‌ ಶೆಟ್ಟಿ, ಜಯಕರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಅಶೋಕ್‌ ಶೆಟ್ಟಿ ಉಪಸ್ಥಿತರಿದ್ದರು.

ಪ್ರತಿಮಾ ಸುಧಾಕರ ಶೆಟ್ಟಿ ಹಾಗೂ ಸುಮನಾ ಶಶಿಧರ ಶೆಟ್ಟಿ ಸಮ್ಮಾನಿತರನ್ನು ಪರಿಚಯಿಸಿದರು. ಜೀವನ್‌ ಶೆಟ್ಟಿ ದೊಂಡೇರಂಗಡಿ ನಿರೂಪಿಸಿ, ವಂದಿಸಿದರು.

ಕಳೆದ 27 ವರ್ಷಗಳಿಂದ ನಿರಂತರವಾಗಿ ನೆಹರೂ ನಗರ ಅಯ್ಯಪ್ಪ ಸೇವಾ ಮಂಡಲ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ನಮ್ಮೂರಿನ ಯಕ್ಷಗಾನ, ತಾಳಮದ್ದಳೆ, ನಾಟಕ ಸಹಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಎಲ್ಲರನ್ನೂ ಜಾತ್ಯತೀತವಾಗಿ ಒಗ್ಗೂಡಿಸುವ ಕಾರ್ಯ ಮಾಡುತ್ತಿದೆ. ನಮ್ಮ ಧಾರ್ಮಿಕ ನಂಬಿಕೆಗಳು, ಕಲೆ, ಸಂಸ್ಕೃತಿಗಳನ್ನು ಉಳಿಸುವಲ್ಲಿ ನಾವೆಲ್ಲ ಒಗ್ಗೂಡಿ ಶ್ರಮಿಸಬೇಕಾಗಿದೆ. ಇಂದು ಸೇವಾಭಾವದೊಂದಿಗೆ ಯಕ್ಷಗಾನ ಪ್ರದರ್ಶನ ಆಯೋಜಿಸಿರುವುದು ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ. ಮುಂದೆ ಮಂದಿರದ ಅಭಿವೃದ್ಧಿಗಾಗಿ ನಾವೆಲ್ಲರೂ ಕೈಜೋಡಿಸೋಣ. ರಾಕೇಶ್‌ ಶೆಟ್ಟಿ ಬೆಳ್ಳಾರೆ, ಅಧ್ಯಕ್ಷ, ಬಂಟರ ಸಂಘ ಪಿಂಪ್ರಿ-ಚಿಂಚ್ವಾಡ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.