
ಪುಣೆ ಶ್ರೀ ಗುರುದೇವ ಸೇವಾ ಬಳಗದ ತೀರ್ಥಯಾತ್ರೆ
Team Udayavani, Aug 29, 2017, 3:16 PM IST

ಪುಣೆ: ಪುಣೆಯ ಶ್ರೀ ಗುರುದೇವ ಸೇವಾಬಳಗ ಹಾಗೂ ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಇದರ ವತಿಯಿಂದ ಶ್ರಾವಣ ಮಾಸದಲ್ಲಿ ಪ್ರತಿ ವರ್ಷದಂತೆ ನಡೆಯುವ ಪುಣ್ಯ ಜ್ಯೋತಿರ್ಲಿಂಗ ದರ್ಶನದ ತೀರ್ಥ ಯಾತ್ರೆ ಭಾಗವಾಗಿ ಈ ಬಾರಿ ರಾಜ್ಯದ ಮೂರು ಜ್ಯೋತಿರ್ಲಿಂಗಗಳ ದರ್ಶನ ಮಾಡಲಾಯಿತು.
ಪುಣೆ ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಸದಾನಂದ ಕೆ. ಶೆಟ್ಟಿ ಅವರ ಮುಂದಾಳತ್ವದಲ್ಲಿ ಸುಮಾರು 40 ಮಂದಿ ಯಾತ್ರಾರ್ಥಿಗಳು ಭಾರತದ ಪವಿತ್ರವಾದ 12 ಜ್ಯೋತಿರ್ಲಿಂಗಗಳ ಪೈಕಿ ಮಧ್ಯ ಮಹಾರಾಷ್ಟ್ರದಲ್ಲಿರುವ ಪವಿತ್ರ ಜ್ಯೋತಿರ್ಲಿಂಗಳಾದ ಪಾರ್ಲಿ ವೈದ್ಯನಾಥ ಶಿವಮಂದಿರ, ಔಂದ್ನ ದಾರುಕಾವನ ನಾಗನಾಥ ಶಿವಾಲಯ ಮತ್ತು ಎಲ್ಲೋರಾದ ವಿಘ್ನೇಶ್ವರ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಪುನೀತರಾದರು.
ಈ ಮಧ್ಯೆ ಅಷ್ಟ ವಿನಾಯಕ ಗಣಪತಿಗಳಲ್ಲಿ ಒಂದಾದ ರಂಜನ್ಗಾಂವ್ನ ಮೋರೇಶ್ವರ ದೇವಾಲಯ ,ದೇವಗಡ್ನ ಶ್ರೀ ದತ್ತಮಂದಿರ ,ಶನಿ ಶಿಂಗಾ¡ಪುರ ಶನಿ ದೇವಾಲಯಗಳಿಗೂ ತೆರಳಿ ಪೂಜೆ ಸಲ್ಲಿಸಲಾಯಿತು. ಯಾತ್ರೆಯನ್ನು ಬಳಗದ ಪ್ರಮುಖರಾದ ಉಷಾ ಕುಮಾರ್ ಶೆಟ್ಟಿ ಅವರು ಆಯೋಜಿಸುವಲ್ಲಿ ಸಹಕರಿಸಿದರು.
ಅಧ್ಯಕ್ಷ ಸದಾನಂದ ಕೆ. ಶೆಟ್ಟಿ ಮತ್ತು ಕಾರ್ಯದರ್ಶಿ ಎನ್ ರೋಹಿತ್ ಡಿ. ಶೆಟ್ಟಿ ,ಕೊಶಾಧಿಕಾರಿ ರಂಜಿತ್ ಶೆಟ್ಟಿ, ಮಾಜಿ ಅಧ್ಯಕ್ಷ ನಾರಾಯಣ ಶೆಟ್ಟಿ ಮತ್ತು ಬಳಗದ ಪ್ರಮುಖರೆಲ್ಲರು ತನುಮನ ಧನದಿಂದ ಸಹಾಯ ನೀಡಿ ಸಹಕರಿಸಿದರು.
ಚಿತ್ರ-ವರದಿ: ಹರೀಶ್ ಮೂಡಬಿದ್ರೆ
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.