ರಾಘವೇಂದ್ರ ಮಠ ಜೋಗೇಶ್ವರಿ: ಸುಜಯೀಂದ್ರ ಭವನಕ್ಕೆ ಶಂಕುಸ್ಥಾಪನೆ


Team Udayavani, Mar 26, 2017, 3:39 PM IST

24-Mum04a.jpg

ಮುಂಬಯಿ: ಕಲಿಯುಗದ ಕಾಮಧೇನುವಾಗಿ, ನಂಬಿದ ಭಕ್ತರಿಗೆ ಕಲ್ಪವೃಕ್ಷವಾಗಿ ದೇಶ-ವಿದೇಶಗಳಲ್ಲಿ ಅಭೂತಪೂರ್ವ ಭಕ್ತ ಸಂಕುಲವನ್ನು ಹೊಂದಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಅಭಿನವ ಮಂತ್ರಾಲಯವು ಜೋಗೇ ಶ್ವರಿಯಲ್ಲಿ ಮಾ. 20ರಂದು ಲೋಕಾರ್ಪಣೆಗೊಂಡು ಭಕ್ತರಿಗೆ ದರ್ಶನ ಪಡೆಯುವ ಭಾಗ್ಯ ಒದಗಿದ್ದು, ಮಠದಲ್ಲಿ ಇನ್ನೂ ಹೆಚ್ಚಿನ ಸವಲತ್ತು, ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಬೃಹತ್‌ ಸಂಕೀರ್ಣ

ವೊಂದು ನಿರ್ಮಾಣಗೊಳ್ಳಲಿದ್ದು, ಮಾ. 24ರಂದು ಬೆಳಗ್ಗೆ ಮಂತ್ರಾಲಯದ ಮಠಾಧಿಪತಿಗಳಾದ ಶ್ರೀ ಸುಬುದೇಂದ್ರ ತೀರ್ಥಶ್ರೀಪಾದರು ಬೃಂದಾವನದ ಪಕ್ಕದಲ್ಲಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರೀ ಸುಜಯೀಂದ್ರ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಆಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣಗೊಳ್ಳಲಿರುವ ಸುಜಯೀಂದ್ರ ಭವನವು ಹಿರಿಯ ಯತಿಗಳ ಅನುಗ್ರಹದೊಂದಿಗೆ ಸ್ಥಾಪನೆಗೊಳ್ಳಲಿದೆ. ನೂತನ ಭವನದಲ್ಲಿ ಬೃಹತ್‌ ಕಲ್ಯಾಣ ಮಂಟಪ ರೂಪುಗೊಳ್ಳಲಿದ್ದು, ಇತರ ಮಹಡಿಗಳಲ್ಲಿ ಯೋಗಕೇಂದ್ರ, ಗ್ರಂಥಾಲಯ, ಅತಿಥಿಗೃಹ, ಪ್ರವಚನ ಕೊಠಡಿಗಳು  ಹಾಗೂ ಇತರ ಸೌಲಭ್ಯಗಳು ಒಳಗೊಳ್ಳಲಿದೆ. ಜೊತೆಗೆ ವಿಶಾಲವಾದ ಗೋ ಶಾಲೆಯು ನಿರ್ಮಾಣಗೊಳ್ಳಲಿದೆ.

ಅಭಿನವ ಮಂತ್ರಾಲಯ ಲೋಕಾರ್ಪಣೆಗೊಂಡು ಪ್ರಸ್ತುತ ರಾಯರ ದರ್ಶನಕ್ಕೆ ಭಕ್ತರ ಸಂಖ್ಯೆಯು ಹೆಚ್ಚಾಗುತ್ತಿದ್ದು, ಭವಿಷ್ಯದಲ್ಲಿ ಭಕ್ತರ ಬೇಡಿಕೆಗೆ ಅನುಗುಣವಾಗಿ ವಿವಿಧ ಸೌಲಭ್ಯಗಳನ್ನು ವಿಸ್ತರಿಸುವ ಯೋಜನೆಯನ್ನು ಹೊಂದಲಾಗಿದೆ. ಶಂಕುಸ್ಥಾಪನ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಗೆ ನೂತನವಾಗಿ ಆಯ್ಕೆಗೊಂಡ ಮೇಯರ್‌ ಪ್ರೊ| ವಿಶ್ವನಾಥ ಮಹದೇಶ್ವರ ಅವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಶ್ರೀ ಸುಬುದೇಂದ್ರ ಶ್ರೀಗಳು, ಮುಂಬಯಿ ಭಕ್ತಾದಿಗಳ ಸಹಕಾರ, ಪ್ರೋತ್ಸಾಹವನ್ನು ಕಂಡು ಬಹಳಷ್ಟು ಸಂತೋಷಪಟ್ಟೆ. ಮಠದ ನಿರ್ಮಾಣಗೊಂಡ ಪ್ರದೇಶದಲ್ಲಿ ನೆಲೆಸಿರುವ ಎಲ್ಲ ಧರ್ಮದವರು ಸಾಮರಸ್ಯದಿಂದ ಜೀವನ ಸಾಗಿಸುತ್ತಿದ್ದು, ಎಲ್ಲ ಧರ್ಮದವರು, ಒಗ್ಗಟ್ಟಿನಿಂದ, ಒಮ್ಮನಸ್ಸಿನಿಂದ ಕೂಡಿ ಶಾಖೆಯ ಉದ್ಘಾಟನೆಗೆ ಸಹಕರಿಸಿದ್ದು ನನ್ನ ಧಾರ್ಮಿಕ, ಸಾಮಾಜಿಕ ಸೇವೆಗೆ ಪುಷ್ಟಿ ನೀಡಿದೆ. ಭಕ್ತರ ಪ್ರೋತ್ಸಾಹ, ಸಹಕಾರ, ಸಲಹೆಗಳು ಇದೇ ರೀತಿಯಲ್ಲಿ ಮುಂದುವರಿದು ಜೋಗೇಶ್ವರಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಅಭಿನವ ಮಂತ್ರಾಲಯವು ದೇಶ-ವಿದೇಶಗಳಲ್ಲೂ ಹೆಸರುವಾಸಿಯಾಗಲಿ ಎಂದು ಹಾರೈಸಿದರು.

ನೂರಾರು ಮಂದಿ ಭಕ್ತಾದಿಗಳು, ಮೂಲ ಮಂತ್ರಾಲಯದ ಆಡಳಿತ ಅಧಿಕಾರಿಗಳು, ಸಿಬಂದಿವರ್ಗ, ಜೋಗೇಶ್ವರಿ ಮಠದ ಪ್ರಬಂಧಕರಾದ ರಮಾಕಾಂತ ಮಾನ್ವಿ, ಮೇಲ್ವಿಚಾರಕ ಪೂರ್ಣಪ್ರಜ್ಞ ವೆಂಕಟ, ಅರ್ಚಕ ವೃಂದದವರು ಉಪಸ್ಥಿತರಿದ್ದರು. ಅನಂತರ ದಾಸ ಸಾಹಿತ್ಯ ಪ್ರೊಜೆಕ್ಟ್ ವತಿಯಿಂದ ಭಜನ ಮಂಡಳಿಯ ಸಮಾವೇಶ ನಡೆಯಿತು.   

 ಚಿತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.