ರಾಜ್ಯದಲಿ ಧಾರ್ಮಿಕ ಕೂಟಗಳಿಗೆ ಅವಕಾಶವಿಲ್ಲ: ಸಿಎಂ


Team Udayavani, Jul 20, 2020, 4:48 PM IST

ರಾಜ್ಯದಲಿ ಧಾರ್ಮಿಕ ಕೂಟಗಳಿಗೆ ಅವಕಾಶವಿಲ್ಲ: ಸಿಎಂ

ಮುಂಬಯಿ, ಜು. 19: ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಕೂಟಗಳನ್ನು ನಿಷೇ ಸಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಪುನರುಚ್ಚರಿಸಿದ್ದಾರೆ.

ಆನ್‌ಲೈನ್‌ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮನಪಾ ಆಯುಕ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಸೋಂಕು ಹರಡುವಿಕೆಯ ನಿಯಂತ್ರಣಕ್ಕೆ ಧಾರಾವಿ ಮಾದರಿ ಕಾರ್ಯಾಚರಣೆ ನಡೆಸಲು ಕರೆ ನೀಡಿದರು. ಹೊಸ ಕಂಟೈನ್‌ಮೆಂಟ್‌ ವಲಯ ಸೃಷ್ಟಿಯಾಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಿದರು. ಕೋವಿಡ್‌ ಆಸ್ಪತ್ರೆಗಳಿಗೆ ಲೆಕ್ಕಪರಿಶೋಧಕರನ್ನು ನೇಮಕ ಮಾಡುವಂತೆಯೂ ಸಿಎಂ ಅಧಿಕಾರಿಗಳಿಗೆ ತಿಳಿಸಿದರು. ಪ್ರತಿ ಜಿಲ್ಲೆಯ ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿ ಸಮರ್ಪಕ ಸೌಲಭ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಅಂತೆಯೇ, ಮಹಾತ್ಮಾ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆಯ ಅನುಷ್ಠಾನ ಮತ್ತು ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆಯ ಬಗ್ಗೆ ನಿಗಾ ವಹಿಸಬೇಕು ಎಂದು ಸಿಎಂ ಕರೆ ನೀಡಿದರು.

ಪ್ರಸ್ತುತ ರಾಜ್ಯದಲ್ಲಿ 540 ಸೋಂಕಿತರು ವೆಂಟಿಲೇಟರ್‌ನಲ್ಲಿದ್ದಾರೆ ಎಂದ ಅವರು, ಇನ್ನು ಮುಂದೆ ರಾಜ್ಯದ ಪ್ರತಿ ಜಿಲ್ಲೆಗಳಿಗೆ ನೋಡಲ್‌ ಪರೀಕ್ಷಾ ಅಧಿಕಾರಿಯನ್ನು ನೇಮಿಸಲಾಗುವುದು ಎಂದರು. ಸರಕಾರವು ಸ್ವಾಬ್‌ ಸಂಗ್ರಹದ ಜತೆಗೆ ಕ್ವಿಕ್‌ ಜೆನ್‌ ಪರೀಕ್ಷೆಗಳನ್ನು ಹೆಚ್ಚಿಸಲು ನಿರ್ಧರಿಸಿದೆ ಎಂದವರು ಹೇಳಿದರು. ಪ್ಲಾಸ್ಮಾ ದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ದಾನಿಗಳಿಗೆ 2,000 ರೂ. ನೀಡಲಾಗುವುದು ಎಂದರು. ಸಭೆಯಲ್ಲಿ ಭಾಗವಹಿಸಿದ್ದ ಬಿಎಂಸಿ ಆಯುಕ್ತ ಐ. ಎಸ್‌. ಚಾಹಲ್‌ ಅವರು ಮಾತನಾಡಿ, ಮುಂಬಯಿ ಮಹಾನಗರ ಪ್ರದೇಶಕ್ಕೆ (ಎಂಎಂಆರ್‌) ಏಕೀಕೃತ ಕಮಾಂಡ್‌ ಸೆಂಟರ್‌ ಸ್ಥಾಪಿಸಬೇಕು ಮತ್ತು ಅಲ್ಲಿ ಎಲ್ಲ ಸೌಲಭ್ಯಗಳ ಬಗ್ಗೆ ಮಾಹಿತಿ ಲಭ್ಯವಾಗುವ ವ್ಯವಸ್ಥೆ ಕಲ್ಪಿಸಬೇಕು ಎಂದು ಸಲಹೆಯನ್ನು ನೀಡಿದರು. ಎಂಎಂಆರ್‌ನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ರೋಗಲಕ್ಷಣವಿಲ್ಲದ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸುವ ಅಗತ್ಯವಿಲ್ಲ ಎಂದು ಆಯುಕ್ತರು ಹೇಳಿದರು.

ಆರೋಗ್ಯ ಸಚಿವ ರಾಜೇಶ್‌ ಟೋಪೆ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಅಮಿತ್‌ ದೇಶ್ಮುಖ್‌ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.