ಮಹಾಲಕ್ಷ್ಮೀ, ಚರ್ನಿರೋಡ್ ರೈಲ್ವೇ ನಿಲ್ದಾಣಗಳ ನವೀಕರಣ


Team Udayavani, May 29, 2021, 1:23 PM IST

Renovation of Railway Stations

ಮುಂಬಯಿ: ಪಶ್ಚಿಮ ರೈಲ್ವೇಯ ಐತಿಹಾಸಿಕ ನಿಲ್ದಾಣಗಳಾಗಿರುವ ಮಹಾಲಕ್ಷ್ಮೀ ಮತ್ತು ಚರ್ನಿರೋಡ್‌ ನಿಲ್ದಾಣಗಳನ್ನು ನವೀಕರಣಗೊಳಿಸುವ ಯೋಜನೆಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಗುತ್ತಿಗೆ ದಾರರನ್ನು ನೇಮಿಸಲಾಗಿದೆ. ಕಾಮಗಾರಿ ಆರಂಭಗೊಂಡಿದ್ದು, ಕೆಲವು ಪೂರ್ಣಗೊಂಡಿವೆ.

ಈ ಯೋಜನೆಯಲ್ಲಿ ನಿಲ್ದಾಣದ ಕಟ್ಟಡ ನವೀಕರಣ ಮತ್ತು ಪ್ರಯಾಣಿಕರಿಗೆ ಇತರ ಸೌಲಭ್ಯಗಳು ಸೇರಿವೆ. ಕೊರೊನಾ ಸೋಂಕಿನ ಕಟ್ಟುನಿಟ್ಟಾದ ನಿರ್ಬಂಧಗಳಿಂದಾಗಿ ಎರಡೂ ನಿಲ್ದಾಣಗಳ ನವೀಕರಣ ಕಾರ್ಯ ಪ್ರಸ್ತುತ ಸ್ಥಗಿತಗೊಳಿಸಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಮತ್ತೆ ಪ್ರಾರಂಭವಾಗಲಿದೆ ಎಂದು ಪಶ್ಚಿಮ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ವಿವಿಧ ಸೌಲಭ್ಯಗಳು

ಈ ಹಿಂದೆ ಮುಂಬಯಿಯ ಐಐಟಿ ತಜ್ಞರ ತಂಡ ಮಹಾಲಕ್ಷ್ಮೀ ರೈಲು ನಿಲ್ದಾಣವನ್ನು ಪರಿಶೀಲಿಸಿ ಎತ್ತರದ ನಿಲ್ದಾಣದ ಕಟ್ಟಡ ಅಪಾಯಕಾರಿ ಎಂದು  ವರದಿಯಲ್ಲಿ  ಉಲ್ಲೇಖೀಸಿದೆ. ಕಟ್ಟಡವು ಟಿಕೆಟ್‌ ವಿಂಡೋ ಸೌಲಭ್ಯವನ್ನು ಹೊಂದಿದ್ದು, ಪ್ರಯಾಣಿಕರು ಅದೇ ಎತ್ತರದ ಕಟ್ಟಡದಿಂದ ನಿಲ್ದಾಣವನ್ನು ಪ್ರವೇಶಿಸುತ್ತಾರೆ. ಮುಂಬಯಿಯ ಐಐಟಿ ವರದಿ ಸಲ್ಲಿಸಿದ ಬಳಿಕ ಪಶ್ಚಿಮ ರೈಲ್ವೇ ಎತ್ತರದ ನಿಲ್ದಾಣದ ಕಟ್ಟಡವನ್ನು ನವೀಕರಿಸಲು ನಿರ್ಧರಿಸಿದ್ದು, ಅಲ್ಲಿನ ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ಮುಂದಾಗಿದೆ.

ಈ ನಿಲ್ದಾಣದ ಜತೆಗೆ ಚರ್ನಿರೋಡ್‌ ನಿಲ್ದಾಣವೂ ನವೀಕರಣಗೊಳ್ಳಲಿದೆ. ಈ ನಿಲ್ದಾಣದಲ್ಲಿನ ಕಟ್ಟಡವು ಹೊಸ ಟಿಕೆಟ್‌ ವಿಂಡೋ ಸೌಲಭ್ಯ, ಎಟಿವಿಎಂಗೆ ಪ್ರತ್ಯೇಕ ಸೇವೆ, ಸ್ಟೇಷನ್‌ ಮಾಸ್ಟರ್ಸ್‌ ಕಚೇರಿ, ಮುಖ್ಯ ನಿಲ್ದಾಣ ಅಧೀಕ್ಷಕರ ಕಚೇರಿಯೊಂದಿಗೆ ನಿರ್ಮಾಣಗೊಳ್ಳಲಿದೆ. ಮಹಾಲಕ್ಷ್ಮೀ ನಿಲ್ದಾಣಕ್ಕೆ 3.32 ಕೋಟಿ ರೂ. ಮತ್ತು ಚರ್ನಿರೋಡ್‌ ನಿಲ್ದಾಣಕ್ಕೆ 2.51 ಕೋಟಿ ರೂ. ಗಳನ್ನು ಈಗಾಗಲೇ ಮೀಸಲಿಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಿಲ್ದಾಣಗಳಲ್ಲಿ  ಕಾಮಗಾರಿಗಳು ಪ್ರಾರಂಭ ವಾಗಿವೆ. ಮಹಾಲಕ್ಷ್ಮೀ ನಿಲ್ದಾಣದಲ್ಲಿನ ಹಳೆಯ ಟಿಕೆಟ್‌ ಕಿಟಕಿಗಳನ್ನು ನೆಲಸಮ ಮಾಡಲಾಗಿದ್ದು, ಅದರ ಸ್ಥಳದಲ್ಲಿ ಹೊಸ ಟಿಕೆಟ್‌ ಕಿಟಕಿಗಳನ್ನು ಸ್ಥಾಪಿಸಲಾಗಿದೆ. ಈ ಟಿಕೆಟ್‌ ಕಿಟಕಿಗಳಲ್ಲಿ ಒಳಾಂಗಣ ಅಲಂಕಾರ ಮತ್ತು ಇತರ ಕೆಲಸ

ಗಳನ್ನು ಮಾಡಲಾಗುತ್ತಿದೆ. ಇದಲ್ಲದೆ ಕಟ್ಟಡದ ಒಳಗೆ ಮತ್ತು ಹೊರಗೆ ಸಿಮೆಂಟ್‌ ಲೇಪನ ಮತ್ತು ಚಿತ್ರಕಲೆ ಕೂಡ ಪೂರ್ಣಗೊಂಡಿದೆ. ಚರ್ನಿರೋಡ್‌ ನಿಲ್ದಾಣದಲ್ಲಿ ಇದೇ ರೀತಿಯ ಇತರ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಆದರೆ ಪ್ರಯಾಣಿಕರ ಸೌಲಭ್ಯಗಳ ಕೆಲಸ ಬಾಕಿ ಉಳಿದಿದೆ.

ಈ ಎರಡು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸಾಕಷ್ಟು ಮತ್ತು ವಿಶಾಲವಾದ ಸ್ಥಳವನ್ನು ಒದಗಿಸಲಾಗುತ್ತಿದ್ದು, ಈಗಾಗಲೇ ಕೆಲಸ ಪ್ರಾರಂಭವಾಗಿದೆ. ಪ್ರವೇಶದ್ವಾರ, ಕಟ್ಟಡದಲ್ಲಿನ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಟಿಕೆಟ್‌ ಕಿಟಕಿಗಳು, ಎಟಿವಿಗಳು ಇತ್ಯಾದಿಗಳನ್ನು ವಿಸ್ತರಿಸುವುದು ಇವುಗಳಲ್ಲಿ ಸೇರಿವೆ. ಒಂದು ವರ್ಷದೊಳಗೆ ಕೆಲಸವನ್ನು ಪೂರ್ಣಗೊಳಿಸುವುದು ಗುರಿಯಾಗಿತ್ತು, ಆದರೆ ಕೊರೊನಾ ಲಾಕ್‌ಡೌನ್‌ನಿಂದಾಗಿ ಪ್ರಸ್ತುತ ಕಾಮಗಾರಿ ಸ್ಥಗಿತಗೊಂಡಿದ್ದು, ಮಳೆಗಾಲದಲ್ಲೂ ಅನೇಕ ಕಾಮಗಾರಿಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.