ಚಂದ್ರಹಾಸ ಸುವರ್ಣರ ಗಗ್ಗರ ಕೃತಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Team Udayavani, Jul 8, 2018, 4:47 PM IST
ಮುಂಬಯಿ: ಪರಮಪೂಜ್ಯ ಶ್ರೀ ಗುರುದೇವಾ ನಂದ ಸ್ವಾಮೀಜಿ ಅವರ ಆಶೀರ್ವಚ ನದೊಂದಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದ ಸಿರಿಚಾವಡಿಯಲ್ಲಿ ಜೂ. 30 ರಂದು ಅಪರಾಹ್ನ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರಧಾನ ಹಾಗೂ ಕೃತಿ ಬಹುಮಾನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರಗಿತು.
ಈ ಸಮಾರಂಭದಲ್ಲಿ ಕಥಾ ವಿಭಾಗದಲ್ಲಿ 2017ರ ಕೃತಿ ಬಹುಮಾನಕ್ಕೆ ಆಯ್ಕೆಯಾಗಿರುವ ಗಗ್ಗರ ಕೃತಿಕರ್ತ ಕವಿ, ಸಾಹಿತಿ, ನಾಟಕಗಾರ ಶಿಮಂತೂರು ಚಂದ್ರಹಾಸ ಸುವರ್ಣರನ್ನು ಅಕಾಡೆಮಿಯ ಅಧ್ಯಕ್ಷರಾದ ಎ. ಸಿ. ಭಂಡಾರಿ, ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಹಾಗೂ ಸರ್ವ ಸದಸ್ಯರುಗಳ ಉಪಸ್ಥಿತಿಯಲ್ಲಿ ಮಂಗಳೂರಿನ ಮಹಾನಗರ ಪಾಲಿಕೆಯ ಮಹಾಪೌರರಾದ ಕೆ. ಭಾಸ್ಕರ ಮತ್ತು ಮಹಾನಗರ ಪಾಲಿಕೆಯ ತೆರಿಗೆ ನಿರ್ಧರಣೆ ವಿಭಾಗದ ಅಧ್ಯಕ್ಷ ಶ್ರೀರಾಧಾಕೃಷ್ಣ, ಶಾಸಕ ಕೆ. ಹರೀಶ್ ಕುಮಾರ್ ಇವರ ಉಪಸ್ಥಿತಿಯಲ್ಲಿ ಗಣ್ಯಾಥಿ-ಗಣ್ಯರು, ಸಾಹಿತಿಗಳ ಸಮ್ಮುಖದಲ್ಲಿ ಕೃತಿಗೌರವ ಪ್ರಶಸ್ತಿ ನೀಡಿ ಸಮ್ಮಾನಿಸಿದರು.
ಕೃತಿಗೌರವ ಸ್ವೀಕರಿಸಿದ ಶಿಮಂತೂರು ಅವರು ಎಲ್ಲರಿಗೂ ಗೌರವ ಆದರಪೂರ್ವಕವಾಗಿ ನಮನ ಸಲ್ಲಿಸಿ, ಈ ಪ್ರಶಸ್ತಿ ತನ್ನ ಜನ್ಮಭೂಮಿ ಶಿಮಂತೂರಿನ ಸಿರಿಮಣ್ಣಿಗೆ ಹಾಗೂ ಕರ್ಮಭೂಮಿ ಮುಂಬಯಿಗೆ ಅರ್ಪಿಸುತ್ತೇನೆ. ನಮ್ಮ ಹುಟ್ಟೂರಿನ ಯಾವುದೆ ದೇವಸ್ಥಾನ-ದೈವಸ್ಥಾನಗಳ ಜೀರ್ಣೋದ್ಧಾರ ಆಗುವಾಗ ಮುಂಬಯಿ ತುಳುವರ ನೆನಪು ಊರಿನವರಿಗೆ ಆಗುತ್ತದೆ. ಆದರೆ ಅಕಾಡೆಮಿಗೆ ಸದಸ್ಯರನ್ನು ಆಯ್ಕೆ ಮಾಡುವಾಗ ಮುಂಬಯಿ ತುಳುವರನ್ನು, ಕವಿ, ಸಾಹಿತಿಗಳನ್ನು ಊರವರು ಮರೆತು ಬಿಡುತ್ತಾರೆ. ಇನ್ನು ಮುಂದಕ್ಕೆ ಆ ರೀತಿ ಆಗಬಾರದು. ಮುಂಬಯಿ ತುಳುವರಿಗೆ, ಕವಿ-ಸಾಹಿತಿಗಳಿಗೆ ಪ್ರಾತಿನಿಧ್ಯ ನೀಡಿ ಸಾಹಿತ್ಯ ಸೇವೆ ಮಾಡುವ ಅವಕಾಶ ಒದಗಿಸಬೇಕು ಎಂದು ವಿನಂತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಯಕ್ಷಧ್ರುವ ಪಟ್ಲ ಫೌಂಡೇಶನ್: 75 ದಿನಗಳ ಯಕ್ಷಯಾನ ಸಮಾರೋಪ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.