ಸಾಯನ್‌ ಬಿಎಸ್‌ಕೆಬಿ ಅಸೋಸಿಯೇಶನ್‌ ಗೋಕುಲದಿಂದ ಚಿಣ್ಣರ ಬೇಸಗೆ ಶಿಬಿರ


Team Udayavani, Jun 21, 2018, 3:49 PM IST

2006mum14.jpg

ಮುಂಬಯಿ: ಬಿಎಸ್‌ಕೆಬಿ ಅಸೋಸಿಯೇಶನ್‌ ಗೋಕುಲದ ಯುವ ವಿಭಾಗದ ವತಿಯಿಂದ  7ರಿಂದ 15 ವರ್ಷದೊಳಗಿನ ಮಕ್ಕಳಿಗಾಗಿ  ಜೂ. 15ರಿಂದ 3 ದಿನಗಳ ಬೇಸಗೆ ಶಿಬಿರವನ್ನು  ನೆರೂಲ್‌ನಲ್ಲಿರುವ ಸಂಸ್ಥೆಯ ಹಿರಿಯ   ನಾಗರಿಕರ ಆಶ್ರಯಧಾಮ ಆಶ್ರಯದಲ್ಲಿ ಆಯೋಜಿಸಲಾಗಿತ್ತು.

ಜೂ. 15 ರಂದು ಸಂಜೆ ಸಂಘದ ಉಪಾಧ್ಯಕ್ಷರಾದ ವಾಮನ್‌ ಹೊಳ್ಳ, ಕಾರ್ಯದರ್ಶಿ ಅನಂತಪದ್ಮನಾಭ ಪೋತಿ, ಹಾಗೂ ಪುಟಾಣಿಗಳು,  ಪದಾಧಿಕಾರಿಗಳು ಹಾಗೂ ಕಾ ರ್ಯಕಾರಿ ಸಮಿತಿಯವರ ಉಪಸ್ಥಿತಿಯಲ್ಲಿ  ದೀಪ ಪ್ರಜ್ವ ಲನೆಯೊಂದಿಗೆ ಶಿಬಿರಕ್ಕೆ ಸಾಂಪ್ರದಾಯಿಕವಾಗಿ  ಚಾಲನೆ ನೀಡಿದರು. ಬಾಲ ಕಲಾವೃಂದದವರಿಂದ  ಪ್ರಾರ್ಥನೆ ನೆರವೇರಿತು.

ಮರುದಿನ ಮುಂಜಾನೆ  ಮಕ್ಕಳಿಂದ ಶ್ಲೋಕ ಪಠಣೆ, ಪ್ರಾರ್ಥನೆಯೊಂದಿಗೆ ಶಿಬಿರದ ಕಾರ್ಯಾಗಾರ ಪ್ರಾರಂಭ ವಾಯಿತು. ಶಿಬಿರದಲ್ಲಿ    ಸಹನಾ ಪೋತಿ ಅವರು ಭಜನೆ, ಪ್ರಶಾಂತ್‌ ಹೆರ್ಲೆ ಅವರು ಆಟೋಟಗಳ ಬಗ್ಗೆ, ಪ್ರೇಮಾ ರಾವ್‌ ಮತ್ತು   ಪ್ರಸಾದ್‌ ನಿಂಜೂರ್‌ ಅವರು ಕನ್ನಡ ಕಲಿಕೆ ಹಾಗೂ   ನೀರಜಾ ಭಟ್‌ ಅವರು ಸಂಸ್ಕೃತ ಕಲಿಕೆ, ಚಂದ್ರಾವತಿಯವರು  ಕಿರು ಪ್ರಹಸನ, ಕೃತಿ ಚಡಗ  ಅವರು ನೃತ್ಯ, ತನ್ವಿ ರಾವ್‌ ಅವರು ಯಕ್ಷಗಾನ,  ರಚಿತಾ ರಾವ್‌ – ಚಟ್‌ ಪಟ್‌  ಚಾಟ್‌  ತಿನಿಸು ತಯಾರಿ, ಶಾಲಿನಿ ಉಡುಪ, ರಶ್ಮಿ ಭಟ್‌ ಮತ್ತು  ಸರೋಜಾ ಸತ್ಯನಾರಾಯಣರವರು  ಕರಕುಶಲ ವಸ್ತುಗಳ ತಯಾರಿಕೆಗಳ ಬಗ್ಗೆ  ಮಕ್ಕಳಿಗೆ ಮಾಹಿತಿ ನೀಡಿದರು.

ಶಿಬಿರದ ಸಮಾರೋಪ ಸಮಾರಂಭವು  ಗೌರವ  ಕೋಶಾಧಿಕಾರಿ ಹಾಗೂ ಯುವ ವಿಭಾಗದ  ಅಧ್ಯಕ್ಷರಾದ  ಹರಿದಾಸ್‌ ಭಟ್‌ ಅವರ  ನಿರೂಪಣೆಯಲ್ಲಿ ನಡೆಯಿತು.    ಕಾರ್ಯದರ್ಶಿ ಎ. ಪಿ. ಕೆ. ಪೋತಿ ಹಾಗೂ ಆಶ್ರಯ ಸಂಚಾಲಕಿ ಚಂದ್ರಾವತಿ ರಾವ್‌ ಮತ್ತು ಕಾರ್ಯಕಾರಿ ಸಮಿತಿಯವರು ಉಪಸ್ಥಿತರಿದ್ದರು.  ಶಿಬಿರದ ಯಶಸ್ಸಿಗೆ ಸಹಕರಿಸಿದ ಶಿಕ್ಷಕ -ಶಿಕ್ಷಕಿಯರನ್ನು, ಕಾರ್ಯಕರ್ತರನ್ನು,   ಪದಾಧಿಕಾರಿಗಳು ಗೌರವಿಸಲಾಯಿತು. 

ಹರಿದಾಸ್‌ ಭಟ್‌ ಅವರು ಶಿಬಿರದಲ್ಲಿ  ಭಾಗವಹಿಸಿದ ಮಕ್ಕಳಿಗೆ ಶುಭ ಹಾರೈಸಿ, ಮುಂದಿನ  ಶಿಬಿರಗಳಲ್ಲಿ  ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು   ಭಾಗವಹಿಸುವಂತಾಗಲಿ ಎಂದು ಆಶಿಸಿದರು. ಶಿಬಿರವನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಯುವ ವಿಭಾಗ ಹಾಗೂ ಮಹಿಳಾ ವಿಭಾಗದ  ಕಾರ್ಯಕರ್ತರನ್ನು ಅಭಿನಂದಿಸಿ ವಂದಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.