
ಸಾಲು ಮರದ ತಿಮ್ಮಕ್ಕ ಅವರಿಗೆ ದೆಹಲಿ ಕರ್ನಾಟಕ ಸಂಘದಿಂದ ಅಭಿನಂದನೆ
Team Udayavani, Mar 19, 2019, 2:04 PM IST

ಮುಂಬಯಿ: ಈ ಬಾರಿ ಪದ್ಮಶ್ರೀ ಪ್ರಶಸ್ತಿ ಪಡೆದ ಪರಿಸರವಾದಿ ಕರ್ನಾಟಕದ ಹೆಮ್ಮೆಯ ಶ್ರೀಮತಿ ಸಾಲು ಮರದ ತಿಮ್ಮಕ್ಕ ಅವರಿಗೆ ದೆಹಲಿ ಕರ್ನಾಟಕ ಸಂಘ ಅಭಿನಂದಿಸಿದೆ. ಮಾ. 17ರಂದು ನಡೆದ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಡಾ| ವೆಂಕಟಾಚಲ ಹೆಗಡೆ ಅವರು ಶಾಲು ಹೊದೆಸಿ, ಪುಷ್ಪಗುತ್ಛ ಮತ್ತು ಸ್ಮರಣಿಕೆಯನ್ನಿತ್ತು ಅಭಿನಂದಿಸಿದರು.
ಡಾ| ವೆಂಕಟಾಚಲ ಹೆಗಡೆ ಅವರು ಮಾತನಾಡಿ, ತಿಮ್ಮಕ್ಕನವರ ಸಾಧನೆ ಸ್ಫೂರ್ತಿದಾಯಕವಾಗಿದೆ. ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಅವರ ಕೆಲಸ ಆದರ್ಶಮಯ. ಅವರಿಂದ ಕಲಿಯುವಂಥದ್ದು ಬಹಳಷ್ಟಿದೆ. ಅವರು ಅನುಸರಿಸಿದ ಮಾರ್ಗವನ್ನು ಇಂದಿನ ಯುವ ಪೀಳಿಗೆ ಅನುಸರಿದಾಗ ಪರಿಸರ ಉಳಿಯಲು ಸಾಧ್ಯವಿದೆ. ಪರಿಸರ ಸಂರಕ್ಷಣೆಗೆ ನಮಗೆ ಅವರು ಪ್ರೇರಣೆಯಾಗಿದ್ದಾರೆ ಎಂದು ನುಡಿದು ಅಭಿನಂದಿಸಿದರು.
ಅಭಿನಂದನೆ ಸ್ವೀಕರಿಸಿ ಮಾತ ನಾಡಿದ ಸಾಲು ಮರದ ತಿಮ್ಮಕ್ಕ ಅವರು, ದೆಹಲಿ ಕರ್ನಾಟಕ ಸಂಘದಲ್ಲಿ ಹಿಂದೆಯೂ ಪ್ರಶಸ್ತಿ ಪಡೆದ ಖುಷಿಯ ಅನುಭವವಿದೆ. ನಿಮ್ಮ ಪ್ರೀತಿಗೆ ನನ್ನ ಕೃತಜ್ಞತೆಗಳು ಎಂದು ಹೇಳಿದರು.
ಸ್ನೇಹಾ ದೆಹಲಿ ಕನ್ನಡ ಲೇಡೀಸ್ ಅಸೋಸಿಯೇಶನ್ ವತಿಯಿಂದ ತಿಮ್ಮಕ್ಕನವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು. ದೆಹಲಿಯ ಕೃಕ್ ಸರ್ವೋದಯ ಫೌಂಡೇಷನ್ನ ಪಿ. ಸಿ. ಶ್ರೀನಿವಾಸ ಮತ್ತು ಸ್ನೇಹಾ ದೆಹಲಿ ಕನ್ನಡ ಲೇಡೀಸ್ ಅಸೋಸಿಯೇಶನ್ ಪರವಾಗಿ ಮಮತಾ ಗಿರಿಯಪ್ಪ ಅವರು ತಿಮ್ಮಕ್ಕನವರನ್ನು ಅಭಿನಂದಿಸಿ ಮಾತನಾಡಿದರು.
ಆರಂಭದಲ್ಲಿ ಸಾಲು ಮರದ ತಿಮ್ಮಕ್ಕ ಅವರು ದೆಹಲಿ ಕರ್ನಾಟಕ ಸಂಘದ ಆವರಣದಲ್ಲಿ ಸಸಿಯನ್ನು ನೆಟ್ಟು ಶುಭ ಹಾರೈಸಿದರು. ಪ್ರಧಾನ ಕಾರ್ಯದರ್ಶಿ ಸಿ. ಎಂ. ನಾಗರಾಜ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಡಾ| ಅವನೀಂದ್ರನಾಥ್ ರಾವ್ ಅವರು ವಂದಿಸಿದರು. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.