ಬಿಎಂಸಿಯಿಂದ “ಸೇವ್‌ ಲೈವ್ಸ್‌’ ಯೋಜನೆ


Team Udayavani, Jul 3, 2020, 5:40 PM IST

ಬಿಎಂಸಿಯಿಂದ “ಸೇವ್‌ ಲೈವ್ಸ್‌’ ಯೋಜನೆ

ಮುಂಬಯಿ, ಜು. 2: ಕೋವಿಡ್ ಸೋಂಕಿನ ಹಿನ್ನೆಲೆ ನಗರದಲ್ಲಿ ಹೆಚ್ಚುತ್ತಿರುವ ಸಾವಿನ ಪ್ರಕರಣಗಳನ್ನು ಕಡಿಮೆ ಮಾಡಲು ಮುಂಬಯಿ ಮನಪಾ “ಸೇವ್‌ ಲೈವ್ಸ್‌’ ಎಂಬ ಯೋಜನೆಯನ್ನು ರೂಪಿಸಿದೆ.

ಕೋವಿಡ್ ಹಿನ್ನೆಲೆ ಮುಂಬಯಿಯ ಸಾವಿನ ಪ್ರಮಾಣ ಜೂನ್‌ 30ರ ವೇಳೆಗೆ ಶೇ. 5.86ರಷ್ಟಿದೆ. ರಾಜ್ಯದ ಸರಾಸರಿ ಸಾವಿನ ಪ್ರಮಾಣ ಶೇ. 4.49ರಷ್ಟಿದ್ದು, ಇದು ದೇಶದ ಸರಾಸರಿ ಸಾವಿನ ಪ್ರಮಾಣ ಶೇ. 2.9ಕ್ಕಿಂತ ಅಧಿಕವಿದೆ ಎಂದು ಮಹಾರಾಷ್ಟ್ರ ಸರಕಾರದ ವೈದ್ಯಕೀಯ ಶಿಕ್ಷಣ ಮತ್ತು ಔಷಧ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸೇವ್‌ ಲೈವ್ಸ್‌ ಕಾರ್ಯತಂತ್ರವು ತೀವ್ರ ಸೋಂಕಿತರ ಮೇಲೆ ಹೆಚ್ಚಿನ ಮೇಲ್ವಿಚಾರಣೆಯನ್ನು ಮಾಡುತ್ತದೆ. ಇದರಲ್ಲಿ ಘಟಕದ ಮುಖ್ಯಸ್ಥ ಮತ್ತು ಆಸ್ಪತ್ರೆಯ ಮುಖ್ಯಸ್ಥರ ವೀಡಿಯೋ ಕಣ್ಗಾವಲೂ ಸೇರಿದೆ. ಕೋವಿಡ್‌ -19 ಸಾವಿನ ಪ್ರಕರಣಗಳಲ್ಲಿ ಲೆಕ್ಕಪರಿಶೋಧನೆ ನಡೆಯಲಿರುವುದಲ್ಲದೆ ಕಾರಣಗಳನ್ನು ನಿರ್ಧರಿಸಲು ವೀಡಿಯೋ ತುಣುಕನ್ನು ವಿಧಿವಿಜ್ಞಾನವಾಗಿ ಪರಿಶೀಲಿಸುತ್ತದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಾಗಿ ಮಧ್ಯಾಹ್ನ 1ರಿಂದ ಸಂಜೆ 5ರ ವರೆಗೆ ಹಲವಾರು ಸಾವುಗಳು ಸಂಭವಿಸಿವೆ ಎಂದು ಬಿಎಂಸಿ ಗಮನಿಸಿದೆ. ತೀವ್ರ ಸೋಂಕಿತರಿಗೆ ಆಮ್ಲಜನಕದ ಬೆಂಬಲದ ಸಂಪರ್ಕವನ್ನು ಕಡಿತಗೊಳಿಸಿದಾಗ ಮತ್ತು ಶೌಚಾಲಯಕ್ಕೆ ಹೋಗಲು ಬಿಟ್ಟಾಗ ಕುಸಿದು ಬಿದ್ದು ಸಾವನ್ನಪ್ಪಿದ ಪ್ರಕರಣಗಳು ಹೆಚ್ಚಿವೆ ಎಂದು ತಿಳಿಸಿದೆ.

ಸೇವ್‌ ಲೈವ್ಸ್‌ ಕಾರ್ಯತಂತ್ರದ ಭಾಗವಾಗಿ, ಮುಂಬಯಿ ಮಹಾನಗರ ಪಾಲಿಕೆಯು ಪ್ರತಿ ಹಾಸಿಗೆಗೆ ಒಂದು ಬೆಡ್‌ಪಾನ್‌ ಮತ್ತು ಹತ್ತಿರದ ಪ್ರತಿ ನಾಲ್ಕು ಹಾಸಿಗೆಗಳಿಗೆ ಒಂದು ಕಮೋಡ್‌ ಅನ್ನು ಇಡಲು ನಿರ್ಧರಿಸಿದೆ. ರಾತ್ರಿಯ ಸಮಯದಲ್ಲಿ ಶೌಚಾಲಯವನ್ನು ಬಳಸಲು ಬಯಸುವ ರೋಗಿಗಳೊಂದಿಗೆ ಸಹಕರಿಸುವಂತೆ ಎಲ್ಲ ಆರೋಗ್ಯ ಸಿಬಂದಿಗೆ ಸೂಚನೆ ನೀಡಲಾಗಿದೆ. ಔಷಧಿಗಳು, ಡೋಸೇಜ್, ಸಮಯ, ಆಹಾರ, ಇತ್ಯಾದಿಗಳಿಂದ ಆರೋಗ್ಯ ಸಿಬಂದಿ ಪ್ರತಿ ರೋಗಿಗೆ ವೈಯಕ್ತಿಕವಾಗಿ ಚೆಕ್‌ ಬಾಕ್ಸ್ ಗಳ ಮೂಲಕ ಸರಿಯಾದ ಪ್ರೋಟೋಕಾಲ್‌ ಅನ್ನು ನಿರ್ವಹಿಸಬೇಕು. ಸಂಬಂಧಪಟ್ಟ ರೋಗಿಯ ಚಿಕಿತ್ಸೆಯನ್ನು ನವೀಕರಿಸಬೇಕು ಎಂದು ಬಿಎಂಸಿ ಆದೇಶಿಸಿದೆ.

ಏಪ್ರಿಲ್‌ ಮಧ್ಯದಲ್ಲಿ ಮಹಾರಾಷ್ಟ್ರ ಸರಕಾರವು 9 ವೈದ್ಯರ ಕಾರ್ಯಪಡೆ ಸ್ಥಾಪಿಸಿ ರಾಜ್ಯದಲ್ಲಿ ಹೆಚ್ಚಿನ ಮಾರಣಾಂತಿಕ ಕಾರಣ ಗಳನ್ನು ಪರೀಕ್ಷಿಸಲು ಮತ್ತು ಅದನ್ನು ಕಡಿಮೆ ಮಾಡಲು ಕ್ರಮಗಳನ್ನು ಸೂಚಿಸಿದೆ. ಆ ಸಮಯದಲ್ಲಿ ರಾಜ್ಯದಲ್ಲಿ ಸಾವಿನ ಪ್ರಮಾಣ ಶೇ. 6 ಅನ್ನು ದಾಟಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.