ಹಿರಿಯ ಪತ್ರಕರ್ತ ಎಲ್‌.ಎಸ್‌.ಶಾಸ್ತ್ರೀ ಅವರಿಗೆ ಕರ್ಕಿ ಪ್ರಶಸ್ತಿ


Team Udayavani, Jun 16, 2017, 3:43 PM IST

13-L-S-Shastri.jpg

ಮುಂಬಯಿ: ಹವ್ಯಕ ವೆಲ್ಫೇರ್‌ ಅಸೋಸಿಯೇಶನ್‌ ಟ್ರಸ್ಟ್‌ ಮುಂಬಯಿ ಇದರ 2017ನೇ ಸಾಲಿನ ಪ್ರತಿಷ್ಠಿತ ಕರ್ಕಿ ವೆಂಕಟರಮಣ ಶಾಸ್ತ್ರೀ ಸೂರಿ ಪ್ರಶಸ್ತಿಗೆ ಎಲ್‌. ಎಸ್‌. ಶಾಸ್ತ್ರೀ ಅವರು ಆಯ್ಕೆಯಾಗಿದ್ದಾರೆ.

ಕಳೆದ ಐದು ದಶಕಗಳಿಂದ ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿರುವ ಶ್ರೀ ಲಕ್ಷ್ಮೀ ನಾರಾಯಣ ಶಂಭು ಶಾಸ್ತ್ರೀ ಅವರು ಬಹುಮುಖ ಪ್ರತಿಭೆ. ಹಿಂದೂಸ್ತಾನಿ ಸಂಗೀತವನ್ನು ಅಭ್ಯಸಿಸಿ, ಗಾಯಕರಾಗಿ ಜನಮನಸೂರೆಗೊಂಡಿದ್ದಾರೆ. ಅನೇಕ ಸಂಘಟನೆಗಳನ್ನು ಕಟ್ಟುವ ಮೂಲಕ ಸಭೆ, ಸಮಾರಂಭ‌ಗಳನ್ನು ಆಯೋಜಿಸಿದ ಚತುರ ಸಂಘಟನಕಾರರು. ಗಮಕವಾಚನ, ಆಕಾಶವಾಣಿ ಕಾರ್ಯಕ್ರಮ, ಯಕ್ಷಗಾನ ಪ್ರದರ್ಶನ, ನಾಟಕಗಳಲ್ಲಿ ಅಭಿನಯ, ಸಂಗೀತ ನೃತ್ಯ ತರಬೇತಿ ಶಾಲೆ ಸ್ಥಾಪನೆ ಇತ್ಯಾದಿ ಹಲವಾರು ಕ್ಷೇತ್ರಗಳಲ್ಲಿ ಹೆಸರಾದ ಶಾಸ್ತ್ರೀ ಅವರು ಸದಾ ಚಟುವಟಿಕೆಯಲ್ಲಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶ್ರೀ ಶಾಸ್ತ್ರೀಯವರು ಹುಟ್ಟಿದ ಊರಿನಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪೂರೈಸಿ, 1962ರಲ್ಲಿ ಜ. 26 ರಂದು ಪತ್ರಿಕಾರಂಗಕ್ಕೆ ಪಾದಾರ್ಪಣೆಗೈದರು. ಇವರ ಕಲಾ ಸಾಹಿತ್ಯಕ ಪತ್ರಿಕೆಯಾದ ಶೃಂಗಾರ ಸಾಹಿತಿ ಡಾ|. ದ. ರಾ. ಬೇಂದ್ರೆ ಅವರಿಂದ ಬಿಡುಗಡೆಯಾಗಿದೆ. ಶಾಸ್ತಿÅà ಅವರು ಕನ್ನಡ ಪ್ರಭಾ ಪತ್ರಿಕೆಯಲ್ಲಿ ಹಿರಿಯ ಉಪಸಂಪಾದಕರಾಗಿ, ಸಂಯುಕ್ತ ಕರ್ನಾಟಕನ ವರದಿಗಾರರಾಗಿ, ಜನತಾ ವಾರಪತ್ರಿಕೆ, ನಾಡೋಜ ದಿನಪತ್ರಿಕೆಗಳಲ್ಲಿ ಸಂಪಾದಕರಾಗಿ, ವಿಶ್ವವಾಣಿ, ಪ್ರಪಂಚದಲ್ಲಿ ಉಪ ಸಂಪಾದಕರಾಗಿ ಸಕ್ರಿಯವಾಗಿ ಕೆಲಸ ಮಾಡಿದ್ದಲ್ಲದೆ, ಇನ್ನೂ ಹಲವಾರು ಮಾಸಿಕ, ದೈನಿಕಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ, ಹಿಂದಿ, ಮರಾಠಿ, ಸಂಸ್ಕೃತ, ಇಂಗ್ಲಿಷ್‌ ಮತ್ತು ಕೊಂಕಣಿ ಭಾಷೆಗಳನ್ನು ಬಲ್ಲ ಅವರಿಗೆ ಎಲ್ಲಾ ಮೂಲಗಳಿಂದ ಮಾಹಿತಿಗಳನ್ನು ಸಂಗ್ರಹಿಸಿ ವರದಿ ಮಾಡಲು ಇವರ ಭಾಷಾ ಜ್ಞಾನವೂ ನೆರವಾಯಿತು.

ರಾಜ್ಯ ಪತ್ರಕರ್ತರ   22 ನೇ ಸಾಹಿತ್ಯ ಸಮ್ಮೇಳನವನ್ನು ಬೆಳಗಾವಿಯಲ್ಲಿ ಸಂಘಟಿಸಿದ ಇವರು ಪತ್ರಿಕಾ ತರಬೇತಿ ಶಿಬಿರಗಳನ್ನು ಕೂಡ ಆಯೋಜಿಸಿದ್ದಾರೆ. ಹಲವು ಯುವ ಉದಯೋನ್ಮುಖ ಪತ್ರಕರ್ತರಾಗಿ ಸಲಹೆ, ಮಾರ್ಗದರ್ಶನಗಳನ್ನು ಪ್ರೋತ್ಸಾಹಿಸಿದ್ದಾರೆ. ಜಿಲ್ಲಾ ಸಣ್ಣ ಪತ್ರಿಕೆಗಳ ಸಂಘ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕಗಳನ್ನು ಸ್ಥಾಪಿಸಿ ನೂರಾರು ಕಾರ್ಯಕ್ರಮಗಳನ್ನು ಸಂಘಟಿಸಿ ಗ್ರಾಮೀಣ ಪತ್ರಕರ್ತರಿಗೆ ಪ್ರೋತ್ಸಾಹಿಸುತ್ತಿದ್ದಾರೆ. ಬೆಂಗಳೂರು, ಮೌಂಟ್‌ ಅಬು, ಬೆಳಗಾವಿ, ಧಾರವಾಡ, ಹುಬ್ಬಳ್ಳಿ ಹೀಗೆ ಹಲವೆಡೆ ಮಾಧ್ಯಮಗೋಷ್ಠಿಗಳಲ್ಲಿ ಉಪನ್ಯಾಸ, ಪ್ರಬಂಧಗಳನ್ನು ಮಂಡಿಸಿದ್ದಾರೆ.

ವೃತ್ತಿಯಲ್ಲಿ ಪತ್ರಿಕೋದ್ಯಮಿಯಾದ ಇವರು ಸಾಹಿತ್ಯ, ಸಂಗೀತ, ಗಮಕ, ನಾಟಕ, ಯಕ್ಷಗಾನವನ್ನು ತಮ್ಮ ಪ್ರವೃತ್ತಿಯನ್ನಾಗಿಸಿಕೊಂಡವರು. ಸೃಜನಶೀಲ ಲೇಖಕರಾದ ಇವರ ಕತೆ, ಕವನ, ಹರಟೆ, ಲಲಿತ ಪ್ರಬಂಧ, ಚುಟುಕು, ಜೀವನ ಚರಿತ್ರೆ, ಯಕ್ಷಗಾನ, ಇತಿಹಾಸ, ವೈದ್ಯಕೀಯ, ಮಕ್ಕಳ ಸಾಹಿತ್ಯ, ಶರಣರ ಸಾಹಿತ್ಯ ಹೀಗೆ ವೈವಿಧ್ಯಮಯ ವಿಷಯಗಳಲ್ಲಿ 42ಕ್ಕೂ ಹೆಚ್ಚು ಕೃತಿಗಳು ಬೆಳಕು ಕಂಡಿವೆ. 150ಕ್ಕೂ ಅಧಿಕ ಸಂಪಾದಿತ ಸ್ಮರಣ ಸಂಚಿಕೆಗಳು, ಅಭಿನಂದನ ಗ್ರಂಥಗಳು, ವಿಶೇಷಾಂಕಗಳು ಪ್ರಕಟವಾಗಿದೆ.

15ಕ್ಕೂ ಹೆಚ್ಚು ಸಾಹಿತ್ಯಕ ಸಂಘ-ಸಂಸ್ಥೆಗಳನ್ನು ಸ್ಥಾಪಿಸಿದಲ್ಲದೆ ಇಲ್ಲಿಯವರೆಗೆ ಐದು ಸಾವಿರಕ್ಕೂ ಹೆಚ್ಚು ಸಾಹಿತ್ಯಕ ಕಾರ್ಯಕ್ರಮಗಳನ್ನು ಸಂಘಟಿಸಿ ತಮ್ಮ ಸಂಘಟನ ಚಾತುರ್ಯದಿಂದ ಅಸಾಧ್ಯವೆನಿಸುವ ಕೆಲಸಗಳನ್ನು ಮಾಡಿ ತೋರಿಸಿದ್ದಾರೆ. ಯಕ್ಷಗಾನ ಕಲಾವಿದರ ಕುರಿತು ಐದು ಕೃತಿಗಳನ್ನು, 50ಕ್ಕೂ ಅಧಿಕ ಲೇಖನಗಳನ್ನು ರಚಿಸಿದ್ದಾರೆ. ರಾಜ್ಯ ಹಾಗೂ ವಿಭಾಗೀಯ ಮಟ್ಟದ ನಾಟಕ ಸ್ಪರ್ಧೆಗಲ್ಲಿ ಭಾಗವಹಿಸಿ ಮೂರು ಬಾರಿ ಪ್ರಥಮ ಬಹುಮಾನ ಗಳಿಸಿದ್ದಾರೆ. 50ಕ್ಕೂ ಹೆಚ್ಚು ವೃತ್ತಿ ನಾಟಕ ಕಂಪೆನಿಗಳ ಕಲಾವಿದರ ಸಂದರ್ಶನ, ಪರಿಚಯ ಲೇಖನಗಳನ್ನು ರಚಿಸಿದ್ದಾರೆ.

ಸುಮಾರು 200ಕ್ಕೂ ಅಧಿಕ ಸುಗಮ ಸಂಗೀತ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ ಹೆಗ್ಗಳಿಕೆ ಅವರಿಗಿದೆ. ಗೀತ ಗೋವಿಂದ, ಗೀತ ರಾಮಾಯಣ ಮೊದಲಾದವುಗಳಿಗೆ ರಾಗ ಸಂಯೋಜಿಸಿರುವುದಲ್ಲದೆ, ನಾಡಿನ ವಿವಿಧೆಡೆಗಳಲ್ಲಿ 80ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿ ಜನಪ್ರಿಯರಾಗಿದ್ದಾರೆ. ಸಂಗೀತ ಜ್ಞಾನವನ್ನು ಹೊಂದಿರುವ ಅವರು 100ಕ್ಕೂ ಅಧಿಕ ಕಾರ್ಯಕ್ರಮಗಳಲ್ಲಿ ಗಮಕ ವಾಚಿಸಿದ್ದಲ್ಲದೆ, ಗಮಕ ಕಲಾ ಸಮ್ಮೇಳನವನ್ನು ಸಂಯೋಜಿಸಿದ್ದಾರೆ. ಕರ್ನಾಟಕ ಗಮಕ ಕಲಾ ಪರಿಷತ್ತಿನ ಬೆಳಗಾವಿ ಜಿಲ್ಲಾ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.  ಹೀಗೆ ಪತ್ರಿಕೋದ್ಯಮ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ಸದಾ ತೊಡಗಿಸಿಕೊಂಡ ಶಾಸ್ತ್ರೀ ಅವರನ್ನು ಅರಸಿಕೊಂಡು ಬಂದ ಪ್ರಶಸ್ತಿಗಳು ಹಲವಾರು. ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿ, ಜಿ. ಆರ್‌. ಪಾಂಡೇಶ್ವರ ಪತ್ರಿಕಾ ಪ್ರಶಸ್ತಿ, ಕುಮಾರವ್ಯಾಸ ಪ್ರಶಸ್ತಿ, ದಿನಕರ ದೇಸಾಯಿ ಚುಟುಕು ಕಾವ್ಯ ಪ್ರಶಸ್ತಿ, ಸೇವಾರತ್ನ ಪ್ರಶಸ್ತಿ ನಾಗನೂರು ಮಠ, ಸಿರಿಗನ್ನಡ ಪ್ರಶಸ್ತಿ, ಕನ್ನಡ ಜ್ಯೋತಿ ಪ್ರಶಸ್ತಿಗಳು ಅವುಗಳಲ್ಲಿ ಮುಖ್ಯವಾಗಿವೆ. ಶಾಸ್ತ್ರೀ ಅವರದ್ದು ಶಿಸ್ತಿನ ನಡೆ, ಶ್ರಮಪೂರ್ಣ ದುಡಿಮೆ, ಜೀವನ ಶೋಧಕ್ಕೆ ಹೊರಟಂತಹ ಮನೋಭಾವ. ನಾಡು-ನುಡಿಗಳ ಅಭಿವೃದ್ಧಿಗೆ ಶ್ರಮಿಸಿದ ಹಿರಿಯ ಧೀಮಂತ ಪತ್ರಿಕೋದ್ಯಮಿಯಾದ  ಲಕ್ಷ್ಮೀನಾರಾಯಣ ಶಾಸ್ತ್ರೀ ಅವರು ಈ ವರ್ಷದ ಕರ್ಕಿವೆಂಕಟರಮಣ ಶಾಸ್ತ್ರೀ ಸೂರಿ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.