ಶಿವಾಚಾರ್ಯ ಮಹಾ ಸ್ವಾಮೀಜಿಯ ಸಂಕಲ್ಪ ಸಿದ್ಧಿ ಉತ್ಸವಕ್ಕೆ ಚಾಲನೆ


Team Udayavani, Apr 20, 2018, 3:45 PM IST

1804mum01.jpg

ಸೊಲ್ಲಾಪುರ: ನಗರದ ಬೃಹನ್ಮಠ ಹೋಟಗಿ ಮಠದ ಪರಮ ಪೂಜ್ಯ ಲಿಂಗೈಕ್ಯ  ಷ. ಬ್ರ. ತಪೋರತ್ನಂ ಯೋಗಿರಾಜೇಂದ್ರ ಶಿವಾಚಾರ್ಯ ಮಹಾ ಸ್ವಾಮೀಜಿಯವರ ಸಂಕಲ್ಪಸಿದ್ಧಿ ಕಾರ್ಯ ಮಹೋತ್ಸವವು ಎ. 17 ರಂದು ಚಾಲನೆಗೊಂಡಿತು.

ಅಂದು ಬೆಳಗ್ಗೆ 7ರಿಂದ ಭವ್ಯ ಮೆರವಣಿಗೆಯ ಮೂಲಕ ಉತ್ಸವವು ಪ್ರಾರಂಭವಾಗಿದ್ದು ಸುಮಾರು 3 ಸಾವಿರ ಸುಮಂಗಲೆಯರು ಜಲ ಕುಂಭದೊಂದಿಗೆ ಪಾಲ್ಗೊಂಡಿದ್ದರು. ಮುಂಜಾನೆ  ಪಂಚಾಚಾರ್ಯ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೌಡಗಾಂವ್‌ನ ಪೂಜ್ಯ ಡಾ|  ಜಯಸಿದ್ಧೇಶ್ವರ ಸ್ವಾಮೀಜಿ, ಚಿಟಗುಪ್ಪದ ಗುರಲಿಂಗ ಶ್ರೀಗಳು, ಮಾಗಣ ಕೇರಿಯ ವಿಶ್ವಾರಾಧ್ಯ ಶ್ರೀಗಳು, ನಾಗಣಸೂರದ ಶ್ರೀಕಂಠ ಶ್ರೀಗಳು, ಮಂದ್ರೂಪದ ರೇಣುಕ ಶ್ರೀಗಳು, ಪಾನಮಂಗಳೂರಿನ ಶಿವಯೋಗಿ ಶ್ರೀಗಳ ಸಾನ್ನಿಧ್ಯದಲ್ಲಿ ಧ್ವಜಾರೋಹಣ ನಡೆಯಿತು.

ಹೋಟಗಿ ಮಠದ ಪೂಜ್ಯ ಡಾ| ಮಲ್ಲಿಕಾರ್ಜುನ ಶಿವಾಚಾರ್ಯ ಮಹಾ ಸ್ವಾಮೀಜಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡ ಮೆರವಣಿಗೆಯಲ್ಲಿ ಮಾಜಿ ಕೇಂದ್ರ ಗೃಹ ಸಚಿವ ಸುಶೀಲ್‌ ಕುಮಾರ್‌ ಶಿಂಧೆ ಅವರು ಶ್ರೀಶೈಲ ಪೀಠದ ಆದ್ಯ ಜಗದ್ಗುರು ಪಂಡಿತಾರಾಧ್ಯ ಭಗವತ್ಪಾದರ ಪ್ರತಿಮೆಗೆ ಪೂಜೆ ಸಲ್ಲಿಸಿ, ಶಿವಲಿಂಗ ಮತ್ತು ಗೋಮಾತೆಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಸಿದ್ಧೇಶ್ವರ ಮಂದಿರದಿಂದ ವೀರತಪಸ್ವಿ ಮಂದಿರದ ವರೆಗೆ 1008 ಶಿವಲಿಂಗ, 1008 ಗೋಮಾತೆ, 1008 ಸುಮಂಗಲೆಯರ ಜಲಕುಂಭ, 1008 ವೀರಶೈವ ಧರ್ಮಗ್ರಂಥ ಸಿದ್ಧಾಂತ ಶಿಖಾಮಣಿ ಗ್ರಂಥೋತ್ಸವದ ಅದ್ದೂರಿ ಮೆರವಣಿಗೆ ನಡೆಯಿತು.

ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿಜಯ ಕುಮಾರ್‌ ದೇಶು¾ಖ್‌, ಶಾಸಕ ಸಿದ್ಧರಾಮ ಮೆØàತ್ರೆ, ಮೇಯರ್‌ ಶೋಭಾ ಬನಶೆಟ್ಟಿ, ಪೊಲೀಸ್‌ ಆಯುಕ್ತ ಮಹಾದೇವ ತಾಂಬಡೆ, ಮಾಜಿ ಶಾಸಕ ಶಿವಶರಣ ಪಾಟೀಲ್‌, ರಾಜಶೇಖರ ಶಿವದಾರೆ, ಕಾಂಗ್ರೆಸ್‌ ಶಹರ ಅಧ್ಯಕ್ಷ ಪ್ರಕಾಶ ವಾಲೆ, ಸೊಲ್ಲಾಪುರ ವಿವಿಯ ಮಾಜಿ ಕುಲಪತಿ ಈರೇಶ ಸ್ವಾಮಿ, ನಗರಸೇವಕ ಶಿವಾನಂದ ಪಾಟೀಲ್‌, ಚೇತನ ನರೂಟೆ, ಡಾ| ಕಿರಣ್‌ ದೇಶು¾ಖ್‌, ನಾಗೇಶ ಬೋಗಡೆ, ಅಮರ ಕೂದಾಲೆ, ನಗರಸೇವಿಕಾ ಅಂಬಿಕಾ ಪಾಟೀಲ್‌, ನರೇಂದ್ರ ಗಂಭೀರೆ, ಕೇದಾರ ಉಂಬರಜೆ, ಸಕಲೇಶ ಚಾಕೋತೆ, ತಮ್ಮಾ ಮಸರೆ, ರಾಜಶೇಖರ  ಹಿರೇಹಬ್ಬು, ವಿರಾಜ ಪಾಟೀಲ್‌ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

ಮೆರವಣಿಗೆ ಮಂದಿರ ತಲು ಪಿದ ಅನಂತರ ಮಧ್ಯಾಹ್ನ  1008 ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನೆರವೇರಿತು. ಮೊದಲಿಗೆ ಮೇಯರ್‌ ಶೋಭಾ ಬನಶೆಟ್ಟಿ ಅವರಿಗೆ ಉಡಿತುಂಬಿಸುವ ಭಾಗ್ಯ ಒಲಿದು ಬಂದಿತ್ತು. ಬೆಳಗ್ಗೆಯಿಂದ ಸಾಯಂಕಾಲದವರೆಗೂ ದರ್ಶನಕ್ಕೆ ಭಕ್ತರ ದಂಡು ಹರಿದು ಬರುತ್ತಿತ್ತು. ಈ ಸಂಕಲ್ಪಸಿದ್ಧಿ ಮಹೋತ್ಸವದಲ್ಲಿ ಮಹಾರಾಷ್ಟ್ರ ಸೇರಿದಂತೆ ಕರ್ನಾಟಕ ಹಾಗೂ ಆಂಧ್ರದ  ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಮೆರವಣಿಗೆ ಮಾರ್ಗದ ರಸ್ತೆ ಯಲ್ಲಿ ಬಣ್ಣ-ಬಣ್ಣದ ರಂಗೋಲಿ ಹಾಕಲಾಗಿತ್ತು.  ಅಲ್ಲಲ್ಲಿ ಮೆರವಣಿಗೆಗೆ ಪುಷ್ಪವೃಷ್ಟಿಗೈಯುವ ಮೂಲಕ ಮೆರವಣಿಗೆಗೆ ಸ್ವಾಗತ ಕೋರಿದರು.  
ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತರಿಗೆ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಹಣ್ಣು ಮತ್ತು ನೀರು ವಿತರಣೆಗೈದರು. 

10 ಕುದುರೆಗಳು, ಎತ್ತಿನ ಬಂಡಿ, ಎರಡು ರಥ, ತೆರೆದ ವಾಹನ ದಲ್ಲಿ ಪರಮಪೂಜ್ಯ ಲಿಂಗೈಕ್ಯ ಷ. ಬ್ರ. ತಪೋರತ್ನಂ ಯೋಗಿ ರಾಜೇಂದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ಅವರ ಮೂರ್ತಿ ಮೆರವಣಿಗೆ ನೆರವೇರಿತು. ಆಳಂದ ಶಾಸಕ ಬಿ. ಆರ್‌. ಪಾಟೀಲ್‌ ಮತ್ತು ಸೋಮನಾಥ ರಗಬಲೆ ಇವರು ಮಹಾಪ್ರಸಾದ ವ್ಯವಸ್ಥೆ ಕಲ್ಪಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

ಕತಾರ್: ಶಿಕ್ಷಕರ ದಿನಾಚರಣೆ- ಶಿಕ್ಷಕರನ್ನು ಸನ್ಮಾನಿಸಿದ ಇಂಡಿಯನ್‌ ಕಲ್ಚರಲ್‌ ಸೆಂಟರ್

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

Dubai Green Planet: ವಿಶ್ವದ ಗಮನ ಸೆಳೆಯುವ ದುಬೈ ಗ್ರೀನ್‌ ಪ್ಲಾನೆಟ್‌ ಬೇಸಗೆ ಶಿಬಿರಾನುಭವ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಮೊಗವೀರ್ಸ್‌ ಬಹ್ರೈನ್‌ ಸಂಘಟನೆ;ವಿದ್ಯುಕ್ತ ಪದಗ್ರಹಣ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

ಹೊನ್ನುಡಿ: ಜೀವನಾನುಭವ ಮುಖ್ಯ-ಭರವಸೆಯೊಂದು ಬಾಳಿನ ಆಶಾಕಿರಣವಿದ್ದಂತೆ…

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

NRI: “ಸತ್ಕುಲ ಪ್ರಸೂತರು’ ಶ್ರೇಣಿಕೃತ ಸಮಾಜದ ಕಥನ-ಕಾದಂಬರಿ ಲೋಕಾರ್ಪಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.