ಪಹೇಲ್ವಾನ್‌ ಚಾಳ್‌ನ ಶ್ರೀ ಶನಿಮಹಾತ್ಮ ಮಂದಿರ ಜೂ. 2 ರಿಂದ ಶನಿಜಯಂತಿ


Team Udayavani, Jun 1, 2019, 1:21 PM IST

1-a-a

ಮುಂಬಯಿ: ಖಾರ್‌ ಪೂರ್ವದ ಸಾಯಿಬಾಬಾ ರಸ್ತೆಯಲ್ಲಿನ ಜವಹಾರ್‌ನಗರ್‌ನ ಪಹೇಲ್ವಾನ್‌ ಚಾಳ್‌ನಲ್ಲಿ ತುಳು ಕನ್ನಡಿಗರ ಆಡಳಿತತ್ವದಲ್ಲಿ ಕಳೆದ ಸುಮಾರು ಐದುವರೆ ದಶಕಗಳಿಂದ ಮುನ್ನಡೆದು ಬಂದಿರುವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯಿಂದ ಸದ್ಯ ಸೇವಾನಿರತ ಸಾಯಿಧಾಮ್‌ ಬಿಲ್ಡಿಂಗ್‌ನಲ್ಲಿ ಜೂ. 2 ರಿಂದ ಶನಿದೇವರ ಜನ್ಮ ದಿನಾಚರಣೆ ಹಾಗೂ ಸಾಮೂಹಿಕ ಶನಿಪೂಜೆ ಮತ್ತು ಶನಿದೇವರ ಸ್ವರ್ಣ ಭಾವಚಿತ್ರ ಪ್ರತಿಷ್ಠಾಪನೆ ನಡೆಯಲಿದೆ.

ಶನೈಶ್ವರ ಜನ್ಮ ದಿನಾಚರಣೆಯ ಅಂಗವಾಗಿ ಅಂದು ಮಂದಿರದಲ್ಲಿ ಪುರೋಹಿತ ಶ್ರೀನಿವಾಸ ಜೋಯಿಸರ ಪೌರೋಹಿತ್ಯದಲ್ಲಿ ಚಿನ್ನದ ಶನಿದೇವರ ಭಾವಚಿತ್ರ, ಜಗನ್ಮಾತೆ, ಗುರು ರಾಘವೇಂದ್ರ ಸ್ವಾಮಿ ಹಾಗೂ

ಮಹಾಗಣಪತಿ ದೇವರ ಬೆಳ್ಳಿಯ ಭಾವಚಿತ್ರವನ್ನು ಪ್ರತಿಷ್ಠಾಪಿಸಲಾಗುವುದು.

ಜೂ. 2 ರಂದು ಬೆಳಗ್ಗೆ 9 ರಿಂದ ತೋರಣ ಮುಹೂರ್ತ, ಪ್ರಾರ್ಥನೆ, ಶನಿಶಾಂತಿ ಪೂಜೆ, ಸಪ್ತಸಿದ್ಧಿ, ವಾಸ್ತು ಪೂಜೆ, ಸಂಜೆ 6 ರಿಂದ ರಾತ್ರಿ 11 ರವರೆಗೆ ರಕ್ಷಹೋಮ, ಅಧಿವಾಸ ಪೂಜೆ ನಡೆಯಲಿದೆ.

ಜೂ. 3ರಂದು ಬೆಳಗ್ಗೆ 4 ರಿಂದ ಗಣಹೋಮ, ಕಲಶ ಪ್ರತಿಷ್ಠೆ ಬಿಂಬ ಪ್ರತಿಷ್ಠೆ ಕಲಶ ಅಭಿಷೇಕ ಹಾಗೂ ಸಮಿತಿಯ ಜತೆ ಕಾರ್ಯದರ್ಶಿ ರಮೇಶ್‌ ಪೂಜಾರಿ ಅವರ ಧರ್ಮಪತ್ನಿ ವನಿತಾ ಪೂಜಾರಿ ಯಜಮಾನಿಕೆಯಲ್ಲಿ ಮಹಾಪೂಜೆ ಜರಗಲಿದೆ.

ಅಪರಾಹ್ನ 4 ರಿಂದ ಶನಿದೇವರ ಜನ್ಮ ದಿನಾಚಣೆಯ ಪರವಾಗಿ ಸಮಿತಿಯ ಉಪಾಧ್ಯಕ್ಷರಾದ ದೇವೇಂದ್ರ ವಿ. ಬಂಗೇರ ಮತ್ತು ತಾರಾ ದೇವೇಂದ್ರ ಬಂಗೇರ ದಂಪತಿಯ ಯಜಮಾನಿಕೆ ಹಾಗೂ ಸಮಿತಿ ಅರ್ಚಕ ನಾಗೇಶ್‌ ಸುವರ್ಣ ಪೌರೋಹಿತ್ಯದಲ್ಲಿ ಕಲಶ ಪ್ರತಿಷ್ಠಾಪನೆ ಜರಗಲಿದೆ. ಸಂಜೆ 5 ರಿಂದ ಭಜನೆ, 7.30 ರಿಂದ ರಾತ್ರಿ 9 ರವರೆಗೆ ಗ್ರಂಥ ಪಾರಾಯಣ, ರಾತ್ರಿ 9 ರಿಂದ ಮಹಾ ಮಂಗಳಾರತಿ, ರಾತ್ರಿ 9.30 ರಿಂದ ತೀರ್ಥಪ್ರಸಾದ ವಿತರಣೆ ಜರಗಲಿದೆ ಎಂದು ಸಮಿತಿಯ ಗೌರವ ಕಾರ್ಯಾಧ್ಯಕ್ಷ ಶ್ರೀಧರ್‌ ಜೆ. ಪೂಜಾರಿ, ಅಧ್ಯಕ್ಷ ಶಂಕರ್‌ ಕೆ. ಸುವರ್ಣ, ಗೌರವ ಪ್ರಧಾನ ಕಾರ್ಯದರ್ಶಿ ಯೋಗೇಶ್‌ ಕೆ. ಹೆಜ್ಮಾಡಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.