ಗ್ರಾಹಕರಿಗೆ ಅಪ್ರತಿಮ ಸೇವೆಯೇ ನಮ್ಮ ಗುರಿ: ಆನಂದ ಬಿ. ಮೂಲ್ಯ


Team Udayavani, Oct 2, 2022, 11:20 AM IST

ಗ್ರಾಹಕರಿಗೆ ಅಪ್ರತಿಮ ಸೇವೆಯೇ ನಮ್ಮ ಗುರಿ: ಆನಂದ ಬಿ. ಮೂಲ್ಯ

ಡೊಂಬಿವಲಿ: ಕಳೆದ 23 ವರ್ಷಗಳಿಂದ ಡೊಂಬಿವಲಿ ಪರಿಸರದ ತುಳು-ಕನ್ನಡಿಗರ ಪ್ರತಿಷ್ಠಿತ ಆರ್ಥಿಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ತುಳುಶ್ರೀ ಕೋ – ಆಪರೇ ಟಿವ್‌ ಸೊಸೈಟಿ ತನ್ನ ಗ್ರಾಹಕರಿಗೆ ಅಪ್ರತಿಮ ಸೇವೆ ಸಲ್ಲಿಸುವ ಮುಖಾಂತರ ಜನಮಾನಸ ದಲ್ಲಿ ಉತ್ತಮ ಸ್ಥಾನ ನಿರ್ಮಿಸಿ ಕೊಂಡಿದೆ. ಮುಂಬರುವ ದಿನಗಳಲ್ಲಿ ಇನ್ನೂ ಉತ್ತಮ ಸೇವೆಯನ್ನು ಗ್ರಾಹಕರಿಗೆ ನೀಡುವ ಗುರಿ ನಮ್ಮ ಸಂಸ್ಥೆಯದ್ದಾಗಿದೆ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಆನಂದ ಬಿ. ಮೂಲ್ಯ ಹೇಳಿದರು.

ಡೊಂಬಿವಲಿ ಪೂರ್ವದ ಕೆ. ಡಿ. ಅಗರ್ವಾಲ್‌ ಸಭಾಗೃಹದಲ್ಲಿ ಸೆ. 25ರಂದು ಸಂಜೆ ನಡೆದ ತುಳುಶ್ರೀ ಕೋ – ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ಡೊಂಬಿವಲಿ 23ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಸ್ಥೆಯ ಸಂಸ್ಥಾಪಕ ಸದಸ್ಯರು ಹಾಗೂ ಆಡಳಿತ ಮಂಡಳಿಯ ಉತ್ತಮ ಕಾರ್ಯ ವೈಖರಿ ಹಾಗೂ ಸಿಬಂದಿಯ ಸೇವಾ ತತ್ಪರತೆಯಿಂದ ಸಂಸ್ಥೆ ಉತ್ತಮ ಸಾಧನೆಗೈಯುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ನಮ್ಮೆಲ್ಲರ ಹೆಮ್ಮೆಯ ಈ ಸಂಸ್ಥೆ ರಜತ ಮಹೋತ್ಸವ ಆಚರಿಸಲಿದ್ದು, ಈ ನಿಟ್ಟಿನಲ್ಲಿ ಶೇರು ಬಂಡವಾಳದ ಠೇವಣಿ ಹೆಚ್ಚಿಸುವ ಹಾಗೂ ಸಾಲವನ್ನು ಹೆಚ್ಚಿಸುವ ಗುರಿ ಹೊಂದಿದ್ದೇವೆ. ಸೊಸೈಟಿಯ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮಣ್‌ ಸುವರ್ಣ 22ನೇ ವಾರ್ಷಿಕ ಮಹಾಸಭೆಯ ವಾರ್ಷಿಕ ವರದಿ ಮಂಡಿಸಿ, ಟಿ. ಕೆ. ಪುತ್ರನ್‌ ಅವರ ಸೂಚನೆ ಮತ್ತು ಸಂತೋಷ್‌ ಶೆಟ್ಟಿ ಅವರ ಅನುಮೋದನೆಯೊಂದಿಗೆ ಮಂಜೂರು ಮಾಡಿದರು. 2021 – 22ರ ವಾರ್ಷಿಕ ವರದಿಯನ್ನು ನಾಗೇಶ ಹೊಸ್ಬೇಟಕರ ಅವರ ಸೂಚನೆ, ಲಕ್ಷ್ಮಣ್‌ ಸಿ. ಮೂಲ್ಯ ಅವರ ಅನುಮೋದನೆಯೊಂದಿಗೆ ಮಂಜೂರು ಮಾಡಲಾಯಿತು. 2021-22ನೇ ವಾರ್ಷಿಕ ಆಯವ್ಯಯ ಪಟ್ಟಿಯನ್ನು ಕೋಶಾಧಿಕಾರಿ ನಾರಾಯಣ ಬಿ. ಪೂಜಾರಿ ಮಂಡಿಸಿದರು. ಜಿ. ಎಸ್‌. ನಾಯಕ್‌ ಅವರ ಸೂಚನೆ, ವಸಂತ ಸುವರ್ಣ ಅವರ ಅನುಮೋದನೆಯೊಂದಿಗೆ ಲೆಕ್ಕಪತ್ರವನ್ನು ಮಂಜೂರು ಮಾಡಲಾಯಿತು. 2021-22ನೇ ವರ್ಷದ ಲಾಭಾಂಶದ ವಿಷಯವನ್ನು ಮಂಡಿಸಲಾಯಿತು.

ವಿನೋದಾ ಶೆಟ್ಟಿ ಅವರ ಸೂಚನೆ ಹಾಗೂ ಚಂದ್ರಾ ನಾಯ್ಕ ಅವರ ಅನುಮೋದನೆಯಂತೆ ಶೇ. 6ರಷ್ಟು ಲಾಭಾಂಶವನ್ನು ಶೇರುದಾರರಿಗೆ ಘೋಷಿಸಲಾ ಯಿತು. 2022-23ನೇ ಸಾಲಿನ ಆಂತರಿಕ ಲೆಕ್ಕಪರಿಶೋಧಕರಾಗಿ ಯು. ಪಿ. ಪೈ ಆ್ಯಂಡ್‌ ಕಂಪೆನಿ ಹಾಗೂ ಲೆಕ್ಕಪರಿಶೋಧಕಕರಾಗಿ ಆರ್‌. ಕೆ. ಪಾಟೀಲ್‌ ಅವರನ್ನು ನಾಗೇಶ ಹೊಸ್ಬೇಟಕರ ಅನುಮೋದನೆಯಂತೆ ನೇಮಿಸಲಾಯಿತು. ಸಂಸ್ಥೆಯ ಕಾರ್ಯಾಧ್ಯಕ್ಷ ಆನಂದ ಬಿ. ಮೂಲ್ಯ, ಕಾರ್ಯದರ್ಶಿ ಲಕ್ಷ್ಮಣ್‌ ಸುವರ್ಣ, ಕೋಶಾಧಿಕಾರಿ ನಾರಾಯಣ ಬಿ. ಪೂಜಾರಿ, ಸದಸ್ಯ ಎಂ. ಪಿ. ಪೈ, ದೇವದಾಸ್‌ ಕುಲಾಲ್‌ ಹಾಗೂ ಲೆಕ್ಕಪರಿಶೋಧಕ ಯು. ಪಿ. ಪೈ ಉಪಸ್ಥಿತರಿದ್ದರು. ಸಭೆಯಲ್ಲಿ ಅನೇಕ ಗಣ್ಯರು ಮಾತನಾಡಿ ಸಲಹೆ-ಸೂಚನೆಗ ಳನ್ನು ನೀಡಿದರು.

ದೇವದಾಸ್‌ ಕುಲಾಲ್‌ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮಣ್‌ ಸುವರ್ಣ ವಂದಿಸಿದರು. ಶೇರುದಾರರು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

-ಚಿತ್ರ-ವರದಿ: ಗುರುರಾಜ್‌ ಪೋತನೀಸ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.