ವಸಾಯಿರೋಡ್‌ ಜಿಎಸ್‌ಬಿ ಬಾಲಾಜಿ ಮಂದಿರ:12ನೇ ವರ್ಧಂತ್ಯುತ್ಸವ


Team Udayavani, May 27, 2018, 3:35 PM IST

2605mum05.jpg

ಮುಂಬಯಿ: ವಸಾಯಿರೋಡ್‌ ಪಶ್ಚಿಮದ ಬ್ರಾಹ್ಮಣ (ಜಿಎಸ್‌ಬಿ) ಸಮಾಜದವರ ಬಾಲಾಜಿ ಸೇವಾ ಸಮಿತಿ (ಶ್ರೀ ವೆಂಕಟರಮರಣ ಭಜನ ಮಂಡಳಿ) ಯ ಬಾಲಾಜಿ ಸಭಾಗೃಹ ಮತ್ತು ಪ್ರಾರ್ಥನ ಮಂದಿದ 12 ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಮೇ 24 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ವೆಂಕಟೇಶ್ವರ ವೃತ ಕಾರ್ಯಕ್ರಮವು ನಡೆದಿದ್ದು, ವೇದಮೂರ್ತಿ ಗಿರಿಧರ್‌ ಭಟ್‌ ಅವರ ಮಾರ್ಗದರ್ಶನದಲ್ಲಿ ನಂದಿನಿ ಮತ್ತು ಸಮಿತಿಯ ಸಹ ಕೋಶಾಧಿಕಾರಿ ವಿನಾಯಕ ವಿಠೊಭ ಮಹಾಲೆ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಸಮಿತಿಯವರಿಂದ ಭಜನ ಕಾರ್ಯಕ್ರಮ ಜರಗಿತು. ಮಂಡಳಿಯವರು ಕನ್ನಡ, ಕೊಂಕಣಿ, ಮರಾಠಿ ಮತ್ತು ಹಿಂದಿಯಲ್ಲಿ ವೆಂಕಟೇಶ್ವರನ ಭಜನೆಯನ್ನು ಹಾಡಿದರು.

ಹಾರ್ಮೋನಿಯಂನಲ್ಲಿ ವಿಶ್ವನಾಥ ಪೈ, ಪ್ರಸಾದ್‌ ಪ್ರಭು, ಪ್ರಕಾಶ್‌ ಪ್ರಭು, ತಬಲಾದಲ್ಲಿ ಅಮೇಯ್‌ ಪೈ, ಅವನೀಕಾಂತ್‌ ಬೋರRರ್‌, ಪಖ್ವಾಜ್‌ದಲ್ಲಿ ಗಣೇಶ್‌ ಪೈ, ಅಶೋಕ್‌ ಶಿಂಧೆ ಸಹಕರಿಸಿದರು. 12 ನೇ ಪ್ರತಿಷ್ಠಾ ವರ್ಧಂತಿಯ ಸವಿನೆನಪಿಗಾಗಿ ಶ್ರೀ ಸತ್ಯಮಾರುತಿ ದೇವರ ವಿಗ್ರಹಕ್ಕೆ ಬೆಳ್ಳಿಯ ಪ್ರಭಾವಳಿ ಮತ್ತು ವಿದ್ಯುತ್‌ ಚಾಲಿತ ತೆಂಗಿನ ಕಾಯಿ ತುರಿಯುವ ಯಂತ್ರವನ್ನು ದಾನಿಗಳಾದ ಅಂಧೇರಿ ನಿವಾಸಿ ಜಿ. ಎ. ಪೈ ಪರಿವಾರದಿಂದ ಸಮರ್ಪಿಸಲಾಯಿತು.

ಸ್ಥಳೀಯ ಶಾಂತಿಧಾಮ ಸೇವಾ ಸಮಿತಿಯ ವಿಶ್ವಸ್ತರಾದ ಲಕ್ಷ್ಮೀ ನರಸಿಂಹ ಪ್ರಭು, ವೆಂಕಟೇಶ್ವರ ವೃತದ ಮಹಿಮೆಯ ಬಗ್ಗೆ ವಿಸ್ತರಿಸಿ ಹೇಳಿದರು. 

ಜಿಎಸ್‌ಬಿ ಸಮಾಜದ ವಸಾಯಿ ಉದ್ಯಮಿ ದೀಪಕ್‌ ರಾವ್‌ ದಂಪತಿಯನ್ನು ಸಮಿತಿಯ ಉಪಾಧ್ಯಕ್ಷ  ಕೃಷ್ಣ ಗೋಪಾಲ್‌ ಕಾಮತ್‌ ಅವರ ಹಸ್ತದಿಂದ ಶಾಲು ಹೊದೆಸಿ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ಭಜನಾ ಮಂಡಳಿಗೆ ವಾರಕರಿ ಪದ್ಧತಿಯಲ್ಲಿ ತರಬೇತು ನೀಡಿದ ವಸಾಯಿ ನಿವಾಸಿ, ಪ್ರಸಿದ್ಧ ಗಾಯಕ ವಾಸುದೇವ ಕಾರೇಕರ್‌ ಭುವಾಜಿ ದಂಪತಿಯನ್ನು ಸಮಿತಿಯ ಅಧ್ಯಕ್ಷ ತಾರನಾಥ ಪೈ ಅವರು ಗೌರವಿಸಿದರು. ಸಂಸ್ಥೆಯ ಲೆಕ್ಕ ಪರಿಶೋಧಕ ಅನಿತಾ ಮತ್ತು ವಿಶ್ವನಾಥನ್‌ ಅವರನ್ನು ಸಮಿತಿಯ ಕೋಶಾಧಿಕಾರಿ ವೆಂಕಟ್ರಾಯ ಪ್ರಭು ಗೌರವಿಸಿದರು. ವಸಾಯಿ ಪರಿಸರದ ಜಿಎಸ್‌ಬಿ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಶಾಂತಿಧಾಮ ಸೇವಾ ಸಮಿತಿಯ ವಿಶ್ವಸ್ಥ ನರಸಿಂಹ ಪ್ರಭು, ವೆಂಕಟೇಶ್‌ ಪ್ರಭು, ಉಪೇಂದ್ರ ಆಚಾರ್ಯ, ನಿತ್ಯಾನಂದ ಆಚಾರ್ಯ, ವಿಶ್ವನಾಥ ಕುಡ್ವ, ಪುರುಷೋತ್ತಮ ನಾಯಕ್‌, ಗುರು ಸೇವಾ ಮಂಡಳ ಸಯಾನ್‌ ಕೋಶಾಧಿಕಾರಿ ಕೃಷ್ಣ ಪೈ, ನಗರ ಸೇವಕ ವಿರಾರ್‌ ಗುರುದಾಸ ಕಾಮತ್‌, ಮಾಜಿ ಮೇಯರ್‌ ನಾರಾಯಣ ಮಾನ್ಕರ್‌, ಸಂದೇಶ್‌ ಜಾಧವ್‌, ಕರ್ನಾಟಕ ಸಂಘ ವಸಾಯಿ ಅಧ್ಯಕ್ಷ ಒ. ಪಿ. ಪೂಜಾರಿ, ಉಪಾಧ್ಯಕ್ಷ ಪಾಂಡು ಶೆಟ್ಟಿ ಉಪಸ್ಥಿತರಿದ್ದರು. ಉಪಸ್ಥಿತರಿದ್ದ ಅತಿಥಿಗಳಿಗೆ ಮತ್ತು ವಿವಿಧ ಸಂಸ್ಥೆಯ ಸದಸ್ಯರುಗಳನ್ನು ಪ್ರಸಾದವನ್ನಿತ್ತು ಗೌರವಿಸಲಾಯಿತು. ಮಹಾಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆಯು ಸುಜಾತಾ ಮತ್ತು ಹಾಲಾಡಿ ವೆಂಕಟ್ರಾಯ ಪ್ರಭು ಅವರ ಸೇವಾರ್ಥಕವಾಗಿ ನಡೆಯಿತು.

ಸಮಿತಿಯ ಅಧ್ಯಕ್ಷ ತಾರನಾಥ ಪೈ, ಗೌರವಾಧ್ಯಕ್ಷ ವಸಂತ ನಾಯಕ್‌, ಕಾರ್ಯದರ್ಶಿ ಪುರುಷೋತ್ತಮ ಶೆಣೈ, ಕೋಶಾಧಿಕಾರಿ ವೆಂಕಟ್ರಾಯ ಪ್ರಭು, ಸಂಚಾಲಕ ದೇವೇಂದ್ರ ಭಕ್ತ ಇತರ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು ಮತ್ತು ಎಲ್ಲಾ ಸದಸ್ಯರ ಉಸ್ತುವಾರಿಯಲ್ಲಿ ಧಾರ್ಮಿಕ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ವಿನಾಯಕ ಎಚ್‌. ಪೈ ಅವರ ನೇತೃತ್ವದಲ್ಲಿ, ನಾಗೇಶ್‌ ಪೈ ಅವರು ಅಲಂಕರಿಸಿದ ದೇವರ ಮಂಟಪವು ಭಕ್ತಾದಿಗಳನ್ನು ಆಕರ್ಷಿಸಿತು.

ಟಾಪ್ ನ್ಯೂಸ್

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Kadaba police Station: ದಾಖಲೆ ಕಾಪಿಡುವುದೇ ಇಲ್ಲಿ ಸಾಹಸದ ಕೆಲಸ

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

1

Puttur: ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರ ಶೀಘ್ರ ಸಿದ್ಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.