ವಿಪಿಎಂ ಕನ್ನಡ ಶಾಲೆ ಅಂತರ್‌ ಶಾಲಾ ಪ್ರತಿಭಾ ಸ್ಪರ್ಧೆ 


Team Udayavani, Nov 28, 2017, 4:31 PM IST

25-Mum06b.jpg

ಮುಂಬಯಿ: ಮಾತೃ  ಭಾಷೆಯ ಬಗ್ಗೆ ಅಭಿಮಾನ-ಅನನ್ಯತೆ, ಹಿರಿತನ-ಸಿರಿತನ, ಪ್ರೀತಿ-ವಾತ್ಸಲ್ಯ, ಗೌರವವನ್ನು ಕನ್ನಡಾಭಿಮಾನಿಗಳು ಬೆಳೆಸಿಕೊಂಡು ಬಹುಮುಖದೆಡೆಗೆ ಸಾಗುವುದೇ ಕನ್ನಡಿಗರ ಕರ್ತವ್ಯವಾಗಬೇಕು. ಮಾತೃ ಭಾಷೆಯಿಂದಲೇ ವ್ಯಕ್ತಿತ್ವ ವಿಕಸನದೊಂದಿಗೆ ಸರ್ವಾಂಗೀಣ ವಿಕಾಸ ಎಂಬುದನ್ನು ಮರೆಯಬಾರದು. ಮನುಷ್ಯನಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಧೈರ್ಯ, ಸ್ಥೈರ್ಯ, ಆತ್ಮ ವಿಶ್ವಾಸದಂತಹ ಶಸ್ತ್ರಾಸ್ತ್ರಗಳು ಬೇಕು. ನಮ್ಮಲ್ಲಿರುವ ಪ್ರತಿಭೆಯ ಪ್ರಬುದ್ಧತೆಯನ್ನು ವಿಕಾಸ ಮಾಡಿಕೊಳ್ಳಲು ಗುರು-ಹಿರಿಯರ, ವೇದಿಕೆಗಳ, ಮಾರ್ಗದರ್ಶನದ ಆವಶ್ಯಕತೆಯಿದೆ. ಆತ್ಮಶಕ್ತಿಯನ್ನು ಸದಾ ಮನೋಶಕ್ತಿಯ ಮೂಲಕ ಪರೀಕ್ಷೆಗೆ ಗುರಿಪಡಿಸಿದಾಗ ವಿಚಾರ ಶಕ್ತಿ ಬೆಳೆದು ನಿರರ್ಗಳವಾಗಿ ಬದುಕುವ ಕಲೆ ಕರಗತವಾಗುತ್ತದೆ ಎಂದು ಸಾಹಿತಿ ಡಾ| ಕರುಣಾಕರ ಎನ್‌. ಶೆಟ್ಟಿ ಅವರು ನುಡಿದರು.

ಮುಲುಂಡ್‌ ವಿಪಿಎಂ ಕನ್ನಡ ಶಾಲೆಯಲ್ಲಿ ಇತ್ತೀಚೆಗೆ ನಡೆದ ಅಂತರ್‌ಶಾಲಾ ಪ್ರತಿಭಾಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಸೋಲೇ ಗೆಲುವಿನ ಮೂಲ, ಇಂದು ಭಾಗವಹಿಸು, ಮುಂದೆ ಜಯಶಾಲಿಯಾಗು ಎನ್ನುವ ತತ್ವದಿಂದ ಛಲ, ಉತ್ಸಾಹ, ಉಲ್ಲಾಸಗಳ ಭಾವನೆಯನ್ನು ನಾನ್ಯಾರೆಂಬುದರ ಸ್ವ-ಚಿಂತನೆಗಳು ಬೆಳೆಯುತ್ತವೆ. 

ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ಭಾಷೆಯ, ಮಾತನಾಡುವ, ವಿಷಯ ಪ್ರಸ್ತುತಪಡಿಸುವಿಕೆಯ, ಸ್ಪರ್ಧಾ ಜಗತ್ತಿನ ತಿಳಿವಳಿಕೆಯ, ಸ್ವ-ಸಾಮರ್ಥ್ಯದ ಅರಿವಾಗುತ್ತದೆ ಎಂದು ನುಡಿದು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭ ಹಾರೈಸಿದರು.

ಮಂಡಳದ ಪ್ರಧಾನ ಗೌರವ ಕಾರ್ಯದರ್ಶಿ ಡಾ| ಪಿ. ಎಂ. ಕಾಮತ್‌ ಸಮಾರಂಭದ ಅಧ್ಯಕ್ಷತೆ ವಹಿಸಿ, ಅತಿಥಿ-ಗಣ್ಯರನ್ನು ಗೌರವಿಸಿ ಮಾತನಾಡಿ, ಜೀವನದಲ್ಲಿ ಸರ್ವಾಂಗೀಣ ಅಭಿವೃದ್ಧಿಯಾಗಲು ಹಿಂದೆ ಗುರು-ಮುಂದೆ ಗುರಿ ಇರಬೇಕು. ಶಿಕ್ಷಕರಿಂದಲೇ ಪ್ರತಿಯೊಬ್ಬ ವಿದ್ಯಾರ್ಥಿಯ ಭವ್ಯವಾದ ಭವಿಷ್ಯ ನಿರ್ಮಾಣವಾಗುತ್ತದೆ. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಮನೋಭಾವವನೆಯನ್ನು ಬೆಳೆಸಿಕೊಳ್ಳಬೇಕು. ಹೊರನಾಡಿನಲ್ಲಿ ತಾಯಿ ಭುವನೇಶ್ವರಿಯ ಹೊಂಗಿರಣವನ್ನು ಹೊರಹೊಮ್ಮಿಸಲು ಪ್ರಯತ್ನ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ವಿದ್ಯಾ ಪ್ರಸಾರಕ ಮಂಡಳವು ಮುಂಬಯಿಯ ವಿವಿಧ ನಗರಗಳಿಂದ ಕನ್ನಡ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಿಶೇಷ ಪ್ರಾಧಾನ್ಯತೆ ಮತ್ತು ಎಲ್ಲಾ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡುತ್ತಿದೆ ಎಂದು ನುಡಿದರು.
ಕಾರ್ಯಕ್ರಮವು ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು, ವೇದಿಕೆಯಲ್ಲಿ ಗೌರವ ಕಾರ್ಯದರ್ಶಿ ಬಿ. ಎಚ್‌. ಕಟ್ಟಿ, ಮುಖ್ಯ ಶಿಕ್ಷಕಿ ಸುವಿನಾ ಗಟ್ಟಿ ಮತ್ತು ಅರುಣಾ ಭಟ್‌ ಉಪಸ್ಥಿತರಿದ್ದರು.  ಸಮಾರಂಭದಲ್ಲಿ ಪರಿವೀಕ್ಷಕರು, ಶಿಕ್ಷಕರು, ಶಿಕ್ಷಕೇತರ ಸಿಬಂದಿ, ಪಾಲಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಶಿಕ್ಷಕಿ ಅಶ್ವಿ‌ನಿ ಬಂಗೇರ ಅವರು ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿ ಗೌರಿ ದೇಶಪಾಂಡೆ, ಶಿಕ್ಷಕ ಅಂಬಾಜೇಪ್ಪ  ಕಾಟಗಾಂವ್‌ ಅವರು ತೀರ್ಪುಗಾರರನ್ನು ಪರಿಚಯಿಸಿದರು.

ವಿಜೇತ ವಿದ್ಯಾರ್ಥಿಗಳ ಯಾದಿಯನ್ನು ಶಿಕ್ಷಕಿ ಸುನಿತಾ ಮಠ ಅವರು ಘೋಷಿಸಿದರು. ತೀರ್ಪುಗಾರರಾದ ಗಿರೀಶ್‌ ಸಾರವಾಡ ಮಾತನಾಡಿ ಶುಭ ಹಾರೈಸಿದರು. ಶಿಕ್ಷಕ ಚಂದ್ರಶೇಖರ ಬನ್ನಿಮಠ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.