ಯಕ್ಷಗಾನವು ದೈವತ್ವದ ಸ್ಥಾನಮಾನ ಹೊಂದಿದೆ: ಸಚ್ಚಿದಾನಂದ ಶೆಟ್ಟಿ

ಭಾಯಂದರ್‌ ಶ್ರೀ ಅಯ್ಯಪ್ಪ ಆರಾಧನಾ ವೃಂದ ಮತ್ತು ಆರಾಧನಾ ಫ್ರೆಂಡ್ಸ್‌ನಿಂದ ಸಾಂಸ್ಕೃತಿಕ ಕಾರ್ಯಕ್ರಮ

Team Udayavani, Aug 17, 2019, 1:30 PM IST

mumbai-tdy-3

ಮುಂಬಯಿ, ಆ. 16: ಭಾರತದ ನೆಲದಲ್ಲಿ ಸಿಗುವಷ್ಟು ಪ್ರಾಚೀನ ಜ್ಞಾನ ರಾಶಿ, ಸಂಸ್ಕೃತಿಯ ಶ್ರೇಷ್ಠತೆ ಬೇರೆಲ್ಲೂ ಸಿಗದು. ಆದ್ದರಿಂದಲೇ ನೂರಾರು ವರ್ಷ ಅಳ್ವಿಕೆ ಮಾಡಿದ ಅಂಗ್ಲರಿಗೆ ನಮ್ಮ ಸಂಸ್ಕಾರ, ಸಂಪ್ರದಾಯಗಳನ್ನು ದೋಚಲು ಅಸಾಧ್ಯವಾಯಿತು. ಮನಸ್ಸಿಗೆ ಶಾಂತ ಸ್ಥಿತಿಯನ್ನು ಒದಗಿಸಿ ರಸಾನುಭವದ ಮೂಲಕ ಸತ್ಯದರ್ಶನ ನೀಡುವ ಯಕ್ಷಗಾನವು ದೈವತ್ವ ಸ್ಥಾನ ಹೊಂದಿದೆ ಎಂದು ರಾಜಕೀಯ ಯುವ ನೇತಾರ ಸಚ್ಚಿದಾನಂದ ಶೆಟ್ಟಿ, ಮುನ್ನಲಾಯಿ ಗುತ್ತು ಅವರು ತಿಳಿಸಿದರು

ಆ. 15ರಂದು ಅಪರಾಹ್ನ ಭಾಯಂದರ್‌ ಪೂರ್ವದ ನವಘರ್‌ ಕ್ರಾಸ್‌, ಗುರುದ್ವಾರ ರೋಡ್‌ ಸಮೀಪದಲ್ಲಿರುವ ಲೋಕಮಾನ್ಯ ತಿಲಕ್‌ ಸಭಾಗೃಹದಲ್ಲಿ ಭಾಯಂದರ್‌ ಪೂರ್ವದ ಶ್ರೀ ಅಯ್ಯಪ್ಪ ಆರಾಧನಾ ವೃಂದ ಮತ್ತು ಆರಾಧನಾ ಫ್ರೆಂಡ್ಸ್‌ ಇದರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜರಗಿದ ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿ ಹಾಲಾಡಿ ಕುಂದಾಪುರ ಇದರ ಕಲಾವಿದರಿಂದ ಮೇಘ ಮಯೂರಿ ಎಂಬ ಯಕ್ಷಗಾನ ಬಯಲಾಟದ ಮಧ್ಯೆ ಆಯೋಜಿಸಿದ್ದ ಸಮ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಬಲಿಷ್ಠ ರಾಷ್ಟ್ರವನ್ನಾಗಿಸಲು ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತ ದೇಶ ವಿಶ್ವ ಶಕ್ತಿಯಾಗಿ ಮೆರೆಯುತ್ತಿದೆ. ದೇಶ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ. ದೇಶದ ಸಮಸ್ತ ಜನಾಂಗದ ಕಲ್ಯಾಣಕ್ಕೆ ನಮ್ಮೆಲ್ಲರ ಸಮರ್ಪಣ ಭಾವನೆ ಮುಖ್ಯವಾಗಿದೆ ಎಂದು ಹೇಳಿದರಲ್ಲದೆ ಸ್ವಾತಂತ್ರ್ಯೋತ್ಸವದ ಮತ್ತು ರಕ್ಷಾ ಬಂಧನದ ಶುಭಾಶಯಗಳನ್ನು ಹಾರೈಸಿದರು.

ಅಧ್ಯಕ್ಷತೆ ವಹಿಸಿದ ಉದ್ಯಮಿ ಅಶೋಕ್‌ ಶೆಟ್ಟಿ ಅವರು ಮಾತನಾಡಿ, ಕಲೆಗೆ ಜೀವ ತುಂಬಿ ಮೌಲ್ಯಗಳನ್ನು ವೃದ್ಧಿಸುವ ಕಲಾವಿದರು ಸಾಮಾಜಿಕ ಜನ ಜಾಗೃತಿಯ ಮಾರ್ಗದರ್ಶಕರು. ಆಚಾರ, ವಿಚಾರ, ಹೊಂದಣಿಕೆಯಿಂದ ನಾಡು ನುಡಿಯ ವಿಭಿನ್ನ ಕಲಾ ಪ್ರಕಾರಗಳನ್ನು ಸುಭದ್ರವಾಗಿರಿಸಿ ಮುಂದಿನ ಜನಾಂಗಕ್ಕೆ ಹಸ್ತಾಂತರಿಸಬೇಕೆಂದು ವಿನಂತಿಸಿದರು. ಸಮಾರಂಭದಲ್ಲಿ ಮಂಡಳಿಯ ಭಾಗವತರಾದ ಕೊಕ್ಕರ್ಣೆ ಸದಾಶಿವ ಅಮೀನ್‌, ಕಲಾವಿದ ಕೋಡಿ ವಿಶ್ವನಾಥ ಗಾಣಿಗ, ಸಮಾಜ ಸೇವಕ ಸುಧಾಕರ ಶೆಟ್ಟ ಬಿಯಾಲಿ ದಂಪತಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು.

ಸಾತಿಂಜ ಜನಾದ‌ರ್ನ ಭಟ್, ಚೇತನ್‌ ಶೆಟ್ಟಿ, ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿ ಶುಭ ಹಾರೈಸಿ ಮಾತನಾಡಿದರು. ಪತ್ರಕರ್ತ ಉಮೇಶ್‌ ಕೆ. ಅಂಚನ್‌ ಪರಿಚಯಿಸಿ ಕಾರ್ಯಕ್ರಮ ನಿರ್ವಹಿಸಿದರು. ವೇದಿಕೆಯಲ್ಲಿ ಕಲಾಪೋಷಕರಾದ ಸಂತೋಷ ಪ್ರಕಾಶ್‌ ಶೆಟ್ಟಿ, ಮೋಹನ್‌ ಶೆಟ್ಟಿ, ನಾರಾಯಣ ಸುವರ್ಣ, ಪ್ರೇಮಾ ಹೆಗ್ಡೆ, ಸುಧಾಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಅಯ್ಯಪ್ಪ ಆರಾಧನಾ ವೃಂದ, ಆರಾಧನಾ ಫ್ರೆಂಡ್ಸ್‌ ಇದರ ಸರ್ವ ಸದಸ್ಯರು, ಮಹಿಳಾ ಸದಸ್ಯೆಯರು, ಪರಿಸರದ ಮಿತ್ರ ಬಳಗದವರು ಸಹಕರಿದರು. ಕಾರ್ಯಕ್ರಮದ ಕೊನೆಗೆ ಸ್ಥಳೀಯ ನಗರ ಸೇವಕ ಗಣೇಶ ಶೆಟ್ಟಿ ಅವರ ಪ್ರಯೋಜಕತ್ವದಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಗಣ್ಯರು, ತುಳು ಕನ್ನಡಿಗರು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

 

ಚಿತ್ರ -ವರದಿ: ರಮೇಶ ಅಮೀನ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.