![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 11, 2023, 10:56 AM IST
ಮುಂಬಯಿ: ಬಾಲಿವುಡ್ ನಟ ಆಮಿರ್ ಖಾನ್ ʼಲಾಲ್ ಸಿಂಗ್ ಚಡ್ಡಾʼ ಸಿನಿಮಾದ ಬಳಿಕ ಮತ್ತೆ ಯಾವ ಸಿನಿಮಾದಲ್ಲೂ ಲೀಡ್ ರೋಲ್ ನಲ್ಲಿ ಕಾಣಿಸಿಕೊಂಡಿಲ್ಲ. ಇದೀಗ ಆಮಿರ್ ಹೊಸ ಸಿನಿಮಾವೊಂದನ್ನು ಘೋಷಿಸಿದ್ದಾರೆ.
2007 ರಲ್ಲಿ ಆಮಿರ್ ಖಾನ್ ಅವರು ಮೊದಲ ಬಾರಿ ನಿರ್ದೇಶಕನಾಗಿ ‘ತಾರೆ ಜಮೀನ್ ಪರ್ʼ ಸಿನಿಮಾವನ್ನು ಮಾಡಿದ್ದರು. ಈ ಸಿನಿಮಾದಲ್ಲಿ ಬಾಲನಟನಾಗಿ ದರ್ಶೀಲ್ ಸಫಾರಿ ನಟಿಸಿದ್ದರು. ಈ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ಬಂದಿತ್ತು.
ಇದೀಗ ಆಮಿರ್ ಖಾನ್ ತನ್ನ ಮುಂದಿನ ಸಿನಿಮಾಕ್ಕೆ ಇಂಥದ್ದೇ ಟೈಟಲ್ ನ್ನು ಇಟ್ಟಿದ್ದಾರೆ. ‘ಸಿತಾರೆ ಜಮೀನ್ ಪರ್’ ಎನ್ನುವ ಸಿನಿಮಾವನ್ನು ಮಾಡಲಿದ್ದೇನೆ ಎಂದು ಆಮಿರ್ ಹೇಳಿದ್ದಾರೆ.
ʼನ್ಯೂಸ್ 18ʼ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿರುವ ಅವರು, “ನಾನು ಇದರ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿಲ್ಲ ಮತ್ತು ಈಗ ನಾನು ಹೆಚ್ಚು ಹೇಳಲು ಸಾಧ್ಯವಿಲ್ಲ. ಆದರೆ ನಾನು ಸಿನಿಮಾದ ಟೈಟಲ್ ಮಾತ್ರ ಹೇಳಬಲ್ಲೆ. ‘ಸಿತಾರೆ ಜಮೀನ್ ಪರ್’ ಇದನ್ನು ಕೇಳಿದಾಗ ನಿಮಗೆ ‘ತಾರೆ ಜಮೀನ್ ಪರ್ʼ ನೆನಪಿಗೆ ಬರಬಹುದು. ಈ ಸಿನಿಮಾ ಆ ಸಿನಿಮಾಕ್ಕಿಂತ 10 ಹೆಜ್ಜೆ ಮುಂದಿರುತ್ತದೆ. ‘ತಾರೆ ಜಮೀನ್ ಪರ್’ ಭಾವನಾತ್ಮಕ ಚಿತ್ರವಾಗಿತ್ತು. ಈ ಚಿತ್ರ ನಿಮ್ಮನ್ನು ನಗಿಸುತ್ತದೆ. ಆ ಚಿತ್ರವು ನಿಮ್ಮನ್ನು ಅಳುವಂತೆ ಮಾಡಿತು, ಇದು ನಿಮಗೆ ಮನರಂಜನೆ ನೀಡುತ್ತದೆ” ಎಂದು ಆಮಿರ್ ಹೇಳಿದ್ದಾರೆ.
ಇದನ್ನೂ ಓದಿ: Missing Case: ದೇವರ ಮನೆ ಪ್ರವಾಸಕ್ಕೆ ಹೋಗಿ ನಾಪತ್ತೆಯಾದ ಯುವಕನ ಪ್ರಕರಣ ಸುಖಾಂತ್ಯ
“ಈ ಸಿನಿಮಾದ ಥೀಮ್ ‘ತಾರೆ ಜಮೀನ್ ಪರ್’ ಥೀಮ್ ರೀತಿಯೇ ಇರುತ್ತದೆ. ಅದಕ್ಕಾಗಿ ಸಿನಿಮಾದ ಟೈಟಲ್ ತುಂಬಾ ಯೋಚನೆ ಮಾಡಿ ಇಟ್ಟಿದ್ದೇವೆ. ನಾವೆಲ್ಲರೂ ಒಂದಲ್ಲ ಒಂದು ಸ್ಟ್ರಾಂಗ್ ವೀಕ್ ಪಾಯಿಂಟ್ ಗಳನ್ನು ಹೊಂದಿದ್ದೇವೆ. ಆದರೆ ನಾವೆಲ್ಲರೂ ವಿಶೇಷವಾದದ್ದನ್ನು ಕೂಡ ಹೊಂದಿದ್ದೇವೆ. ಇದೇ ಕಾರಣದಿಂದ ಈ ಥೀಮ್ ತೆಗೆದುಕೊಂಡಿದ್ದೇವೆ. ಈ ಸಿನಿಮಾದಲ್ಲಿ ಒಂಬತ್ತು ಹುಡುಗರು ನನಗೆ ಸಹಾಯ ಮಾಡುತ್ತಾರೆ” ಎಂದು ಅವರು ಹೇಳಿದ್ದಾರೆ.
ಸದ್ಯ ಆಮಿರ್ ಖಾನ್ ಸನ್ನಿ ಡಿಯೋಲ್ ಅವರ, ‘ಲಾಹೋರ್, 1947’ ಸಿನಿಮಾಕ್ಕೆ ಬಂಡವಾಳ ಹಾಕಲಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.