![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 20, 2021, 9:32 AM IST
ರಾಂಚಿ: “ಎಬಿ ಡಿವಿಲಯರ್ಸ್ ಅವರು ನನ್ನ ವೃತ್ತಿಜೀವನದಲ್ಲಿ ಭಾರಿ ಪ್ರಭಾವ ಬೀರಿದ್ದಾರೆ. ನಾನು ಯಾವಾಗಲೂ ಅವರ ಅಭಿಯಾನಿಯಾಗಿದ್ದೇನೆ” ಎಂದು ಹರ್ಷಲ್ ಪಟೇಲ್ ಹೇಳಿದರು.
ಭಾರತ ಟಿ20 ತಂಡಕ್ಕೆ ಪದಾರ್ಪಣೆ ಮಾಡಿದ ಪಂದ್ಯದಲ್ಲೇ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಹರ್ಷಲ್ ಪಟೇಲ್ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
” ಐಪಿಎಲ್ನ ಯುಎಇ ಲೆಗ್ ಮೊದಲು ನಾನು ನನ್ನ ದೊಡ್ಡ ಓವರ್ಗಳನ್ನು ಹೇಗೆ ಕಡಿಮೆ ಮಾಡಬಹುದು ಎಂದು ನಾನು ಅವರನ್ನು ಕೇಳಿದೆ. ನಾನು ಐಪಿಎಲ್ನಲ್ಲಿ ಒಂದು ಓವರ್ನಲ್ಲಿ 30 ರನ್ಗಳನ್ನು ಸಹ ಬಿಟ್ಟುಕೊಟ್ಟಿದ್ದೇನೆ. ಅದಕ್ಕೆ ಅವರು ನನ್ನ ಉತ್ತಮ ಎಸೆತಗಳಲ್ಲಿ ಬ್ಯಾಟ್ಸ್ಮನ್ ಹೊಡೆದಾಗ ನನ್ನ ತಂತ್ರಗಳನ್ನು ಬದಲಾಯಿಸಬಾರದು ಎಂದು ನನಗೆ ಹೇಳಿದರು” ಹರ್ಷಲ್ ಹೇಳಿದರು.
ಇದನ್ನೂ ಓದಿ:ಅಶ್ಲೀಲ ಸಂದೇಶ ಪ್ರಕರಣ: ಆಸೀಸ್ ಟೆಸ್ಟ್ ನಾಯಕತ್ವ ಬಿಟ್ಟ ಪೇನ್
ಎಬಿ ಡಿವಿಲಿಯರ್ಸ್ ಅವರು ಐಪಿಎಲ್ ಸೇರಿ ಎಲ್ಲಾ ಮಾದರಿ ಕ್ರಿಕೆಟ್ ಗೆ ಶುಕ್ರವಾರ ವಿದಾಯ ಘೋಷಿಸಿದ್ದಾರೆ. ಅವರು 2011ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಆಡುತ್ತಿದ್ದಾರೆ.
ಹರ್ಷಲ್ ಪಟೇಲ್ ಅವರು ಆರ್ ಸಿಬಿ ತಂಡದ ಪರವಾಗಿ ಐಪಿಎಲ್ ನಲ್ಲಿ ಆಡಿದ್ದರು. ಈ ಬಾರಿ ಅತೀ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಪಡೆದಿದ್ದರು. ನ್ಯೂಜಿಲ್ಯಾಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದ ಅವರು ಎರಡು ವಿಕೆಟ್ ಕಿತ್ತರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.