ಕೊಹ್ಲಿ ದಿಕ್ಕು ತಪ್ಪಿಸಲು ನಿವೃತ್ತಿ ತೊರೆದು ಬರುವರೇ ಆದಿಲ್‌ ರಶೀದ್


Team Udayavani, Jul 20, 2018, 6:20 AM IST

virat-kohli-adil-rashid.jpg

ಲಂಡನ್‌: ಇನ್ನು ಕೆಲವೇ ದಿನಗಳಲ್ಲಿ ಭಾರತ-ಇಂಗ್ಲೆಂಡ್‌ ನಡುವಿನ 5 ಪಂದ್ಯಗಳ ಮಹತ್ವದ ಟೆಸ್ಟ್‌ ಸರಣಿ ಆರಂಭವಾಗಲಿದೆ. ಈಗಾಗಲೇ ಮುಗಿದ ಟಿ20 ಸರಣಿಯನ್ನು ಭಾರತ, ಏಕದಿನ ಸರಣಿಯನ್ನು ಇಂಗ್ಲೆಂಡ್‌ ಗೆದ್ದಿವೆ. ಸಹಜ ವಾಗಿಯೇ ಟೆಸ್ಟ್‌ ಸರಣಿಯ ಕುತೂಹಲ ಗರಿ ಗೆದರಿದೆ.

ಭಾರತೀಯ ಕ್ರಿಕೆಟಿಗರ ಈಗಿನ ಫಾರ್ಮ್ ಪ್ರಕಾರ  ಕೊಹ್ಲಿ ಆತಿಥೇಯರ ಪಾಲಿಗೆ ಅತ್ಯಂತ ಅಪಾಯಕಾರಿಯಾಗಿ ಗೋಚರಿಸಿದ್ದಾರೆ. ಅದರಲ್ಲೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕ್ರಮವಾಗಿ 75, 45 ಹಾಗೂ 71 ರನ್‌ ಬಾರಿಸಿ ಪ್ರಚಂಡ ಫಾರ್ಮ್ನ ಮುನ್ಸೂಚನೆ ನೀಡಿದ್ದಾರೆ. ಭಾರತೀಯ ಕಪ್ತಾನನನ್ನು ಕಟ್ಟಿಹಾಕಿದರೆ ಟೆಸ್ಟ್‌ ಸರಣಿಯಲ್ಲಿ ಮೇಲುಗೈ ಸಾಧಿಸಬಹುದು ಎಂಬುದು ಇಂಗ್ಲೆಂಡಿನ ಲೆಕ್ಕಾಚಾರ. ಹಾಗಾದರೆ ಅವರ ಮೇಲೆ ಯಾರನ್ನು “ಛೂ’ ಬಿಡಬೇಕು? ಈ ಚರ್ಚೆ ಈಗ ಇಂಗ್ಲೆಂಡ್‌ ಆಯ್ಕೆ ಸಮಿತಿಯಲ್ಲಿ ಬಹಳ ಜೋರಾಗಿಯೇ ನಡೆಯುತ್ತಿದೆ.

ಆಯ್ಕೆಗಾರರ ಸಂಪರ್ಕದಲ್ಲಿ ರಶೀದ್‌ 
ಏಕದಿನ ಸರಣಿಯಲ್ಲಿ ವಿರಾಟ್‌ ಕೊಹ್ಲಿಯನ್ನು ಕಾಡಿ ಸುದ್ದಿಯಾದವರೆಂದರೆ ಲೆಗ್‌ಬ್ರೇಕ್‌ ಬೌಲರ್‌ ಆದಿಲ್‌ ರಶೀದ್‌. ಇವರು 2 ಸಲ ಕೊಹ್ಲಿ ವಿಕೆಟ್‌ ಹಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಟೆಸ್ಟ್‌ ಸರಣಿಯಲ್ಲೂ ರಶೀದ್‌ ಅವರನ್ನು ಆಡಿಸಬಾರದೇಕೆ ಎಂದು ಇಸಿಬಿ ಯೋಚಿಸುತ್ತಿದೆ ಎಂಬುದಾಗಿ “ನ್ಪೋರ್ಟ್ಸ್ ಮೇಲ್‌’ ವರದಿ ಮಾಡಿದೆ. ಆಯ್ಕೆ ಸಮಿತಿ ಅಧ್ಯಕ್ಷ ಎಡ್‌ ಸ್ಮಿತ್‌ ಈಗಾಗಲೇ ರಶೀದ್‌ ಅವರನ್ನು ಸಂಪರ್ಕಿಸಿದ್ದಾಗಿಯೂ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ರಶೀದ್‌ ಅವರನ್ನು ಆಯ್ಕೆ ಮಾಡಿದರಾಯಿತು, ಅದರಲ್ಲೇನಂತೆ ಎಂದು ಪ್ರಶ್ನಿಸ ಬಹುದು. ಇಲ್ಲೇ ಇರುವುದು ತೊಡಕು. ಆದಿಲ್‌ ರಶೀದ್‌ ಈಗಗಾಲೇ ಟೆಸ್ಟ್‌ ಸರಣಿಗೆ ವಿದಾಯ ಘೋಷಿಸಿಯಾಗಿದೆ. ಈ ನಿರ್ಧಾರವನ್ನು ಮರುಪರಿಶೀಲಿಸಿ ಟೆಸ್ಟ್‌ ಕ್ರಿಕೆಟಿಗೆ ವಾಪಸಾಗುವಂತೆ ರಶೀದ್‌ ಅವರ ಮನ ಒಲಿಸಲು ಸ್ಮಿತ್‌ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ರಶೀದ್‌ ನಿರ್ಧಾರದ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ.

2015ರಲ್ಲಿ ಪಾಕಿಸ್ಥಾನ ವಿರುದ್ಧ ಅಬುಧಾಬಿಯಲ್ಲಿ ಟೆಸ್ಟ್‌ ಪಾದಾರ್ಪಣೆ ಮಾಡಿದ ಆದಿಲ್‌ ರಶೀದ್‌, 2016ರ ಭಾರತ ಪ್ರವಾಸದ ವೇಳೆ ಚೆನ್ನೈಯಲ್ಲಿ ಕೊನೆಯ ಟೆಸ್ಟ್‌ ಆಡಿದ್ದರು. 10 ಟೆಸ್ಟ್‌ಗಳಲ್ಲಿ 38 ವಿಕೆಟ್‌ ಉರುಳಿಸಿದ್ದಾರೆ. 

ಟಾಪ್ ನ್ಯೂಸ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.