ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ

ಕಡಿಮೆಪಕ್ಷ 2 ವರ್ಷ ತರಬೇತಿ ನೀಡಿರಬೇಕು

Team Udayavani, Jul 17, 2019, 5:41 AM IST

bcci

ಹೊಸದಿಲ್ಲಿ: ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಸೋತು ಹೊರಬಿದ್ದ ಬಳಿಕ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) ಯು ತಂಡದ ಮುಖ್ಯ ಕೋಚ್‌ ಮತ್ತು ಬೆಂಬಲ ಸಿಬಂದಿಯನ್ನು ಬದಲಾಯಿಸಲು ಹೊರಟಿದೆ. ಕೆಲವೊಂದು ಷರತ್ತುಗಳೊಂದಿಗೆ ಮುಖ್ಯ ಕೋಚ್‌ ಮತ್ತು ಬೆಂಬಲ ಸಿಬಂದಿಗಳ ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಬೆಂಬಲ ಸಿಬಂದಿಗಳ ಪಡೆಯಲ್ಲಿ
ಆಮೂಲಾಗ್ರ ಬದಲಾವಣೆ ತರಲು ಬಿಸಿಸಿಐ ಬಯಸಿದೆ. ಹಾಗಾಗಿ ಮುಖ್ಯ ಕೋಚ್‌, ಬ್ಯಾಟಿಂಗ್‌ ಕೋಚ್‌, ಬೌಲಿಂಗ್‌ ಕೋಚ್‌, ಫೀಲ್ಡಿಂಗ್‌ ಕೋಚ್‌, ಫಿಸಿಯೊಥೆರಪಿಸ್ಟ್‌ ಮತ್ತು ಆಡಳಿತ ವ್ಯವಸ್ಥಾಪಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಜುಲೈ 30ರ ಸಂಜೆ 5 ಗಂಟೆಯ ಮೊದಲು ಅರ್ಜಿ ಸಲ್ಲಿಸಬೇಕಾಗಿದೆ.

ರವಿಶಾಸ್ತ್ರಿ ಅವರನ್ನು 2017ರ ಜುಲೈಯಲ್ಲಿ ಮುಖ್ಯ ಕೋಚ್‌ ಆಗಿ ನೇಮಕ ಮಾಡುವ ಮೊದಲು ಬಿಸಿಸಿಐ 9 ಅಂಶಗಳ ಅರ್ಹತಾ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಹೆಚ್ಚಿನ ಗಮನ ಹರಿಸಿದಂತೆ ಕಾಣಲಿಲ್ಲ. ಈ ಬಾರಿ ಮುಖ್ಯ ಕೋಚ್‌ ಸಹಿತ ತರಬೇತಿ ನೀಡಲಿರುವ ಎಲ್ಲರಿಗೂ ಮೂರು ಅಂಶಗಳ ಅರ್ಹತಾ ಷರತ್ತು ವಿಧಿಸಲಾಗಿದೆ.

ಟೀಮ್‌ ಇಂಡಿಯಾದ ಹಾಲಿ ತರಬೇತಿ ಸಿಬಂದಿ ಆಯ್ಕೆ ಪ್ರಕ್ರಿಯೆಯಲ್ಲಿ ನೇರ ಪ್ರವೇಶ ಪಡೆಯಲಿದ್ದಾರೆ ಎಂದು ಬಿಸಿಸಿಐ ಪ್ರಕಟನೆಯಲ್ಲಿ ತಿಳಿಸಿದೆ.

45 ದಿನಗಳ ವಿಸ್ತರಣಾ ಅವಧಿ
ಹಾಲಿ ಬೆಂಬಲ ಸಿಬಂದಿಗಳಾದ ಶಾಸಿŒ, ಬೌಲಿಂಗ್‌ ಕೋಚ್‌ ಭರತ್‌ ಅರುಣ್‌, ಬ್ಯಾಟಿಂಗ್‌ ಕೋಚ್‌ ಸಂಜಯ್‌ ಬಂಗಾರ್‌ ಮತ್ತು ಫೀಲ್ಡಿಂಗ್‌ ಕೋಚ್‌ ಆರ್‌. ಶ್ರೀಧರ್‌ ಅವರಿಗೆ 45 ದಿನಗಳ ವಿಸ್ತರಣಾ ಅವಧಿ ನೀಡಲಾಗಿದೆ. ಅವರೆಲ್ಲರೂ ಆ. 3ರಿಂದ ಸೆ. 3ರವರೆಗೆ ನಡೆಯಲಿರುವ ವೆಸ್ಟ್‌ ಇಂಡೀಸ್‌ ಪ್ರವಾಸದವರೆಗೆ ಭಾರತೀಯ ತಂಡದ ಜತೆಗಿರಲಿದ್ದಾರೆ.

ಇವರೆಲ್ಲರೂ ಮತ್ತೆ ಅರ್ಜಿ ಸಲ್ಲಿಸಬಹುದು. ಆದರೆ ಟ್ರೈನರ್‌ ಮತ್ತು ಫಿಸಿಯೋ ಹುದ್ದೆಗೆ ಹೊಸಬರನ್ನು ಆಯ್ಕೆ ಮಾಡಬೇಕಾಗುತ್ತದೆ. ಭಾರತ ಸೆಮಿಫೈನಲ್‌ನಲ್ಲಿ ಸೋತ ಬಳಿಕ ಶಂಕರ್‌ ಬಾಬು ಮತ್ತು ಪ್ಯಾಟ್ರಿಕ್‌ ಫ‌ರ್ಹಾರ್ತ್‌ ಅವರು ಅನುಕ್ರಮವಾಗಿ ಟ್ರೈನರ್‌ ಮತ್ತು ಫಿಸಿಯೋ ಹುದ್ದೆಯನ್ನು ತ್ಯಜಿಸಿದ್ದರು.

ವೆಸ್ಟ್‌ಇಂಡೀಸ್‌ ಪ್ರವಾಸದ ಬಳಿಕ ಸೆ. 15ರಿಂದ ಭಾರತದ ತವರಿನ ಋತು ಆರಂಭವಾಗಲಿದೆ. ಮೊದಲ ಸರಣಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿದೆ. ಈ ವೇಳೆ ಎಲ್ಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

2017ರಲ್ಲಿ ಶಾಸಿŒ ನೇಮಕ
ಅನಿಲ್‌ ಕುಂಬ್ಳೆ ವಿವಾದಾತ್ಮಕವಾಗಿ ಹುದ್ದೆ ತ್ಯಜಿಸಿದ ಬಳಿಕ ರವಿಶಾಸಿŒ ಅವರನ್ನು 2017ರಲ್ಲಿ ಮುಖ್ಯ ಕೋಚ್‌ ಆಗಿ ನೇಮಕ ಮಾಡಲಾಗಿತ್ತು. 57ರ ಹರೆಯದ ಅವರು ಆಗಸ್ಟ್‌ 2014ರಿಂದ ಜೂನ್‌ 2016ರ ವರೆಗೆ ಕ್ರಿಕೆಟ್‌ ನಿರ್ದೇಶಕರಾಗಿಯೂ

ಕರ್ತವ್ಯ ನಿರ್ವಹಿಸಿದ್ದರು. ಅವರು ಮುಖ್ಯ ಕೋಚ್‌ ಆಗಿದ್ದ ವೇಳೆ ಭಾರತೀಯ ತಂಡ ಐಸಿಸಿಯ ಪ್ರಮುಖ ಕೂಟಗಳಲ್ಲಿ ಪ್ರಶಸ್ತಿ ಗೆಲ್ಲಲಿಲ್ಲ. ಆದರೆ ಈ ವರ್ಷದ ಆರಂಭದಲ್ಲಿ ಆಸ್ಟ್ರೇಲಿಯದಲ್ಲಿ ಚೊಚ್ಚಲ ಬಾರಿ ಟೆಸ್ಟ್‌ ಸರಣಿ ಗೆದ್ದ ಸಾಧನೆ ಮಾಡಿತ್ತು.

ಮೂರು ಷರತ್ತುಗಳು
ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಡಿಮೆಪಕ್ಷ ಎರಡು ವರ್ಷ ಟೆಸ್ಟ್‌ ಆಟವಾಡುವ ರಾಷ್ಟ್ರಕ್ಕೆ ತರಬೇತಿ ನೀಡಿರಬೇಕು ಅಥವಾ ಅಸೋಸಿಯೆಟ್‌ ಸದಸ್ಯ/ ಎ ತಂಡ/ ಐಪಿಎಲ್‌ ತಂಡಕ್ಕೆ ಮೂರು ವರ್ಷ ತರಬೇತಿ ನೀಡಿರಬೇಕು. ಅರ್ಜಿದಾರರು 30 ಟೆಸ್ಟ್‌ ಅಥವಾ 50 ಏಕದಿನ ಪಂದ್ಯಗಳನ್ನು ಆಡಿರಬೇಕು. ಬ್ಯಾಟಿಂಗ್‌, ಬೌಲಿಂಗ್‌ ಮತ್ತು ಫೀಲ್ಡಿಂಗ್‌ ಕೋಚ್‌ಗಳಿಗೆ ಈ ಷರತ್ತು ಅನ್ವಯವಾಗಲಿದೆ. ಆದರೆ ಪಂದ್ಯ ಆಡಿದ ಸಂಖ್ಯೆಗಳಲ್ಲಿ ವ್ಯತ್ಯಾಸವಿರಲಿದೆ. ಈ ಮೂರು ಹುದ್ದೆಗಳಿಗೆ ಅರ್ಜಿ ಹಾಕುವವರು ಕಡಿಮೆಪಕ್ಷ 10 ಟೆಸ್ಟ್‌ ಅಥವಾ 25 ಏಕದಿನ ಆಡಿರಬೇಕು ಮತ್ತು 60 ವರ್ಷ ದಾಟಿರಬಾರದು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.