Asia Cup ; ಪತರುಗುಟ್ಟಿದ ಪಾಕಿಸ್ಥಾನ ; ಭಾರತಕ್ಕೆ ಅತ್ಯಮೋಘ ಜಯ

ಕುಲದೀಪ್ ಯಾದವ್ 5 ವಿಕೆಟ್ ಸಾಧನೆ...

Team Udayavani, Sep 11, 2023, 11:05 PM IST

1-sadasdas

ಕೊಲಂಬೊ: ಇಲ್ಲಿನ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಸೋಮವಾರ ಮುಂದುವರಿದ ಏಷ್ಯಾ ಕಪ್ ಸೂಪರ್‌ ಫೋರ್‌ ಏಕದಿನ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅತ್ಯಮೋಘ ನಿರ್ವಹಣೆ ತೋರಿ ಪಾಕಿಸ್ಥಾನಕ್ಕೆ ಭಾರಿ ಸೋಲಿನ ಶಾಕ್ ನೀಡಿದೆ.

ಮಳೆ ಅಡ್ಡಿಯ ನಡುವೆ ಸಾಗಿದ ಮೀಸಲು ದಿನದ ಪಂದ್ಯದಲ್ಲಿ 357 ರನ್ ಗಳ ಸವಾಲು ಪಡೆದ ಪಾಕಿಸ್ಥಾನ 32 ಓವರ್ ಗಳಲ್ಲಿ 128 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡಿತು. ಭಾರತ 228 ರನ್ ಗಳ ಭಾರಿ ಗೆಲುವು ಸಾಧಿಸಿತು. ಪಾಕ್ ನ ಕೊನೆಯಲ್ಲಿ ಬರಬೇಕಾದ ನಸೀಮ್ ಮತ್ತು ಹ್ಯಾರಿಸ್ ಫೀಲ್ಡಿಂಗ್ ಮಾಡುವಾಗ ಗಾಯದೊಂದಿಗೆ ಹೊರ ಹೋಗಿದ್ದು ,ಅವರು ಬ್ಯಾಟಿಂಗ್‌ಗೆ ಬರದ ಕಾರಣ 8 ವಿಕೆಟ್ ಕಳೆದುಕೊಂಡಾಗಲೇ ಆಟ ಮುಗಿಯಿತು.

ಕುಲದೀಪ್ ಯಾದವ್ ಅವರು 5 ವಿಕೆಟ್ ಪಡೆದು ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. 8 ಓವರ್ ಗಳಲ್ಲಿ 25 ರನ್ ಬಿಟ್ಟುಕೊಟ್ಟರು. 9 ರನ್ ಗಳಿಸಿದ್ದ ವೇಳೆ ಇಮಾಮ್-ಉಲ್-ಹಕ್ ಅವರನ್ನು ಬುಮ್ರಾ ಔಟ್ ಮಾಡಿದರು. ಬುಮ್ರಾ ಎಸೆದ ಚೆಂಡು ಹಕ್ ಬ್ಯಾಟ್ ಗೆ ತಗುಲಿ ಶುಭ್ ಮನ್ ಗಿಲ್ ಅವರ ಕೈಸೇರಿತು. 10 ರನ್ ಗಳಿಸಿದ್ದ ನಾಯಕ ಬಾಬರ್ ಆಜಂ ಅವರನ್ನು ಹಾರ್ದಿಕ್ ಪಾಂಡ್ಯ ಬೌಲ್ಡ್ ಮಾಡಿ ಶಾಕ್ ನೀಡಿದರು.

ಪಾಕಿಸ್ಥಾನದ ಪ್ರಮುಖ ಬ್ಯಾಟ್ಸ್ ಮ್ಯಾನ್ ಗಳು ಭಾರತದ ಬಿಗು ಬೌಲಿಂಗ್ ವ್ಯೂಹ ದೊಳಗೆ ಸಿಲುಕಿ ನಲುಗಿದರು. 9 ರನ್ ಗಳಿಸಿದ್ದ ವೇಳೆ ಇಮಾಮ್-ಉಲ್-ಹಕ್ ಅವರನ್ನು ಬುಮ್ರಾ ಔಟ್ ಮಾಡಿದರು. ಬುಮ್ರಾ ಎಸೆದ ಚೆಂಡು ಹಕ್ ಬ್ಯಾಟ್ ಗೆ ತಗುಲಿ ಶುಭ್ ಮನ್ ಗಿಲ್ ಅವರ ಕೈಸೇರಿತು. 10 ರನ್ ಗಳಿಸಿದ್ದ ನಾಯಕ ಬಾಬರ್ ಆಜಂ ಅವರನ್ನು ಹಾರ್ದಿಕ್ ಪಾಂಡ್ಯ ಬೌಲ್ಡ್ ಮಾಡಿ ಶಾಕ್ ನೀಡಿದರು. 27 ರನ್ ಗಳಿಸಿದ್ದ ಫಖರ್ ಜಮಾನ್ ಅವರನ್ನು ಕುಲದೀಪ್ ಯಾದವ್ ಬೌಲ್ಡ್ ಮಾಡಿದರು. ಮೊಹಮ್ಮದ್ ರಿಜ್ವಾನ್ 2 ರನ್ ಗಳಿಗೆ ನಿರ್ಗಮಿಸಿದರು.ಶಾರ್ದೂಲ್ ಠಾಕೂರ್ ಎಸೆದ ಚೆಂಡನ್ನು ರಾಹುಲ್ ಕೈಗಿತ್ತು ಪೆವಿಲಿಯನ್ ಕಡೆಗೆ ಮರಳಿದರು.

ಶತಕದ ಜುಗಲ್ ಬಂದಿ
ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಅತ್ಯಮೋಘ ಶತಕಗಳನ್ನು ಸಿಡಿಸಿ ಭಾರತದ ಬ್ಯಾಟಿಂಗ್ ಬಲ ಸಾಬೀತುಪಡಿಸಿದ್ದಾರೆ. ಭಾರತ 50 ಓವರ್ ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 356 ರನ್ ಗಳ ಸವಾಲಿನ ಮೊತ್ತವನ್ನು ಕಲೆಹಾಕಿತು. ಕೊಹ್ಲಿ 122 ರನ್ ಗಳಿಸಿ ಅಜೇಯರಾಗಿ ಉಳಿದರು.93 ಎಸೆತಗಳಲ್ಲಿ ಆಕರ್ಷಕ 9 ಬೌಂಡರಿ ಮತ್ತು 3 ಸಿಕ್ಸರ್ ಅವರ ಇನ್ನಿಂಗ್ಸ್ ನ ಆಕರ್ಷಣೆಯಾಗಿತ್ತು. ಜವಾಬ್ದಾರಿಯುತ ಆಟವಾಡಿದ ರಾಹುಲ್ ಅಜೇಯ 111 ರನ್ ಗಳಿಸಿದರು.106 ಎಸೆತಗಳಲ್ಲಿ 12 ಬೌಂಡರಿ ಮತ್ತು 2 ಸಿಕ್ಸರ್ ಅವರ ಆಟದ ಆಕರ್ಷಣೆಯಾಗಿತ್ತು. 3 ನೇ ವಿಕೆಟ್ ಗೆ ಇಬ್ಬರು 233 ರನ್ ಜತೆಯಾಟವಾಡಿದ್ದು ಇದು ಏಷ್ಯಾ ಕಪ್ ಇತಿಹಾಸದಲ್ಲಿ ಭಾರತದ ಅತೀ ದೊಡ್ಡ ಜತೆಯಾಟವಾಗಿದೆ.

ನಿನ್ನೆ ಭಾರಿ ಮಳೆಯಿಂದ ಪಂದ್ಯ ಮುಂದೂಡಿಕೆಯಾದ ವೇಳೆ 24.1 ಓವರ್ ಗಳಲ್ಲಿ ಭಾರತ 2 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತ್ತು. 8 ರನ್ ಗಳಿಸಿದ್ದ ಕೊಹ್ಲಿ ಮತ್ತು 17 ರನ್ ಗಳಿಸಿದ್ದ ರಾಹುಲ್ ಇಂದು ಆಕರ್ಷಕ ಜತೆಯಾಟವನ್ನು ಆಡಿದರು. ಪಾಕಿಸ್ಥಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ನಾಯಕ ರೋಹಿತ್ ಶರ್ಮಾ 56 ರನ್ ಶುಭಮನ್ ಗಿಲ್ 58 ರನ್ ಗಳಿಸಿ ಔಟಾಗಿದ್ದರು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.