ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ: ಭಾರತದ ನೂತನ ಹಾಕಿ ಋತು ಆರಂಭ


Team Udayavani, Dec 14, 2021, 5:15 AM IST

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ: ಭಾರತದ ನೂತನ ಹಾಕಿ ಋತು ಆರಂಭ

ಢಾಕಾ: ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಪದಕ ಬರಗಾಲವನ್ನು ನೀಗಿಸಿಕೊಂಡ ಖುಷಿಯಲ್ಲಿರುವ ಭಾರತೀಯ ಹಾಕಿ ತಂಡ ನೂತನ ಋತುವಿನ ಆರಂಭಕ್ಕೆ ಸಜ್ಜಾಗಿದೆ. ಮಂಗಳವಾರ ಢಾಕಾದಲ್ಲಿ “ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ’ ಹಾಕಿ ಪಂದ್ಯಾವಳಿ ಆರಂಭವಾಗಲಿದ್ದು, ಮನ್‌ಪ್ರೀತ್‌ ಸಿಂಗ್‌ ಸಾರಥ್ಯದ ಭಾರತ ನೆಚ್ಚಿನ ತಂಡವಾಗಿ ಕಣಕ್ಕಿಳಿಯಲಿದೆ.

ಕೂಟದ ಆರಂಭದ ದಿನವೇ ಕೊರಿಯಾ ಸವಾಲನ್ನು ಭಾರತ ಎದುರಿಸಲಿದೆ. ಮರುದಿನ ಆತಿಥೇಯ ಬಾಂಗ್ಲಾದೇಶ ವಿರುದ್ಧ ಆಡಲಿದೆ (ಡಿ. 15). ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನ ವಿರುದ್ಧದ ಬಹು ನಿರೀಕ್ಷೆಯ ಮುಖಾಮುಖಿ ಡಿ. 17ರಂದು ಏರ್ಪಡಲಿದೆ. ಡಿ. 19ರಂದು ಏಶ್ಯನ್‌ ಚಾಂಪಿಯನ್‌ ಜಪಾನ್‌ ವಿರುದ್ಧ ಸೆಣಸಲಿದೆ.

ಮೇಲುಗೈ ವಿಶ್ವಾಸ
“ಕೊರಿಯಾ ಅತ್ಯುತ್ತಮ ತಂಡ. ನಮ್ಮ ಆಕ್ರಮಣವನ್ನು ನಿಯಂತ್ರಿಸುವ ಸಾಮರ್ಥ್ಯ ಅವರಲ್ಲಿದೆ. ಇಲ್ಲೇ ನಡೆದ 2017ರ ಏಶ್ಯ ಕಪ್‌ ಕೂಟದಲ್ಲಿ ನಾವು ಕೊರಿಯಾ ವಿರುದ್ಧ 1-1 ಡ್ರಾ ಸಾಧಿಸಿದ್ದೆವು. ಆದರೆ ನಮ್ಮ  ಕಾರ್ಯತಂತ್ರ ವನ್ನು ಯಶಸ್ವಿ ಯಾಗಿ ಅಳವಡಿಸಿದರೆ ಮೇಲುಗೈ ಸಾಧಿಸ ಬಲ್ಲೆವು’ ಎಂಬುದು ನಾಯಕ ಮನ್‌ಪ್ರೀತ್‌ ಸಿಂಗ್‌ ಅಭಿಪ್ರಾಯ.

ಇದನ್ನೂ ಓದಿ:ಚಿನ್ನ ಗೆದ್ದ ಅಜಯ್‌ ಸಿಂಗ್‌ ಕಾಮನ್ವೆಲ್ತ್‌ ಗೇಮ್ಸ್‌ಗೆ ಆಯ್ಕೆ

“ಟೋಕಿಯೊ ಒಲಿಂಪಿಕ್ಸ್‌ ಬಳಿಕ ನಾವು ಪಾಲ್ಗೊಳ್ಳುತ್ತಿರುವ ಮೊದಲ ಪಂದ್ಯಾವಳಿ ಇದಾಗಿದೆ. ನೂತನ ಋತುವನ್ನು ಉತ್ತಮ ರೀತಿಯಲ್ಲಿ ಆರಂಭಿಸಬೇಕು. ಆಗಷ್ಟೇ ನಮ್ಮ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ’ ಎಂದರು.
ತಂಡದ ಯುವ ಆಟಗಾರರ ಕುರಿತು ಮಾತಾಡಿದ ಮನ್‌ಪ್ರೀತ್‌, “ಇವರೆಲ್ಲ ಕಳೆದ ಎರಡು ವರ್ಷಗಳಿಂದ ಕಾಯು ತ್ತಿದ್ದರು. ಈಗ ಅವಕಾಶ ಒದಗಿ ಬಂದಿದೆ. ಇವರನ್ನೂ ಒಳಗೊಂಡಂತೆ ಮುಂದಿನ ಒಲಿಂಪಿಕ್ಸ್‌ಗೆ ಸಶಕ್ತ ತಂಡವನ್ನು ಕಟ್ಟುವುದು ನಮ್ಮ ಯೋಜನೆ’ ಎಂದರು.

3 ಬಾರಿಯ ಚಾಂಪಿಯನ್‌
ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಯಲ್ಲಿ ಭಾರತ 3 ಸಲ ಪ್ರಶಸ್ತಿ ಎತ್ತಿದೆ. ಕಳೆದ 2016 ಮತ್ತು 2018ರ ಆವೃತ್ತಿಯ ಚಾಂಪಿಯನ್‌ ಕೂಡ ಹೌದು. 2018ರ ಮಸ್ಕತ್‌ ಫೈನಲ್‌ ವೇಳೆ ಮಳೆ ಬಂದುದರಿಂದ ಭಾರತ-ಪಾಕಿಸ್ಥಾನವನ್ನು ಜಂಟಿ ಚಾಂಪಿ ಯನ್‌ ಎಂದು ಘೋಷಿಸಲಾಗಿತ್ತು.

ಟಾಪ್ ನ್ಯೂಸ್

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-avadhesh

Ayodhya MP ಅವಧೇಶ್‌ ವಿಪಕ್ಷಗಳ ಉಪ ಸ್ಪೀಕರ್‌ ಅಭ್ಯರ್ಥಿ?

1-isl

2026 T20 World Cup; ಭಾರತ-ಶ್ರೀಲಂಕಾ ಆತಿಥ್ಯ

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.