Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌


Team Udayavani, Sep 16, 2024, 6:30 AM IST

1-trrr

ಹುಲುನ್‌ಬಿಯುರ್‌ (ಚೀನ): ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿರುವ ಭಾರತ, ಸೋಮವಾರದ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಸೆಮಿಫೈನಲ್‌ನಲ್ಲಿ ಕೊರಿಯಾ ವಿರುದ್ಧ ಸೆಣಸಲಿದೆ. ಕೂಟದ ಐದೂ ಲೀಗ್‌ ಪಂದ್ಯಗಳನ್ನು ಗೆದ್ದಿರುವ ಹರ್ಮನ್‌ಪ್ರೀತ್‌ ಸಿಂಗ್‌ ಪಡೆ ಉಪಾಂತ್ಯದ ನೆಚ್ಚಿನ ತಂಡ ಎಂಬುದರಲ್ಲಿ ಅನುಮಾನವಿಲ್ಲ. ಇನ್ನೊಂದು ಸೆಮಿಫೈನಲ್‌ನಲ್ಲಿ ಪಾಕಿಸ್ಥಾನ-ಚೀನ ಎದುರಾಗಲಿವೆ.

ಲೀಗ್‌ ಹಂತದಲ್ಲಿ ಭಾರತ 3-1 ಅಂತರದಿಂದ ಕೊರಿಯಾವನ್ನು ಹಿಮ್ಮೆಟ್ಟಿಸಿತ್ತು. ಕೊನೆಯ ಲೀಗ್‌ ಮುಖಾಮುಖಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನವನ್ನು 2-1 ಗೋಲುಗಳಿಂದ ಮಣಿಸುವ ಮೂಲಕ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ.

ಎಲ್ಲ ವಿಭಾಗಗಳಲ್ಲೂ ಮೇಲುಗೈ
ಕೂಟದುದ್ದಕ್ಕೂ ಎಲ್ಲ ವಿಭಾಗಗಳಲ್ಲೂ ಭಾರತ ಪ್ರಭುತ್ವ ಸಾಧಿಸುತ್ತಲೇ ಬಂದಿದೆ. ಫಾರ್ವರ್ಡ್‌ಲೈನ್‌, ಮಿಡ್‌ಫಿàಲ್ಡ್‌, ಡಿಫೆನ್ಸ್‌ ವಿಭಾಗಗಳಲ್ಲಿ ಅಮೋಘ ಪ್ರದರ್ಶನ ನೀಡಿದೆ. ಸ್ಟ್ರೈಕರ್ ಫಾರ್ಮ್ ಅಮೋಘ ಮಟ್ಟದಲ್ಲಿದೆ. ಫೀಲ್ಡ್‌ ಗೋಲ್‌ ಬಾರಿಸುವುದರಲ್ಲಿ ಭರ್ಜರಿ ಯಶಸ್ಸು ಕಂಡಿರುವುದು ಪ್ಲಸ್‌ ಪಾಯಿಂಟ್‌. ಯುವ ಫಾರ್ವರ್ಡ್‌ ಆಟಗಾರರಾದ ಸುಖ್‌ಜೀತ್‌ ಸಿಂಗ್‌, ಅಭಿಷೇಕ್‌, ಉತ್ತಮ್‌ ಸಿಂಗ್‌, ಗುಜೋìತ್‌ ಸಿಂಗ್‌, ಅರೈಜೀತ್‌ ಸಿಂಗ್‌ ಹುಂಡಾಲ್‌ ಅವರೆಲ್ಲ ಗಮನ ಸೆಳೆಯುವ ಪ್ರದರ್ಶನ ನೀಡುತ್ತ ಬಂದಿದ್ದಾರೆ.

ಹಾಗೆಯೇ ಮಿಡ್‌ಫಿàಲ್ಡ್‌ ವಿಭಾಗದಲ್ಲಿ ರಾಜ್‌ಕುಮಾರ್‌ ಪಾಲ್‌ ಅತ್ಯಾಕರ್ಷಕ ಫೀಲ್ಡ್‌ ಗೋಲ್‌ ಮೂಲಕ ಹ್ಯಾಟ್ರಿಕ್‌ ಕೂಡ ಸಾಧಿಸಿದ್ದಾರೆ. ಹಿರಿಯ ಆಟಗಾರರಾದ ಮನ್‌ಪ್ರೀತ್‌ ಸಿಂಗ್‌, ಉಪನಾಯಕ ವಿವೇಕ್‌ ಸಾಗರ್‌ ಪ್ರಸಾದ್‌, ನೀಲಕಂಠ ಶರ್ಮ ಕೂಡ ಉತ್ತಮ ಲಯದಲ್ಲಿದ್ದಾರೆ. ಪಿ.ಆರ್‌. ಶ್ರೀಜೇಶ್‌ ಸ್ಥಾನವನ್ನು ತುಂಬಿರುವ ಕೃಶನ್‌ ಬಹಾದೂರ್‌ ಪಾಠಕ್‌ ಮತ್ತು ಸೂರಜ್‌ ಕರ್ಕೆರಾ ಎದುರಾಳಿಗಳಿಗೆ ಬಿಟ್ಟುಕೊಟ್ಟದ್ದು 4 ಗೋಲು ಮಾತ್ರ.

ವಿಶ್ವದ ಶ್ರೇಷ್ಠ ಡ್ರ್ಯಾಗ್‌ಫ್ಲಿಕರ್‌ಗಳಲ್ಲಿ ಒಬ್ಬರಾಗಿರುವ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಕಪ್ತಾನನ ಆಟದ ಮೂಲಕ ಮಿಂಚುತ್ತಿದ್ದಾರೆ. ಇವರೆಲ್ಲರ ಫಾರ್ಮ್ ಕೊರಿಯಾವನ್ನು ಮಣಿಸಲು ಧಾರಾಳ ಸಾಕು. ಕೊರಿಯಾ 5 ಲೀಗ್‌ ಪಂದ್ಯಗಳಲ್ಲಿ ಗೆದ್ದದ್ದು ಒಂದನ್ನು ಮಾತ್ರ. ಮೂರನ್ನು ಡ್ರಾ ಮಾಡಿಕೊಂಡರೆ, ಒಂದರಲ್ಲಿ ಸೋಲನುಭವಿಸಿದೆ. ಅಂಕಪಟ್ಟಿಯಲ್ಲಿ ಲಭಿಸಿದ್ದು 4ನೇ ಸ್ಥಾನ.

ಭಾರತ-ಪಾಕ್‌ ಫೈನಲ್‌?
ಪಾಕಿಸ್ಥಾನ-ಚೀನ ಮೊದಲ ಸೆಮಿಫೈನಲ್‌ನಲ್ಲಿ ಸೆಣಸಾಡಲಿದ್ದು (ಅಪರಾಹ್ನ 1.00), ಇಲ್ಲಿ ಪಾಕ್‌ ಫೇವರಿಟ್‌ ಆಗಿ ಗೋಚರಿಸುತ್ತಿದೆ. ಫೈನಲ್‌ನಲ್ಲಿ ಭಾರತ-ಪಾಕಿಸ್ಥಾನ ಮತ್ತೂಮ್ಮೆ ಎದುರಾಗುವ ಸಾಧ್ಯತೆ ಹೆಚ್ಚಿದೆ. ಫೈನಲ್‌ ಪಂದ್ಯ ಮಂಗಳವಾರ ನಡೆಯಲಿದೆ.

 ಭಾರತ-ಕೊರಿಯಾ
 ಆರಂಭ: ಅ. 3.00
 ಪ್ರಸಾರ: ಸೋನಿ ಸ್ಪೋರ್ಟ್ಸ್

ಟಾಪ್ ನ್ಯೂಸ್

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.