![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 29, 2022, 12:06 PM IST
ಮೆಲ್ಬರ್ನ್: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವವನ್ನೂ ಗೆದ್ದ ಆಸ್ಟ್ರೇಲಿಯಾ ತಂಡವು ಸರಣಿ ವಶಪಡಿಸಿಕೊಂಡಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಆಸ್ಟ್ರೇಲಿಯಾ ತಂಡವು ಮತ್ತಷ್ಟು ಹತ್ತಿರವಾಗಿದೆ.
ಆಸ್ಟ್ರೇಲಿಯಾ ಬೌಲಿಂಗ್ ದಾಳಿಗೆ ಸಿಲುಕಿದ ಹರಿಣಗಳು ಎರಡನೇ ಇನ್ನಿಂಗ್ಸ್ ನಲ್ಲಿ 204 ರನ್ ಗೆ ಆಲೌಟಾದರು. ಇದರೊಂದಿಗೆ ಪ್ಯಾಟ್ ಕಮಿನ್ಸ್ ಪಡೆ ಇನ್ನಿಂಗ್ ಮತ್ತು 182 ರನ್ ಅಂತರದ ವಿಜಯ ಸಾಧಿಸಿತು.
386 ರನ್ ಗಳ ಹಿನ್ನಡೆಗೆ ಸಿಲುಕಿದ್ದ ದಕ್ಷಿಣ ಆಫ್ರಿಕಾ ಒಂದು ವಿಕೆಟ್ ನಷ್ಟಕ್ಕೆ 15 ರನ್ ಮಾಡಿದ್ದಲ್ಲಿಂದ ಇಂದಿನ ದಿನದಾಟ ಆರಂಭಿಸಿತು. ತೆಂಬ ಬವುಮಾ ಮತ್ತು ಕೈಲ್ ವೇರೈಯ್ನೆ ಬಿಟ್ಟರೆ ಬೇರೆ ಯಾರೂ ಪ್ರತಿರೋಧ ತೋರಲಿಲ್ಲ. ಬವುಮಾ 65 ರನ್ ಗಳಿಸಿದರೆ, ಕೈಲ್ 33 ರನ್ ಮಾಡಿದರು. 204 ರನ್ ಗೆ ಆಫ್ರಿಕಾ ಆಲೌಟಾಯಿತು.
ಆಸೀಸ್ ಪರ ನಥನ್ ಲಿಯಾನ್ ಮೂರು ವಿಕೆಟ್, ಬೊಲಾಂಡ್ ಎರಡು ವಿಕೆಟ್, ಕಮಿನ್ಸ್, ಸ್ಟಾರ್ಕ್ ಮತ್ತು ಸ್ಮಿತ್ ತಲಾ ಒಂದು ವಿಕೆಟ್ ಪಡೆದರು.
ಇದನ್ನೂ ಓದಿ:ಆನೆಗುಡ್ಡೆ ಶ್ರೀ ವಿನಾಯಕ ದೇಗುಲ; 21 ಸಾವಿರ ತೆಂಗಿನಕಾಯಿಯ ಮೂಡುಗಣಪತಿ ಸೇವೆ
ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ 189 ರನ್ ಗಳಿಸಿದ್ದರೆ, ಆಸೀಸ್ ತಂಡವು 575 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ದ್ವಿಶತಕ ಬಾರಿಸಿದ ಡೇವಿಡ್ ವಾರ್ನರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಈ ಪಂದ್ಯದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಟ್ಟಿಯಲ್ಲಿ ತನ್ನ ಮೊದಲ ಸ್ಥಾನವನ್ನು ಮತ್ತಷ್ಟು ಭದ್ರ ಮಾಡಿಕೊಂಡಿದೆ. ಆಸೀಸ್ 78.57 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, 58.93 ಅಂಕಗಳೊಂದಿಗೆ ಭಾರತ ಎರಡನೇ ಸ್ಥಾನದಲ್ಲಿದೆ. ಪಂದ್ಯ ಸೋತ ದಕ್ಷಿಣ ಆಫ್ರಿಕಾ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.