![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 8, 2021, 1:15 PM IST
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ಸಮಬಲದ ಹೋರಾಟ ನಡೆಸುತ್ತಿದೆ. ಸದ್ಯ ದ್ವಿತೀಯ ದಿನದಾಟದ ಅಂತ್ಯಕ್ಕೆ ಭಾರತ ತಂಡ ಎರಡು ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿದೆ.
ಹೊಸ ಆರಂಭಿಕ ಜೋಡಿಯೊಂದಿಗೆ ಕಣಕ್ಕಿಳಿದ ಭಾರತ ತಂಡಕ್ಕೆ ಉತ್ತಮ ಆರಂಭವೇ ಸಿಕ್ಕಿತು. ರೋಹಿತ್- ಗಿಲ್ ಮೊದಲ ವಿಕೆಟ್ ಗೆ 70 ರನ್ ಒಟ್ಟುಗೂಡಿಸಿದರು. ಯುವ ಆಟಗಾರ ಶುಭ್ಮನ್ ಗಿಲ್ ತಮ್ಮ ಮೊದಲ ಅರ್ಧಶತಕ ಬಾರಿಸಿದರು. ಆದರೆ ರೋಹಿತ್ ಶರ್ಮಾ 26 ರನ್ ಗಳಿಸಿ ಔಟಾಗಿ ನಿರಾಸೆ ಮೂಡಿಸಿದರು.
ಸದ್ಯ ಪೂಜಾರ (9 ರನ್) ಮತ್ತು ನಾಯಕ ರಹಾನೆ (5 ರನ್) ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದೆ. ಭಾರತ ಸದ್ಯ 242 ರನ್ ಹಿನ್ನಡೆಯಲ್ಲಿದೆ.
ಆಸೀಸ್ 338 ರನ್
ಈ ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 105.4 ಓವರ್ ನಲ್ಲಿ 338 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಭರ್ಜರಿ ಬ್ಯಾಟಿಂಗ್ ನಡೆಸಿದ ಸ್ಮಿತ್ 131 ರನ್ ಗಳಿಸಿದರೆ, ಮಾರ್ನಸ್ ಲಬುಶೇನ್ 91 ರನ್ ಗೆ ಔಟಾಗಿ ಶತಕ ವಂಚಿತರಾದರು.
ಇದನ್ನೂ ಓದಿ:ವಿಶ್ವದಾಖಲೆ ಬರೆದ ಯಶ್ ‘ಕೆಜಿಎಫ್ ಚಾಪ್ಟರ್-2’ ಟೀಸರ್
ಎರಡು ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿದ್ದಲ್ಲಿಂದ ಇಂದು ಬ್ಯಾಟಿಂಗ್ ಮುಂದುವರಿಸಿದ ಕಾಂಗರೂಗಳಿಗೆ ಸ್ಮಿತ್ ಮತ್ತು ಲಬುಶೇನ್ ಆಧಾರವಾದರು. ನಂತರ ಬಂದ ಮ್ಯಾಥ್ಯೂ ವೇಡ್ ಮತ್ತು ಕ್ಯಾಮರೂನ್ ಗ್ರೀನ್, ಟಿಮ್ ಪೇನ್, ಪ್ಯಾಟ್ ಕಮಿನ್ಸ್ ಬೇಗನೇ ವಿಕೆಟ್ ಒಪ್ಪಿಸಿದರು.
ಭಾರತದ ಪರ ರವೀಂದ್ರ ಜಡೇಜಾ ನಾಲ್ಕು ವಿಕೆಟ್ ಪಡೆದು ಮಿಂಚಿದರು. ಬುಮ್ರಾ ಮತ್ತು ಸೈನಿ ತಲಾ ಎರಡು ವಿಕೆಟ್ ಪಡೆದರೆ, ಸಿರಾಜ್ ಒಂದು ವಿಕೆಟ್ ಪಡೆದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.