ಟಿ20; ಆಸ್ಟ್ರೇಲಿಯ ವನಿತೆಯರಿಗೆ 2-0 ಸರಣಿ


Team Udayavani, Oct 10, 2021, 11:18 PM IST

ಟಿ20; ಆಸ್ಟ್ರೇಲಿಯ ವನಿತೆಯರಿಗೆ 2-0 ಸರಣಿ

ಗೋಲ್ಡ್‌ ಕೋಸ್ಟ್‌: ಆತಿಥೇಯ ಆಸ್ಟ್ರೇಲಿಯ ವಿರುದ್ಧದ ಅಂತಿಮ ಟಿ20 ಪಂದ್ಯವನ್ನು 14 ರನ್ನುಗಳಿಂದ ಕಳೆದುಕೊಂಡ ಭಾರತದ ವನಿತೆಯರು ಸರಣಿ ಸೋಲಿಗೆ ತುತ್ತಾಗಿದ್ದಾರೆ.

ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯ 5 ವಿಕೆಟಿಗೆ 149 ರನ್‌ ಪೇರಿ ಸಿತು. ಈ ಕಠಿನ ಸವಾಲಿಗೆ ಜವಾಬು ನೀಡುವಲ್ಲಿ ಎಡವಿದ ಭಾರತ 6 ವಿಕೆಟಿಗೆ 135 ರನ್‌ ಗಳಿಸಿ ಶರಣಾಯಿತು. ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರೆ, ದ್ವಿತೀಯ ಮುಖಾಮುಖಿಯನ್ನು ಆಸೀಸ್‌ 4 ವಿಕೆಟ್‌ಗಳಿಂದ ಜಯಿಸಿತ್ತು.

ಕಾಂಗರೂಗಳ ಬೃಹತ್‌ ಮೊತ್ತಕ್ಕೆ ಕಾರಣರಾದವರು ಓಪನರ್‌ ಬೆತ್‌ ಮೂನಿ ಮತ್ತು ಆಲ್‌ರೌಂಡರ್‌ ಟಹ್ಲಿಯಾ ಮೆಗ್ರಾತ್‌. ಮೂನಿ 18ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡು 61 ರನ್‌ ಬಾರಿಸಿದರು. 43 ಎಸೆತಗಳ ಈ ಇನ್ನಿಂಗ್ಸ್‌ ನಲ್ಲಿ 10 ಬೌಂಡರಿ ಒಳಗೊಂಡಿತ್ತು. ಮೆಗ್ರಾತ್‌ 31 ಎಸೆತನಿಭಾಯಿಸಿ ಅಜೇಯ 44 ರನ್‌ ಬಾರಿಸಿದರು (6 ಬೌಂಡರಿ, 1 ಸಿಕ್ಸರ್‌).

ಇದನ್ನೂ ಓದಿ:ಪ್ರತಿ ಜಿಲ್ಲೆಯಲ್ಲಿ ಮಾದರಿ ಕೋವಿಡ್‌ಫೀಲ್ಡ್‌ ಆಸ್ಪತ್ರೆ ತೆರೆಯಲು ಸರ್ಕಾರ ಸಿದ್ಧವಿದೆ

ದೊಡ್ಡ ಮೊತ್ತದ ಚೇಸಿಂಗ್‌ ವೇಳೆ ಡ್ಯಾಶಿಂಗ್‌ ಓಪನರ್‌ ಶಫಾಲಿ ವರ್ಮ (1) ಅಗ್ಗಕ್ಕೆ ಔಟಾದದ್ದು ಭಾರತಕ್ಕೆ ಹಿನ್ನಡೆಯಾಗಿ ಪರಿಣಮಿಸಿತು. ಮಧ್ಯಮ ಕ್ರಮಾಂಕವೂ ಕೈಕೊಟ್ಟಿತು. ಆದರೆ ಸ್ಮತಿ ಮಂಧನಾ ಹಾಗೂ ಕೆಳ ಕ್ರಮಾಂಕದಆಟಗಾರ್ತಿ ರಿಚಾ ಘೋಷ್‌ ದಿಟ್ಟ ಹೋರಾಟ ಸಂಘಟಿಸಿದರು. ಮಂಧನಾ 49 ಎಸೆತಗಳಿಂದ 52 ರನ್‌ ಮಾಡಿದರೆ (8 ಬೌಂಡರಿ), ರಿಚಾ 11 ಎಸೆತಗಳಿಂದ ಅಜೇಯ 23 ರನ್‌ ಬಾರಿಸಿದರು. ಪಂದ್ಯದ ಅಂತಿಮ ಓವರ್‌ನಲ್ಲಿ ಸಿಡಿದ ದೀಪ್ತಿ-ರಿಚಾ 21 ರನ್‌ ಸೂರೆಗೈದರು. ರಿಚಾ ಬೇಗನೇ ಕ್ರೀಸಿಗೆ ಬಂದದ್ದಿದ್ದರೆ ಭಾರತಕ್ಕೆ ಸರಣಿ ಸಮಬಲದ ಅವಕಾಶ ಹೆಚ್ಚಿರುತ್ತಿತ್ತು.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ-5 ವಿಕೆಟಿಗೆ 149 (ಮೂನಿ 61, ಮೆಗ್ರಾತ್‌ ಔಟಾಗದೆ 44, ರಾಜೇಶ್ವರಿ 37ಕ್ಕೆ 2). ಭಾರತ-6 ವಿಕೆಟಿಗೆ 135 (ಮಂಧನಾ 52, ಜೆಮಿಮಾ 23, ರಿಚಾ ಔಟಾಗದೆ 23, ಕೌರ್‌ 13, ಕ್ಯಾರಿ 42ಕ್ಕೆ 2).
ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ: ಟಹ್ಲಿಯಾ ಮೆಗ್ರಾತ್‌.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.