![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
AUSvsPAK: ವಿದಾಯದ ಸರಣಿಯಲ್ಲಿ ವಾರ್ನರ್ ಮಿಂಚು; ಪಾಕ್ ವಿರುದ್ಧ ಭರ್ಜರಿ ಶತಕ
Team Udayavani, Dec 14, 2023, 12:39 PM IST
![AUSvsPAK: ವಿದಾಯದ ಸರಣಿಯಲ್ಲಿ ವಾರ್ನರ್ ಮಿಂಚು; ಪಾಕ್ ವಿರುದ್ಧ ಭರ್ಜರಿ ಶತಕ](https://www.udayavani.com/wp-content/uploads/2023/12/warner-3-620x342.jpg)
ಪರ್ತ್: ವಿದಾಯದ ಟೆಸ್ಟ್ ಸರಣಿ ಆಡುತ್ತಿರುವ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರು ಅದ್ಭುತ ಶತಕ ಬಾರಿಸಿ ಮಿಂಚಿದ್ದಾರೆ.
ಪಾಕಿಸ್ತಾನ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಪರ್ತ್ ನಲ್ಲಿ ನಡೆಯುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾಗೆ ಡೇವಿಡ್ ವಾರ್ನರ್ ಅದ್ಭುತ ಆರಂಭ ನೀಡಿದರು.
ತನ್ನ ಟ್ರೇಡ್ ಮಾರ್ಕ್ ಶೈಲಿಯಲ್ಲೇ ಬ್ಯಾಟ್ ಬೀಸಿದ ವಾರ್ನರ್ ಪಾಕ್ ಬೌಲರ್ ಗಳನ್ನು ದಂಡಿಸಿದರು. ಏಕದಿನ ಮಾದರಿಯಲ್ಲಿ ಆಡಿದ ವಾರ್ನರ್ 125 ಎಸೆತಗಳಲ್ಲಿ ಅವರು ಶತಕ ಪೂರೈಸಿದರು. ಆರಂಭದಲ್ಲಿ ಉಸ್ಮಾನ್ ಖ್ವಾಜಾ ಜೊತೆ ವಾರ್ನರ್ ಶತಕದ ಜೊತೆಯಾಟವಾಡಿದರು. ಖ್ವಾಜಾ 41 ರನ್ ಗಳಿಸಿ ಔಟಾದರು.
29ನೇ ಟೆಸ್ಟ್ ಶತಕ ಪೂರೈಸಿದ ವಾರ್ನರ್ ತಮ್ಮ ಎಂದಿನ ಜಿಗಿತದ ಶೈಲಿಯಲ್ಲಿ ಸಂಭ್ರಾಮಾಚರಣೆ ಮಾಡಿದರು. ಸದ್ಯ ಸಕ್ರಿಯ ಆಟಗಾರರ ಪೈಕಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಶತಕ ಬಾರಿಸಿದವರಲ್ಲಿ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದಾರೆ. ವಾರ್ನರ್ 49 ಶತಕ ಹೊಡೆದಿದ್ದರೆ, ಮೊದಲ ಸ್ಥಾನದಲ್ಲಿರುವ ವಿರಾಟ್ 80 ಶತಕ ಗಳಿಸಿದ್ದಾರೆ.
ಟೀ ವಿರಾಮದ ವೇಳೆಗೆ ಆಸ್ಟ್ರೇಲಿಯಾ ಎರಡು ವಿಕೆಟ್ ನಷ್ಟಕ್ಕೆ 210 ರನ್ ಗಳಿಸಿದೆ. ವಾರ್ನರ್ ಅಜೇಯ 111 ರನ್ ಮತ್ತು ಸ್ಮಿತ್ 21 ರನ್ ಮಾಡಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
This is David Warner. 💪
– Davey is roaring like a Lion in Test cricket. pic.twitter.com/dTpMfiwT0z
— Johns. (@CricCrazyJohns) December 14, 2023
ಟಾಪ್ ನ್ಯೂಸ್
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.