ರೋಹಿತ್ ಶರ್ಮಾ ಜೊತೆಗೆ ಬರ್ತ್ ಡೇ ಆಚರಿಸಿದ ಪಾಕ್ ನಾಯಕ ಬಾಬರ್ ಅಜಂ
Team Udayavani, Oct 15, 2022, 1:21 PM IST
ಪರ್ತ್: ಐಸಿಸಿ ಟಿ20 ವಿಶ್ವಕಪ್ ಗಾಗಿ 16 ತಂಡಗಳು ಆಸ್ಟ್ರೇಲಿಯಾದಲ್ಲಿ ಸೇರಿವೆ. ಶುಕ್ರವಾರ ಎಲ್ಲಾ 16 ತಂಡಗಳ ನಾಯಕರು ಫೋಟೋ ಶೂಟ್ ಗಾಗಿ ಸೇರಿದ್ದು, ಇದೇ ವೇಳೆ ಪಾಕಿಸ್ಥಾನ ನಾಯಕ ಬಾಬರ್ ಅಜಂ ಬರ್ತ್ ಡೇ ಆಚರಣೆ ನಡೆದಿದ್ದು ವಿಶೇಷ.
ಎಲ್ಲಾ ನಾಯಕರು ಮಾಧ್ಯಮಗಳೊಂದಿಗೆ ಮಾತನಾಡಿದ ನಂತರ, ಸಂಯೋಜಕ ಮೆಲ್ ಜೋನ್ಸ್ ಅವರು ಇಂದು ಪಾಕಿಸ್ತಾನದ ನಾಯಕನ ಜನ್ಮದಿನ ಎಂದು ಘೋಷಿಸುತ್ತಿದ್ದಂತೆ ಬಾಬರ್ ಗಾಗಿ ಆಸ್ಟ್ರೇಲಿಯಾದ ಕ್ಯಾಪ್ಟನ್ ಆರನ್ ಫಿಂಚ್ ಕೇಕ್ ಹಿಡಿದುಕೊಂಡು ಬಂದರು.
ಭಾರತೀಯ ನಾಯಕ ರೋಹಿತ್ ಶರ್ಮಾ ಸೇರಿದಂತೆ ಎಲ್ಲಾ 15 ಮಂದಿ ನಾಯಕರ ಸಮ್ಮುಖದಲ್ಲಿ ಬಾಬರ್ ಅಜಂ ಕೇಕ್ ಕಟ್ ಮಾಡಿ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡರು.
ಇದನ್ನೂ ಓದಿ:ಶಾಲೆಯಲ್ಲಿ ಬಲವಂತವಾಗಿ ಬಟ್ಟೆ ಬಿಚ್ಚಿಸಿದ ಶಿಕ್ಷಕಿ: ವಿದ್ಯಾರ್ಥಿನಿಯಿಂದ ಆತ್ಮಹತ್ಯೆಗೆ ಯತ್ನ
ಮಾಧ್ಯಮದವರೊಂದಿಗೆ ಮಾತನಾಡಿದ ಬಾಬರ್ ಅಜಂ, ಭಾರತ ವಿರುದ್ಧದ ಹೈವೋಲ್ಟೇಜ್ ಪಂದ್ಯದ ತಯಾರಿಯ ಬಗ್ಗೆ ಹೇಳಿದರು. ಅನುಭವಿ ಫಾಖರ್ ಜಮಾನ್ ಮತ್ತು ವೇಗಿ ಶಹೀನ್ ಅಫ್ರಿದಿ ತಂಡಕ್ಕೆ ಸೇರಿದ್ದು ಬಲ ತಂದಿದ್ದು, ಭಾರತ ವಿರುದ್ಧದ ಪಂದ್ಯದ ಮೊದಲು ಎರಡು ಅಭ್ಯಾಸ ಪಂದ್ಯವಾಡಲಿದ್ದಾರೆ ಎಂದರು.
Happy birthday @babarazam258 ?
That cake looks good! ?#T20WorldCup pic.twitter.com/JFNeBLoVg5
— ICC (@ICC) October 15, 2022
ರೋಹಿತ್ ಶರ್ಮಾ ಬಗ್ಗೆ ಮಾತನಾಡಿದ ಬಾಬರ್, ನಾನು ಅವರ ಅನುಭವಗಳಿಂದ ಕಲಿಯುತ್ತೇನೆ ಎಂದರು. ಇದೇ ವೇಳೆ ಮಾತನಾಡಿದ ರೋಹಿತ್, ಎರಡು ಕ್ರಿಕೆಟ್ ತಂಡಗಳ ನಡುವೆ ಉತ್ತಮ ಬಾಂಧವ್ಯವಿದೆ. ಆಟಗಾರರು ಒಂದೆಡೆ ಸೇರುವಾಗ ಕ್ರಿಕೆಟ್ ಬಗ್ಗೆ ಮಾತನಾಡುವುದಿಲ್ಲ, ಬದಲಾಗಿ ಪರಸ್ಪರರ ಕುಟುಂಬದ ಯೋಗಕ್ಷೇಮದ ಬಗ್ಗೆ, ಅವರು ಯಾವ ಕಾರನ್ನು ಖರೀದಿಸುತ್ತಿದ್ದಾರೆ ಅಥವಾ ಖರೀದಿಸಲು ಆಸಕ್ತಿ ಹೊಂದಿದ್ದಾರೆ ಎಂಬಂತಹ ಇತರ ವಿವರಗಳ ಬಗ್ಗೆ ಮಾತುಕತೆ ನಡೆಯುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ
IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್
MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್ ಖರ್ಬೀಕರ್ ನೇಮಕ
Yeah, Yes; ಕೋರ್ಟ್ನಲ್ಲಿ ಯಾ.. ಅನ್ನಬೇಡಿ, ಎಸ್ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್!
BJP Leader: ಯತ್ನಾಳ್ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.