Bangladesh; ಹಿಂದೂ ಕ್ರಿಕೆಟಿಗ ಲಿಟನ್ ದಾಸ್ ಮನೆಗೆ ಬೆಂಕಿ? ವೈರಲ್ ಸುದ್ದಿಯ ಸತ್ಯವೇನು?
ಕ್ರಿಕೆಟ್ ತಂಡದ ಮಾಜಿ ನಾಯಕ ಮುಶ್ರಫೆ ಮೊರ್ತಜಾ ಟಾರ್ಗೆಟ್!
Team Udayavani, Aug 7, 2024, 9:36 AM IST
ಢಾಕಾ: ಬಾಂಗ್ಲಾದೇಶದಲ್ಲಿ ದಂಗೆ ಭುಗಿಲೆದ್ದಿರುವ ಸಂಧರ್ಭದಲ್ಲಿ ಹಿಂದೂ ಕ್ರಿಕೆಟಿಗ ಲಿಟನ್ ದಾಸ್ ಅವರಿಗೆ ಸಂಬಂಧಿಸಿದ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಇದರಲ್ಲಿ ಲಿಟನ್ ದಾಸ್ ಅವರ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ.
ಬಾಂಗ್ಲಾದೇಶದಲ್ಲಿ ಪ್ರತಿಭಟನಾಕಾರರು ನಿರಂತರವಾಗಿ ಹಿಂಸಾಚಾರ ನಡೆಸುತ್ತಿದ್ದು, ಶೇಖ್ ಹಸೀನಾ ಬೆಂಬಲಿಗರಲ್ಲದೆ ಹಿಂದೂಗಳ ಮನೆ ಗಳ ಮೇಲೂ ದಾಳಿ ನಡೆಸಲಾಗುತ್ತಿದೆ. ಕ್ರಿಕೆಟಿಗ ಲಿಟನ್ ದಾಸ್ ಅವರ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ ಎಂದು ಸುದ್ದಿ ವೈರಲ್ ಆಗಿದೆ.
ವಾಸ್ತವವಾಗಿ, ಈ ಸುದ್ದಿಯಲ್ಲಿ ಯಾವುದೇ ಸತ್ಯವಿಲ್ಲ ಎಂದು ಹೇಳಲಾಗಿದೆ . ಪ್ರತಿಭಟನಾಕಾರರು ಲಿಟನ್ ದಾಸ್ ಅವರ ಮನೆಯನ್ನು ಗುರಿಯಾಗಿಸಿಕೊಂಡಿಲ್ಲ. ಆದರೆ ಬಾಂಗ್ಲಾದೇಶ ಕ್ರಿಕೆಟ್ ತಂಡದ ಮಾಜಿ ನಾಯಕ ಮಶ್ರಫೆ ಮೊರ್ತಜಾ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಮುಶ್ರಫೆ ಮೊರ್ತಜಾ ಅವರು ಶೇಖ್ ಹಸೀನಾ ಅವರ ಪಕ್ಷವಾದ ಬಾಂಗ್ಲಾದೇಶ ಅವಾಮಿ ಲೀಗ್ನ ಸಂಸದರಾಗಿದ್ದರು. ಇದರಿಂದ ಮುಶ್ರಫೆ ಮೊರ್ತಜಾ ಮೇಲೆ ಪ್ರತಿಭಟನಾಕಾರರ ಆಕ್ರೋಶ ಭುಗಿಲೆದ್ದಿದ್ದು ಅವರ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬುದು ಸ್ಪಷ್ಟವಾಗಿದೆ.
ಅಕ್ಟೋಬರ್ನಲ್ಲಿ ಮಹಿಳಾ ಟಿ20 ವಿಶ್ವಕಪ್ನ ಆತಿಥ್ಯವನ್ನು ಬಾಂಗ್ಲಾದೇಶ ವಹಿಸಿಕೊಂಡಿದ್ದು, ಪರಿಸ್ಥಿತಿಯನ್ನು ಐಸಿಸಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ರಾಜಕೀಯ ಪರಿಸ್ಥಿತಿಯಿಂದಾಗಿ ಅಪಾಯದ ಮೋಡಗಳು ಆವರಿಸಿದ್ದು ಅಲ್ಲಿ ನಡೆಯುವ ಅನುಮಾನಗಳು ಮೂಡಿವೆ.
ಮುಶ್ರಫೆ ಮೊರ್ತಜಾ, ಶೇಖ್ ಹಸೀನಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಗಂಭೀರ್ ಜಾಗಕ್ಕೆ ಹೊಸ ಮೆಂಟರ್ ಘೋಷಿಸಿದ ಕೋಲ್ಕತ್ತಾ ನೈಟ್ ರೈಡರ್ಸ್
Dwayne Bravo: ಎಲ್ಲಾ ಮಾದರಿ ಕ್ರಿಕೆಟ್ ನಿಂದ ನಿವೃತ್ತಿಯಾದ ʼಚಾಂಪಿಯನ್ʼ ಬ್ರಾವೋ
Karnataka; ರಾಜ್ಯ ಟೆನಿಸ್ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ
Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ಇಂದಿನಿಂದ
NADA; ನೋಟಿಸ್ ನೀಡಿದರೂ ವಿನೇಶ್ ಫೋಗಾಟ್ ವಿರುದ್ಧ ಕ್ರಮವಿಲ್ಲ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
World Tourism Day 2024: ಮಧ್ಯ ಕರ್ನಾಟಕದ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದೀರಾ?
Munirathna Case: ವಿಕಾಸಸೌಧದಲ್ಲೇ ಮುನಿರತ್ನ ರೇಪ್; ಸಂತ್ರಸ್ತೆ
Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.