ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ


Team Udayavani, Oct 22, 2021, 9:52 AM IST

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ನವದೆಹಲಿ: ಇಷ್ಟು ವರ್ಷಗಳವರೆಗೆ ಐಪಿಎಲ್‌ ನೇರಪ್ರಸಾರದಿಂದ ಬಿಸಿಸಿಐ ಭಾರೀ ಹಣ ಗಳಿಸಿದೆ ಎಂದು ಎಲ್ಲರೂ ಮಾತಾಡಿಕೊಳ್ಳುತ್ತಿದ್ದರು. ಈಗ ವಿಷಯ ಇನ್ನೂ ದುಬಾರಿಯಾಗಿದೆ. 2018-2022ರವರೆಗೆ ಐಪಿಎಲ್‌ ನೇರಪ್ರಸಾರಕ್ಕೆ ಸ್ಟಾರ್‌ ನ್ಪೋರ್ಟ್ಸ್ ನೀಡಿದ್ದ ಹಣ 16,347 ಕೋಟಿ ರೂ. 2023-2027ರವರೆಗೆ ಬಿಸಿಸಿಐಗೆ ಇದರ ದುಪ್ಪಟ್ಟು ಅಂದರೆ 36,000 ಕೋಟಿ ರೂ. ಬರುವ ಸಾಧ್ಯತೆಗಳಿವೆ. ಇದನ್ನು ಬಿಸಿಸಿಐ ಮೂಲಗಳೇ ಹೇಳಿವೆ.

ಪ್ರತೀ ಬಾರಿ ಬಿಸಿಸಿಐ ಐಪಿಎಲ್‌ ನೇರಪ್ರಸಾರಕ್ಕೆ ಬಿಡ್ಡಿಂಗ್‌ ಕರೆದಾಗಲೂ ದರ ವಿಪರೀತ ಏರುತ್ತಲೇ ಇದೆ. ಕೊರೊನಾ ಆ ಮಟ್ಟದಲ್ಲಿ ಕಾಡಿ ಪ್ರೇಕ್ಷಕರೇ ಮೈದಾನಕ್ಕೆ ಬರದಂತಾಗಿದ್ದರೂ ಐಪಿಎಲ್‌ ಜನಪ್ರಿಯತೆ ಕುಗ್ಗಿಲ್ಲ, ಮಾರುಕಟ್ಟೆ ಮೌಲ್ಯ ಏರುತ್ತಲೇ ಇರುವುದು ಅಚ್ಚರಿ ಮೂಡಿಸಿದೆ.

ಏನಿದು ಏರಿಕೆ, ಯಾಕೆ?: 2008ರಿಂದ 2017ರವರೆಗಿನ ಅವಧಿಯಲ್ಲಿ ಸೋನಿ ನೇರಪ್ರಸಾರದ ಹಕ್ಕನ್ನು ಹೊಂದಿತ್ತು. ಆಗದು 10 ವರ್ಷಗಳ ಅವಧಿಗೆ ನೀಡಿದ ಮೊತ್ತ 8,200 ಕೋಟಿ ರೂ. ಮುಂದೆ ಇದಕ್ಕೆ ದುಪ್ಪಟ್ಟು ಮೊತ್ತವನ್ನು ಸ್ಟಾರ್‌ ನ್ಪೋರ್ಟ್ಸ್ ಕೇವಲ 5 ವರ್ಷಗಳ ಅವಧಿಗೆ ನೀಡಿತು! ಈಗ ಮತ್ತೆ ದುಪ್ಪಟ್ಟಾಗುವ ಸಾಧ್ಯತೆಯಿದೆ. ಇದಕ್ಕೆ ಕಾರಣವೂ ಇದೆ.

ಮುಂದಿನವರ್ಷದಿಂದ ಐಪಿಎಲ್‌ ತಂಡಗಳ ಸಂಖ್ಯೆ 8ರಿಂದ 10ಕ್ಕೇರಲಿದೆ. ಈ ಎರಡು ತಂಡಗಳಿಂದಲೇ ಬಿಸಿಸಿಐಗೆ 7ರಿಂದ 10,000 ಕೋಟಿ ರೂ. ಬರುವ ನಿರೀಕ್ಷೆಯಿದೆ. ತಂಡಗಳ ಸಂಖ್ಯೆ ಹತ್ತಕ್ಕೇರಿದರೆ, ಪಂದ್ಯಗಳ ಸಂಖ್ಯೆ 60ರಿಂದ 74ಕ್ಕೇರಲಿದೆ. ಆಗ ಸಹಜವಾಗಿ ಮೊತ್ತ ದುಪ್ಪಟ್ಟಾಗಲಿದೆ ಎಂದು ಮೂಲಗಳು ಹೇಳುತ್ತವೆ.

ಇದನ್ನೂ ಓದಿ:ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಈ ಬಾರಿ ಐಪಿಎಲ್‌ ನೇರಪ್ರಸಾರದ ಹಕ್ಕು ಪಡೆಯಲು ಸ್ಟಾರ್‌ ನ್ಪೋರ್ಟ್ಸ್, ಅಮೆರಿಕದ ಒಂದು ಕಂಪನಿ ಪೈಪೋಟಿ ನಡೆಸಲಿವೆ. ಇವಕ್ಕೆ ಜೀ ಮತ್ತು ಸೋನಿ ಜಂಟಿಯಾಗಿ ಪೈಪೋಟಿ ನೀಡುವ ಸಾಧ್ಯತೆಯಿದೆ. ಹೀಗಿದ್ದಾಗ ಬೆಲೆ ಏರುವುದರಲ್ಲೇನು ಅಚ್ಚರಿ?! ಮುಂದಿನ ವರ್ಷ ಐಪಿಎಲ್‌ ಭಾರತದಲ್ಲೇ ನಡೆಯುವುದು ಖಾತ್ರಿ. ಹಾಗೆಯೇ ಪ್ರತೀ ಪಂದ್ಯಕ್ಕೆ ಪ್ರೇಕ್ಷಕರಿಗೂ ಪ್ರವೇಶವಿರುತ್ತದೆ. ಇದು ದರ ಇನ್ನಷ್ಟು ಏರಿಕೆಗೆ ಕಾರಣವಾಗಲಿದೆ.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.