TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ


Team Udayavani, Jun 30, 2024, 12:25 PM IST

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

ಬಾರ್ಬಡೋಸ್: ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಕೆನ್ನಿಂಗ್ಸ್ಟನ್ ಓವಲ್ ನಲ್ಲಿ ಟಿ20 ವಿಶ್ವಕಪ್ ಗೆದ್ದು ಬೀಗಿದೆ. ಸ್ಟೇಡಿಯಂನಲ್ಲಿ ಪಂದ್ಯ ವೀಕ್ಷಿಸಿದ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರು ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಭಾರತದ ಕೋಚ್ ಪಾತ್ರವನ್ನು ವಹಿಸಿದರೆ ಅದು ಭಾರತೀಯ ಕ್ರಿಕೆಟ್ ತಂಡಕ್ಕೆ ಒಳ್ಳೆಯದು ಎಂದು ಹೇಳಿದರು.

ಟೀಂ ಇಂಡಿಯಾ ಮುಖ್ಯ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರು ಈಗ ಮಾಜಿ ಆಗಿದ್ದಾರೆ. 2021ರಲ್ಲಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ್ದ ರಾಹುಲ್ ದ್ರಾವಿಡ್ ಅವರ ಅಧಿಕಾರವಧಿ 2023ರ ಏಕದಿನ ವಿಶ್ವಕಪ್ ವರೆಗೆ ಇತ್ತು. ಆದರೆ ಟಿ20 ವಿಶ್ವಕಪ್ ವರೆಗೆ ಅವರ ಅಧಿಕಾರವಧಿಯನ್ನು ಮುಂದುವರಿಸಲಾಗಿತ್ತು. ಇದೀಗ ಟಿ20 ವಿಶ್ವಕಪ್ ಮುಗಿಯುತ್ತಿದ್ದಂತೆ ದ್ರಾವಿಡ್ ಅವರ ಉತ್ತರಾಧಿಕಾರಿಯನ್ನು ನೇಮಿಸಬೇಕಿದೆ.

ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ಟೀಂ ಇಂಡಿಯಾದ ಮುಂದಿನ ಕೋಚ್ ಆಗಲಿದ್ದಾರೆ ಎನ್ನಲಾಗಿದೆ. ಐಪಿಎಲ್ 2024ರಲ್ಲಿ ಚಾಂಪಿಯನ್ ಆಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿದ್ದ ಗಂಭೀರ್ ಇತ್ತೀಚೆಗೆ ಬಿಸಿಸಿಐ ಸಂದರ್ಶನಕ್ಕೂ ಹಾಜರಾಗಿದ್ದರು.

ಭಾರತಕ್ಕೆ ಎಲ್ಲಾ ಮಾದರಿಯ ಕ್ರಿಕೆಟ್‌ ನಲ್ಲಿ ಆಡಿದ ಅನುಭವ ಇರುವವರು ಮುಖ್ಯ ಕೋಚ್ ಆಗಿ ಅಗತ್ಯವಿದೆ ಎಂದು ಬಿನ್ನಿ ಹೇಳಿದ್ದಾರೆ.

“ಗೌತಮ್ ಗಂಭೀರ್ ಅವರು ಸಾಕಷ್ಟು ಅನುಭವವನ್ನು ಹೊಂದಿದ್ದಾರೆ. ಅವರು ಈ ಕೆಲಸವನ್ನು ತೆಗೆದುಕೊಂಡರೆ ಅದು ಖಂಡಿತವಾಗಿಯೂ ಭಾರತೀಯ ಕ್ರಿಕೆಟ್‌ ಗೆ ಒಳ್ಳೆಯದು. ಅವರು ಅನುಭವ ಭಾರತಕ್ಕೆ ಬೇಕಾಗಿದೆ. ಭಾರತಕ್ಕೆ ಆಟದ ಮೂರು ಸ್ವರೂಪಗಳನ್ನು ಆಟವನ್ನು ಆಡಿದ ತರಬೇತುದಾರರ ಅಗತ್ಯವಿದೆ ಮತ್ತು ಅವರು ಎಲ್ಲದರಲ್ಲೂ ಆಡಿದ್ದಾರೆ” ಎಂದು ಬಿನ್ನಿ ಎಎನ್‌ಐಗೆ ತಿಳಿಸಿದರು.

ವಿಶ್ವಕಪ್ ಗೆಲುವಿನ ಬಳಿಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಚುಟುಕು ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದರು. ಈ ಬಗ್ಗೆ ಮಾತನಾಡಿದ ರೋಜರ್ ಬಿನ್ನಿ, ಇಂತಹ ಆಟಗಾರನ್ನು ಬದಲಾಯಿಸುವುದು ಕಷ್ಟ. ಆದರೆ ಯುವ ಆಟಗಾರರು ಜಾಗ ತುಂಬುವ ವಿಶ್ವಾಸವಿದೆ ಎಂದರು.

“ಅವರು ಅದ್ಭುತ ಆಟಗಾರರು, ಕೂಡಲೇ ಅವರನ್ನು ರಿಪ್ಲೇಸ್ ಮಾಡುವುದು ಕಷ್ಟ. ಈ ಕ್ಷಣದಲ್ಲಿ ಅವರನ್ನು ಕಳೆದುಕೊಂಡಿದ್ದು ದೊಡ್ಡ ನಷ್ಟ. ಆದರೆ ನಮಗೆ ಯುವ ಆಟಗಾರರು ಸಿಗುವ ವಿಶ್ವಾಸವಿದೆ” ಎಂದರು.

ಟಾಪ್ ನ್ಯೂಸ್

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

badminton

Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು  ಶಟ್ಲರ್‌ ಸಾವು

1-sikka

India ಸರಣಿಗೆ ಜಿಂಬಾಬ್ವೆ ತಂಡ : ಸಿಕಂದರ್‌ ರಝ ನಾಯಕ

jay-shah

Sri Lanka ಪ್ರವಾಸದಿಂದ ಭಾರತ ತಂಡಕ್ಕೆ ಹೊಸ ಕೋಚ್‌: ಶಾ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.