Bengaluru; 4 ಮೈದಾನ, 45 ಪಿಚ್‌‌, ಸ್ವಿಮ್ಮಿಂಗ್‌ ಪೂಲ್…. ಹೊಸ ಎನ್‌ಸಿಎನಲ್ಲಿ ಏನೇನಿದೆ?


Team Udayavani, Aug 4, 2024, 10:44 AM IST

ನಾಲ್ಕು ಮೈದಾನ, 45 ಪಿಚ್‌…. ಹೊಸ ಎನ್‌ಸಿಎನಲ್ಲಿ ಏನೇನಿದೆ?

ಬೆಂಗಳೂರು: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಇದೀಗ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಹೊಸ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ (NCA) ನಿರ್ಮಿಸಿದೆ. ಇದು ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಹೇಳಿದ್ದಾರೆ.

ಸದ್ಯ ಇರುವ ಎನ್‌ ಸಿಎ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ತಾಗಿಕೊಂಡಿದೆ. ಇದೀಗ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರ ಇರುವಂತೆ ಹೊಸ ಎನ್‌ ಸಿಎ ನಿರ್ಮಿಸಲಾಗಿದೆ. ಇದು ವಿಶಾಲವಾಗಿದ್ದು, ಎಲ್ಲಾ ಸೌಕರ್ಯಗಳು ಇರಲಿದೆ. ನೂತನ ಎನ್‌ಸಿಎ ಪ್ರತ್ಯೇಕವಾಗಿ ವಿಸ್ತಾರ ಸಂಕೀರ್ಣದಲ್ಲಿ ಇರಲಿದೆ.

ಶನಿವಾರ (ಆ 03) ಈ ಬಗ್ಗೆ ಟ್ವೀಟ್‌ ಮಾಡಿರುವ ಜಯ್‌ ಶಾ, “ಬೆಂಗಳೂರಿನಲ್ಲಿ ನೂತನ ರಾಷ್ಟ್ರೀಯ ಅಕಾಡೆಮಿ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವೇ ಉದ್ಘಾಟನೆ ನಡೆಯಲಿದೆ ಎಂದು ತಿಳಿಸಲು ಉತ್ಸಾಹಿತನಾಗಿದ್ದೇನೆ. ಹೊಸ ಎನ್‌ಸಿಎಯಲ್ಲಿ ವಿಶ್ವ ದರ್ಜೆಯ ಮೈದಾನಗಳು, 45 ಪ್ರ್ಯಾಕ್ಟೀಸ್‌ ಪಿಚ್‌ಗಳು, ಇಂಡೋರ್‌ ಕ್ರಿಕೆಟ್‌ ಪಿಚ್‌ಗಳು, ಒಲಿಂಪಿಕ್‌ ಗಾತ್ರದ ಈಜುಕೊಳಗಳು, ಸ್ಟೇಟ್‌ ಆಫ್ ಆರ್ಟ್‌ ಟ್ರೇನಿಂಗ್‌, ಪುನಶ್ಚೇತನ, ಕ್ರೀಡಾ ವಿಜ್ಞಾನಕ್ಕೆ ಸಂಬಂಧಿಸಿ ಸೌಲಭ್ಯಗಳು ಇರಲಿವೆ” ಎಂದು ಬರೆದುಕೊಂಡಿದ್ದಾರೆ.

ಬಿಸಿಸಿಐ ಕಾರ್ಯದರ್ಶಿಯಾಗಿ ಜಯ್‌ ಶಾ ಜವಾಬ್ದಾರಿ ಹೊತ್ತುಕೊಂಡ ಬಳಿಕ ಕ್ರಿಕೆಟ್‌ನಲ್ಲಿ ಕೆಲವೊಂದು ಸಕಾರಾತ್ಮಕ ಬದಲಾವಣೆಗಳಾಗಿವೆ. ಮಾಜಿ ಆಟಗಾರರು, ಮಾಜಿ ಅಂಪೈರ್‌ ಗಳ ಪಿಂಚಣಿಯನ್ನು ಹೆಚ್ಚಿಸಲಾಗಿದೆ. ವುಮೆನ್ಸ್‌ ಪ್ರೀಮಿಯರ್‌ ಲೀಗ್‌ (ಡಬ್ಲ್ಯೂಪಿಎಲ್‌) ಆರಂಭವಾಗಿದ್ದರಲ್ಲೂ ಜಯ್‌ ಶಾ ಪಾತ್ರವಿದೆ.

ದೇಶದಾದ್ಯಂತ ಹಲವಾರು ಕ್ರಿಕೆಟಿಗರನ್ನು ಬೆಳೆಸುವಲ್ಲಿ ಎನ್‌ ಸಿಎ ಪ್ರಮುಖ ಪಾತ್ರ ವಹಿಸಿದೆ. ಗಾಯಗಳಿಂದ ಚೇತರಿಸಿಕೊಳ್ಳುವ ರಾಷ್ಟ್ರೀಯ ಆಟಗಾರರಿಗೆ ಇದು ಪ್ರಮುಖ ಸ್ಥಳವಾಗಿ ಕಾರ್ಯನಿರ್ವಹಿಸುತ್ತದೆ. ಪುನರ್ವಸತಿ ಮತ್ತು ಅವರ ಫಾರ್ಮ್ ಅನ್ನು ಮರಳಿ ಪಡೆಯಲು ಅಭ್ಯಾಸ ಆಟಗಳಲ್ಲಿ ತೊಡಗಿಸಿಕೊಳ್ಳಲು ಆಟಗಾರರಿಗೆ ಎನ್‌ ಸಿಎ ಅವಕಾಶವನ್ನು ನೀಡುತ್ತದೆ. ಜಸ್ಪ್ರೀತ್ ಬುಮ್ರಾ (ಬೆನ್ನುನೋವು) ಮತ್ತು ರಿಷಭ್ ಪಂತ್ (ಕಾರು ಅಪಘಾತ) ಅವರು ಇತ್ತೀಚಿನ ದಿನಗಳಲ್ಲಿ ಎನ್‌ಸಿಎಯಲ್ಲಿ ಚೇತರಿಕೆಗೆ ಒಳಗಾದ ಪ್ರಮುಖ ಆಟಗಾರರು.

ಹೆಚ್ಚುವರಿಯಾಗಿ, ಎನ್‌ಸಿಎ ಅಂತಾರಾಷ್ಟ್ರೀಯ ಪ್ರವಾಸಗಳಿಗೆ ಮುನ್ನ ಟೀಮ್ ಇಂಡಿಯಾಕ್ಕೆ ತರಬೇತಿ ಶಿಬಿರಗಳನ್ನು ಆಯೋಜಿಸುತ್ತದೆ; ಶ್ರೀಲಂಕಾದ ಸೀಮಿತ ಓವರ್‌ಗಳ ಪ್ರವಾಸದ ಮೊದಲು, ಭಾರತೀಯ ಆಟಗಾರರು ಬೆಂಗಳೂರಿನಲ್ಲಿ ಒಟ್ಟುಗೂಡಿ ತರಬೇತಿ ಪಡೆದರು.

ಸದ್ಯ ವಿವಿಎಸ್ ಲಕ್ಷ್ಮಣ್ ಅವರು ಎನ್‌ ಸಿಎ ಅಧ್ಯಕ್ಷರಾಗಿದ್ದಾರೆ. ಅವರ ಅಧಿಕಾರವಧಿ ಶೀಘ್ರದಲ್ಲಿ ಅಂತ್ಯವಾಗಲಿದೆ. ಭಾರತದ ಮಾಜಿ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಅವರು ಮುಂದಿನ ಎನ್‌ ಸಿಎ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಬಹುದು ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.