ಬೌಲಿಂಗ್‌ ಕೋಚ್‌; ಪ್ರಸಾದ್‌ ಆಸಕ್ತಿ


Team Udayavani, Jun 30, 2017, 3:35 AM IST

SPORTS-12.jpg

ಬೆಂಗಳೂರು: ಮಾಜಿ ಬೌಲರ್‌ ವೆಂಕಟೇಶ ಪ್ರಸಾದ್‌ ಟೀಮ್‌ ಇಂಡಿಯಾದ ಬೌಲಿಂಗ್‌ ಕೋಚ್‌ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಆದರೆ ತಂಡದ ಪ್ರಧಾನ ಕೋಚ್‌ ಬಗ್ಗೆ ತನಗೆ ಆಸಕ್ತಿ ಇಲ್ಲ, ಜು. 9ರ ಗಡುವು ವಿಧಿಸಲಾಗಿದ್ದರೂ ತಾನು ಅರ್ಜಿ ಸಲ್ಲಿಸುವುದಿಲ್ಲ ಎಂದಿದ್ದಾರೆ.

ತಂಡದ ಕೋಚ್‌ ಆಗಿ ಯಾರೇ ಆಯ್ಕೆಯಾದರೂ ಸಮಸ್ಯೆ ಇಲ್ಲ. ಅದು ಸೆಹವಾಗ್‌ ಆಗಿರಲಿ ಅಥವಾ ರವಿ ಶಾಸ್ತ್ರಿ ಆಗಿರಲಿ, ತನ್ನ ಅನುಭವ ಹಾಗೂ ತಿಳಿವಳಿಕೆಯೊಂದಿಗೆ ಇವರ ಜತೆ ಹೊಂದಿಕೊಂಡು ಹೋಗಬಲ್ಲೆ ಎಂದಿದ್ದಾರೆ 47ರ ಹರೆಯದ ವೆಂಕಟೇಶ ಪ್ರಸಾದ್‌.

“ನಾನು ತಂಡದ ಪ್ರಧಾನ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ. ಸಲ್ಲಿಸುವುದೂ ಇಲ್ಲ. ಆದರೆ ಭಾರತ ತಂಡದ ಸಹಾಯಕ ಕೋಚ್‌ ಅಥವಾ ಬೌಲಿಂಗ್‌ ಕೋಚ್‌ ಬಗ್ಗೆ ನನಗೆ ಆಸಕ್ತಿ ಇದೆ’ ಎಂದು ಪ್ರಸಾದ್‌ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಪ್ರಸಾದ್‌ 2007ರಲ್ಲಿ ಭಾರತ ತಂಡದ ಬೌಲಿಂಗ್‌ ಕೋಚ್‌ ಆಗಿ ಆಯ್ಕೆಯಾಗಿ, 2 ವರ್ಷಗಳ ಕಾಲ ಈ ಹುದ್ದೆಯಲ್ಲಿದ್ದರು. ಭಾರತ ಟಿ-20 ವಿಶ್ವಕಪ್‌ ಗೆದ್ದದ್ದು ಪ್ರಸಾದ್‌ ಕಾಲಾವಧಿಯಲ್ಲೇ ಎಂಬುದು ಉಲ್ಲೇಖನೀಯ.

ಮುಂದಿನ ಶ್ರೀಲಂಕಾ ಪ್ರವಾಸದೊಳಗಾಗಿ ಭಾರತ ತಂಡದ ಪ್ರಧಾನ ಕೋಚ್‌ ಆಯ್ಕೆ ಪ್ರಕ್ರಿಯೆಯನ್ನು “ಕ್ರಿಕೆಟ್‌ ಸಲಹಾ ಸಮಿತಿ’ (ಸಿಎಸಿ) ಪೂರ್ತಿಗೊಳಿಸಬೇಕಿದೆ. ಹೀಗೆ ಆಯ್ಕೆಗೊಂಡ ಕೋಚ್‌ಗೆ ತನ್ನ ಸಹಾಯಕ ಸಿಬಂದಿಗಳ ಆಯ್ಕೆ ಬಗ್ಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗುವುದು.

ಆನಿಲ್‌ ಕುಂಬ್ಳೆ ಭಾರತ ತಂಡದ ಕೋಚ್‌ ಆಗಿದ್ದಾಗ ಕೇವಲ ಬ್ಯಾಟಿಂಗ್‌ ಕೋಚ್‌ (ಸಂಜಯ್‌ ಬಂಗಾರ್‌) ಮತ್ತು ಫೀಲ್ಡಿಂಗ್‌ ಕೋಚ್‌ (ಆರ್‌. ಶ್ರೀಧರ್‌) ಮಾತ್ರ ಇದ್ದರು. ಸ್ವತಃ ಬೌಲರ್‌ ಆಗಿದ್ದ ಕುಂಬ್ಳೆ ಈ ವಿಭಾಗದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಮಾರ್ಚ್‌ 2017ಕ್ಕೆ ಬಂಗಾರ್‌ ಮತ್ತು ಶ್ರೀಧರ್‌ ಒಡಂಬಡಿಕೆಯ ಅವಧಿ ಮುಗಿದರೂ ಬಿಸಿಸಿಐ ಸಲಹೆ ಮೇರೆಗೆ ವೆಸ್ಟ್‌ ಇಂಡೀಸ್‌ ಪ್ರವಾಸದ ತನಕ ಮುಂದುವರಿಯುವಂತೆ ಇವರಿಗೆ ಸೂಚಿಸಲಾಗಿತ್ತು.

ವೆಂಕಟೇಶ ಪ್ರಸಾದ್‌ 2016ರ ಕೋಚ್‌ ಆಯ್ಕೆ ವೇಳೆ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ಅಂತಿಮ ಸುತ್ತನ್ನೂ ತಲುಪಿರಲಿಲ್ಲ. ಬಳಿಕ ಅನಿಲ್‌ ಕುಂಬ್ಳೆ ಆಯ್ಕೆಯಾದದ್ದು ಈಗ ಇತಿಹಾಸ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ccrr

Cricket ದಾಖಲೆಯ ಹೊಸ್ತಿಲಲ್ಲಿ ಭಾರತ-ಬಾಂಗ್ಲಾ ಸರಣಿ

K L RAhul

KL Rahul ಮತ್ತೆ ಆರ್‌ಸಿಬಿಗೆ ? ವೀಡಿಯೊ ವೈರಲ್‌

1-eewqe

‘Wrestling Champions Super League’: ಅನುಮತಿ ನೀಡಲು ನಕಾರ

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.