![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 21, 2022, 11:15 PM IST
ಟೋಕಿಯೊ: ಸೋಮವಾರದಿಂದ ಜಪಾನ್ ರಾಜಧಾನಿ ಟೋಕಿಯೋದಲ್ಲಿ ಆರಂಭ ವಾಗಲಿರುವ ಪ್ರತಿಷ್ಠಿತ “ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್’ನಿಂದ ಪಿ.ವಿ. ಸಿಂಧು ಹೊರ ಗುಳಿಯುವ ಕಾರಣ ಭಾರತೀಯರ ಲಕ್ಷ್ಯವೆಲ್ಲ ಯುವ ಆಟಗಾರ ಲಕ್ಷ್ಯ ಸೇನ್ ಅವರತ್ತ ಹರಿದಿದೆ. ಎಚ್.ಎಸ್. ಪ್ರಣಯ್ ಮೇಲೂ ಭಾರೀ ಭರವಸೆ ಇಡಲಾಗಿದೆ.
ಮೊದಲ ಬಾರಿಗೆ ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ಎನಿಸಿಕೊಂಡ ಸಿಂಧು ಪಾದದ ನೋವಿನಿಂದಾಗಿ ಈ ಕೂಟವನ್ನು ತಪ್ಪಿಸಿಕೊಳ್ಳುತ್ತಿದ್ದಾರೆ. ಕಳೆದೊಂದು ದಶಕದಲ್ಲಿ ಸಿಂಧು “ಬಿಡ ಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್’ ಕೂಟವನ್ನು ತಪ್ಪಿಸಿಕೊಳ್ಳುತ್ತಿರುವುದು ಇದೇ ಮೊದಲು.
ಬರಿಗೈಯಲ್ಲಿ ಬಂದದ್ದಿಲ್ಲ
2011ರಿಂದೀಚೆ ಭಾರತದ ಶಟ್ಲರ್ “ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್’ನಿಂದ ಬರಿಗೈಯಲ್ಲಿ ಮರಳಿದ್ದಿಲ್ಲ. ಹೀಗಾಗಿ ಲಕ್ಷ್ಯ ಸೇನ್, ಎಚ್.ಎಸ್. ಪ್ರಣಯ್, ಕೆ. ಶ್ರೀಕಾಂತ್ ಮೇಲೆ ಪದಕದ ಭರವಸೆ ಇಡಲಾಗಿದೆ. 2021ರ ಕೂಟದಲ್ಲಿ ಶ್ರೀಕಾಂತ್ ಮತ್ತು ಲಕ್ಷ ಸೇನ್ ಕ್ರಮವಾಗಿ ಬೆಳ್ಳಿ ಹಾಗೂ ಕಂಚು ಜಯಿಸಿದ್ದರು. ಆದರೆ ಈ ಬಾರಿ ಸವಾಲು ಹೆಚ್ಚು ಕಠಿನವಾಗಿದೆ.
2021ರ ಪಂದ್ಯಾವಳಿಯಲ್ಲಿ ಬಲಿಷ್ಠ ಆಟ ಗಾರರಾದ ಜಪಾನ್ನ ಕೆಂಟೊ ಮೊಮೊಟ, ಇಂಡೋನೇಷ್ಯಾದ ಜೊನಾಥನ್ ಕ್ರಿಸ್ಟಿ, ಆ್ಯಂಟನಿ ಗಿಂಟಿಂಗ್ ಕಾಣಿಸಿಕೊಂಡಿರಲಿಲ್ಲ. ಈ ಬಾರಿ ಇವರೆಲ್ಲರೂ ಇದ್ದಾರೆ. ಆದರೂ ಕಳೆದ ಕೆಲವು ಸಮಯದಿಂದ ಅಮೋಘ ಪ್ರದರ್ಶನ ಕಾಯ್ದುಕೊಂಡು ಬಂದಿರುವ ಭಾರತದ ಪುರುಷರ ವಿಭಾಗದ ಮೇಲೆ ಭರವಸೆ ಹೆಚ್ಚೇ ಇದೆ.
9ನೇ ಶ್ರೇಯಾಂಕ ಪಡೆದಿರುವ ಲಕ್ಷ್ಯ ಸೇನ್ ಮೊದಲ ಸುತ್ತಿನಲ್ಲಿ ಡೆನ್ಮಾರ್ಕ್ನ ಹಾನ್ಸ್- ಕ್ರಿಸ್ಟಿಯನ್ ಸೋಲ್ಬರ್ಗ್ ವಿಟ್ಟಿಂಗಸ್ ಅವರನ್ನು ಎದುರಿಸಲಿದ್ದಾರೆ. 3ನೇ ಸುತ್ತಿನಲ್ಲಿ ಕೆಂಟೊ ಮೊಮೊಟ ಎದುರಾಗುವ ಸಾಧ್ಯತೆ ಇದೆ. ಎಚ್.ಎಸ್. ಪ್ರಣಯ್ ಮತ್ತು ಕೆಂಟೊ ಮೊಮೊಟ ದ್ವಿತೀಯ ಸುತ್ತಿನಲ್ಲಿ ಮುಖಾಮುಖೀ ಆಗಬಹುದು.
ಡಬಲ್ಸ್ ಮುಖಾಮುಖಿ
ಡಬಲ್ಸ್ನಲ್ಲಿ ಭಾರತಕ್ಕೆ ಮೊದಲ ಗೇಮ್ಸ್ ಚಿನ್ನ ತಂದಿತ್ತ ಚಿರಾಗ್ ಶೆಟ್ಟಿ-ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮೇಲೂ ಭಾರೀ ನಿರೀಕ್ಷೆ ಇದೆ. ವನಿತಾ ಡಬಲ್ಸ್ನಲ್ಲಿ ಅಶ್ವಿನಿ ಪೊನ್ನಪ್ಪ-ಎನ್. ಸಿಕ್ಕಿ ರೆಡ್ಡಿ, ಗಾಯತ್ರಿ ಗೋಪಿಚಂದ್-ಟ್ರೀಸಾ ಜಾಲಿ ಕೂಡ ಕಣದಲ್ಲಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.