Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ


Team Udayavani, Oct 19, 2024, 3:56 PM IST

Champions Trophy: Pakistan has made a new offer to India

ಇಸ್ಲಮಾಬಾದ್/ಮುಂಬೈ: ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ (Champions Trophy) ಕೂಟ ಆಯೋಜನೆಗೆ ಪಾಕಿಸ್ತಾನ ತಲೆಕೆಡಿಸಿ ಕೂತಿದೆ. ಚಾಂಪಿಯನ್ಸ್‌ ಟ್ರೋಫಿ ಕೂಟವು ಪಾಕಿಸ್ತಾನದಲ್ಲಿ ನಡೆಯುವುದೆಂದು ನಿಗದಿಯಾಗಿದೆ. ಆದರೆ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸದ ಕಾರಣದಿಂದ ಕೂಟ ಆಯೋಜನೆಯನ್ನು ಕಳೆದುಕೊಳ್ಳುವ ಭೀತಿಯಲ್ಲಿದೆ ಪಾಕಿಸ್ತಾನ. ಹಲವು ತಂತ್ರಗಳನ್ನು ಅನುಸರಿಸಿ ಭಾರತವನ್ನು ಕರೆಸಿಕೊಳ್ಳುವ ಪಾಕಿಸ್ತಾನದ ತಂತ್ರ ಫಲಿಸದ ಕಾರಣ ಇದೀಗ ಮತ್ತೊಂದು ತಂತ್ರದ ಮೊರೆ ಹೋಗಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಇದೀಗ ಹೊಸ ಯೋಜನೆಯೊಂದಿಗೆ ಬಿಸಿಸಿಐ ಯನ್ನು ಸಂಪರ್ಕಿಸಿದೆ. ಭದ್ರತಾ ಕಾರಣಗಳಿಂದಾಗಿ ಭಾರತ ತಂಡವು ಪಾಕಿಸ್ತಾನದಲ್ಲಿ ಉಳಿಯಲು ಸಿದ್ಧರಿಲ್ಲದಿದ್ದರೆ ಮುಂದಿನ ವರ್ಷ ಚಾಂಪಿಯನ್ಸ್ ಟ್ರೋಫಿಯ ಪಂದ್ಯಗಳ ನಡುವೆ ಭಾರತವು ನವದೆಹಲಿ ಅಥವಾ ಚಂಡೀಗಢಕ್ಕೆ ಮರಳಲು ಅವಕಾಶ ನೀಡುವ ವ್ಯವಸ್ಥೆಯನ್ನು ಪ್ರಸ್ತಾಪಿಸಿದೆ. ಅಂದರೆ ಪ್ರತಿ ಪಂದ್ಯದ ಬಳಿಕ ಮರಳಿ ಭಾರತಕ್ಕೆ ಬರಬಹುದು ಎಂದು ಹೇಳಿದೆ.

ಭಾರತ ತಂಡವು ನವದೆಹಲಿ ಅಥವಾ ಚಂಡೀಗಢ/ಮೊಹಾಲಿಯಲ್ಲಿ ತಮ್ಮ ಕ್ಯಾಂಪ್ ಮಾಡಬಹುದು. ತಮ್ಮ ಪಂದ್ಯಗಳಿಗೆ ಲಾಹೋರ್‌ ಗೆ ಪ್ರಯಾಣಿಸಲು ಚಾರ್ಟರ್ಡ್ ಫ್ಲೈಟ್‌ ಗಳನ್ನು ಬಳಸಬಹುದು ಎಂದು ಬಿಸಿಸಿಐಗೆ ಪಿಸಿಬಿ ಮೌಖಿಕವಾಗಿ ಸೂಚಿಸಿದೆ. ಆದರೆ, ಭಾರತೀಯ ಮಂಡಳಿಗೆ ಲಿಖಿತವಾಗಿ ಯಾವುದೇ ಸಲಹೆಗಳನ್ನು ನೀಡಿಲ್ಲ ಎಂದು ಪಿಸಿಬಿ ಮೂಲವೊಂದು ಶುಕ್ರವಾರ ಪಿಟಿಐಗೆ ದೃಢಪಡಿಸಿದೆ.

“ಆದರೆ ಹೌದು, ಭಾರತವು ಪಾಕಿಸ್ತಾನದಲ್ಲಿ ತನ್ನ ಪಂದ್ಯಗಳನ್ನು ಆಡುವುದನ್ನು ಖಚಿತಪಡಿಸಿಕೊಳ್ಳಲು ಈ ಆಯ್ಕೆಗಳನ್ನು ಅಧಿಕಾರಿಗಳ ನಡುವೆ ಮೌಖಿಕವಾಗಿ ಚರ್ಚಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಚಾಂಪಿಯನ್ಸ್ ಟ್ರೋಫಿ ಕೂಟವು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದ್ದು, ಲಾಹೋರ್, ರಾವಲ್ಪಿಂಡಿ ಮತ್ತು ಕರಾಚಿಯಲ್ಲಿ ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಭಾರತದ ಗಡಿಯ ಸಾಮೀಪ್ಯದ ಕಾರಣದಿಂದ ಲಾಹೋರ್‌ ನಲ್ಲಿ ಭಾರತದ ಪಂದ್ಯಗಳನ್ನು ಯೋಜಿಸಿದೆ. ಪಂದ್ಯಾವಳಿಯಲ್ಲಿ ಭಾರತದ ಮೂರು ಗುಂಪು-ಹಂತದ ಪಂದ್ಯಗಳನ್ನು ಫೆಬ್ರವರಿ 20 (ಬಾಂಗ್ಲಾದೇಶ ವಿರುದ್ಧ), ಫೆಬ್ರವರಿ 23 (ಪಾಕಿಸ್ತಾನ ವಿರುದ್ಧ), ಮತ್ತು ಮಾರ್ಚ್ 2 (ನ್ಯೂಜಿಲೆಂಡ್ ವಿರುದ್ಧ) ರಂದು ನಿಗದಿಪಡಿಸಲಾಗಿದೆ.

ಟಾಪ್ ನ್ಯೂಸ್

1-omar-nn

Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

S M KRISHNA

S.M.Krishna; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

MUDA Case; ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

1-a-pJ

Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-omar-nn

Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

Simple Suni introduces Keerthi Krishna and Divita Rai in Devaru Ruju Madidanu Movie

Devaru Ruju Madidanu Movie ಸುನಿ ಸಿನಿಮಾದ ನಾಯಕಿಯರಿವರು..

S M KRISHNA

S.M.Krishna; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

MUDA Case; ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.