Coach;ಕುತೂಹಲ ಮೂಡಿಸಿದ ಗೌತಮ್ ಗಂಭೀರ್-ಜಯ್ ಶಾ ಭೇಟಿ
Team Udayavani, May 28, 2024, 6:40 AM IST
ಚೆನ್ನೈ: ಕೆಕೆಆರ್ ಐಪಿಎಲ್ ಚಾಂಪಿಯನ್ ಆದ ಬೆನ್ನಲ್ಲೇ ತಂಡದ ಮೆಂಟರ್ ಗೌತಮ್ ಗಂಭೀರ್, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಗಂಭೀರ್ ಪ್ರಮುಖ ಆಕಾಂಕ್ಷಿ ಎನ್ನಲಾಗುತ್ತಿರುವುದರಿಂದ ಇವರಿಬ್ಬರ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಫೈನಲ್ ಪಂದ್ಯ ಮುಗಿಯುತ್ತಲೇ, ಗಂಭೀರ್ ಬಹಳ ಜೋಶ್ನಲ್ಲಿದ್ದ ವೀಡಿಯೋಗಳು ಜಾಲತಾಣದಲ್ಲಿ ವೈರಲ್ ಆಗಿದ್ದವು. ಇದರ ಜತೆಯಲ್ಲೇ, ಗಂಭೀರ್ ಅವರನ್ನು ಜಯ್ ಶಾ ಭೇಟಿ ಮಾಡಿದ್ದಾರೆ. ಈ ವೇಳೆ ಭಾರತ ಕ್ರಿಕೆಟ್ ತಂಡದ ಕೋಚ್ ಆಯ್ಕೆ ಕುರಿತು ಇಬ್ಬರ ಮಧ್ಯೆ ಚರ್ಚೆ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸದ್ಯ ಕ್ರಿಕೆಟ್ ತಂಡಕ್ಕೆ ಹೆಡ್ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರ ಜವಾಬ್ದಾರಿ ಟಿ20 ವಿಶ್ವಕಪ್ ಬಳಿಕ ಕೊನೆಗೊಳ್ಳಲಿದೆ. ಹೀಗಾಗಿ, ದ್ರಾವಿಡ್ ಜಾಗಕ್ಕೆ ಬಿಸಿಸಿಐ ಹೊಸ ಅರ್ಜಿಗಳನ್ನು ಕರೆದಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೇ ದಿನವಾಗಿದ್ದು, ಯಾರ್ಯಾರು ಅರ್ಜಿ ಸಲ್ಲಿಸಿದ್ದಾರೆ ಎಂಬ ಬಗ್ಗೆ ಬಿಸಿಸಿಐ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ.
ಕೋಚ್ ಹುದ್ದೆಗೆ ಕೇಳಿಬಂದ ಮತ್ತೂಂದು ಹೆಸರೆಂದರೆ ವಿ.ವಿ.ಎಸ್. ಲಕ್ಷ್ಮಣ್ ಅವರದು. ಆದರೆ ಅವರು ಈ ಬಗ್ಗೆ ಆಸಕ್ತಿ ತೋರಿದಂತಿಲ್ಲ. ಇತ್ತ ದ್ರಾವಿಡ್ ಕೂಡ ಮರು ಅರ್ಜಿಯ ಸಾಧ್ಯತೆಯನ್ನು ತಳ್ಳಿ ಹಾಕಿದ್ದಾರೆ ಎನ್ನಲಾಗಿದೆ. ಹೀಗಾಗಿ ಸದ್ಯ ಸಂಭಾವ್ಯರ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವವರೆಂದರೆ ಗಂಭೀರ್ ಒಬ್ಬರೇ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Sri Lanka Team: ಟಿ20 ವಿಶ್ವಕಪ್ನಲ್ಲಿ ಕಳಪೆಯಾಟ; ಲಂಕಾ ಕೋಚ್ ಸಿಲ್ವರ್ವುಡ್ ರಾಜೀನಾಮೆ
T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?
IND-W vs SA-W: ಇಂದಿನಿಂದ ಭಾರತ-ದ.ಆಫ್ರಿಕಾ ಮಹಿಳಾ ಟೆಸ್ಟ್ ಆರಂಭ
Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.