Cricket; ಸತತ ಸೋಲುತ್ತಿರುವ ಇಂಗ್ಲೆಂಡ್ ಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಅವಕಾಶವೇ ಇಲ್ಲ!
Team Udayavani, Oct 30, 2023, 2:48 PM IST
ಮುಂಬೈ: ಕಳೆದ ಏಕದಿನ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ತಂಡವು ಈ ಬಾರಿಯ ವಿಶ್ವಕಪ್ ಕೂಟದಲ್ಲಿ ತಾನು ಹಾಲಿ ಚಾಂಪಿಯನ್ ಎನ್ನುವುದನ್ನು ಮರೆತು ಆಡುತ್ತಿದೆ. ಆಡಿದ ಆರು ಪಂದ್ಯಗಳಲ್ಲಿ ಐದನ್ನು ಸೋತ ಜೋಸ್ ಬಟ್ಲರ್ ಪಡೆಯು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಕ್ರಿಕೆಟ್ ವಿಶ್ವಕಪ್ ನಲ್ಲಿ ಅಷ್ಟೇನೂ ಉತ್ತಮ ಪ್ರದರ್ಶನ ನೀಡಿದ ಉದಾಹರಣೆ ಹೊಂದಿಲ್ಲದ ನೆದರ್ಲ್ಯಾಂಡ್ ಕೂಡಾ ಈ ಬಾರಿ ಎರಡು ಪಂದ್ಯಗಳನ್ನು ಗೆದ್ದುಕೊಂಡು ಅಂಕಪಟ್ಟಿಯಲ್ಲಿ ಮೇಲಿದೆ.
ಈ ವಿಶ್ವಕಪ್ ಹೀನಾಯ ಪ್ರದರ್ಶನದ ಬಳಿಕ ಇದೀಗ ಮುಂದಿನ ಚಾಂಪಿಯನ್ಸ್ ಟ್ರೋಫಿಯಿಂದಲೂ ಹೊರಬೀಳುವ ಆತಂಕ ಎದುರಿಸುತ್ತಿದೆ ಇಂಗ್ಲೆಂಡ್. 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಕೂಟ ನಡೆಯಲಿದೆ. ಪಾಕಿಸ್ತಾನದಲ್ಲಿ ನಡೆಯಲಿರುವ ಈ ಕೂಟದಲ್ಲಿ ಎಂಟು ತಂಡಗಳು ಭಾಗಿಯಾಗಲಿದೆ.
ಈ ಹಿಂದೆ ಐಸಿಸಿ ರ್ಯಾಂಕಿಂಗ್ ನಲ್ಲಿ ಅಗ್ರ ಎಂಟು ಸ್ಥಾನ ಹೊಂದಿದ ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಅವಕಾಶ ಪಡೆಯುತ್ತಿದ್ದವು. ಆದರೆ ಇತ್ತೀಚೆಗೆ ಐಸಿಸಿ ತನ್ನ ನಿಯಮದಲ್ಲಿ ಬದಲಾವಣೆ ಮಾಡಿದೆ. ಐಸಿಸಿ ಏಕದಿನ ವಿಶ್ವಕಪ್ ನ ಅಂಕಪಟ್ಟಿಯಲ್ಲಿ ಅಗ್ರ ಎಂಟರಲ್ಲಿ ಬರುವ ತಂಡಗಳು ಮಾತ್ರ ಚಾಂಪಿಯನ್ಸ್ ಟ್ರೋಫಿ ಆಡಬಹುದು ಎಂದು ನಿಯಮ ಮಾಡಿದೆ. ಸದ್ಯಕ್ಕೆ ಅಂಕಪಟ್ಟಿಯಲ್ಲಿ ಕೊನೆಯ ಅಂದರೆ ಹತ್ತನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಚಾಂಪಿಯನ್ಸ್ ಟ್ರೋಫಿ ಆಡುವ ಸಾಧ್ಯೆತೆಯಿಲ್ಲ.
ಇದನ್ನೂ ಓದಿ:State Politics: ಬೆಳಗಾವಿ ರಾಜಕಾರಣದಿಂದಲೇ ಸರ್ಕಾರ ಪತನ: ಶಾಸಕ ರಮೇಶ ಜಾರಕಿಹೊಳಿ
ಈ ವಿಶ್ವಕಪ್ ನಲ್ಲಿ ಇಂಗ್ಲೆಂಡ್ ಇನ್ನು ಆಸ್ಟ್ರೇಲಿಯಾ, ನೆದರ್ಲ್ಯಾಂಡ್ ಮತ್ತು ಪಾಕಿಸ್ತಾನ ತಂಡಗಳನ್ನು ಎದುರಿಸಲಿದೆ. ಕೊನೆಯ ಪಕ್ಷ ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಥಾನ ಪಡೆಯಲಾದರೂ ಇಂಗ್ಲೆಂಡ್ ಈ ಪಂದ್ಯಗಳನ್ನು ಗೆಲ್ಲಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್: ದ.ಆಫ್ರಿಕಾಗೆ 177 ರನ್ ಅಂತರದ ಸೋಲು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.