ಕ್ರಿಕೆಟ್‌ ಜನಪ್ರಿಯತೆಯನ್ನೂ ಮೀರೀತು ಕಬಡ್ಡಿ: ಸುಕೇಶ್‌


Team Udayavani, Oct 27, 2019, 5:45 AM IST

kbd

“ಗ್ರಾಮೀಣ ಮಟ್ಟದ ಕಬಡ್ಡಿ ಇಂದು ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕ್ರಿಕೆಟ್‌ ಜನಪ್ರಿಯತೆ ಯನ್ನು ಮೀರಿದರೂ ಆಶ್ಚರ್ಯವಿಲ್ಲ’ ಎಂದು
“ಉದಯವಾಣಿ’ ಜತೆ ತನ್ನ ಮನದಾಳದ ಮಾತನ್ನು ಹಂಚಿಕೊಂಡವರು ನೂತನ ಪ್ರೊ ಕಬಡ್ಡಿ ಚಾಂಪಿಯನ್‌ ಆಗಿ ಮೂಡಿಬಂದ ಬೆಂಗಾಲ್‌ ವಾರಿಯರ್ ತಂಡದ ಸ್ಟಾರ್‌ ಆಟಗಾರ, ಕಾರ್ಕಳ ಮೂಲದ ಕಡ್ತಲದ ಸುಕೇಶ್‌ ಹೆಗ್ಡೆ. ಇವರೊಂದಿಗೆ ನಡೆದ ಸಂದರ್ಶನ ಇಲ್ಲಿದೆ.

ಬೆಂಗಾಲ್‌ ವಾರಿಯರ್ ಪ್ರಶಸ್ತಿ ಗೆಲ್ಲುತ್ತದೆ ಎಂಬ ವಿಶ್ವಾಸ ಇತ್ತೇ?
ಫೈನಲ್‌ ತಲುಪುತ್ತೇವೆ ಎಂಬ ವಿಶ್ವಾಸ ಇತ್ತು. ಆದರೆ ಚಾಂಪಿಯನ್‌ ಪಟ್ಟ ನಮಗೆ ಒಲಿಯುತ್ತದೆ ಎಂಬ ಯೋಚನೆ ಇರಲಿಲ್ಲ. ಈಗ ಖುಷಿಯಾಗಿದೆ. ತಂಡದ ಎಲ್ಲ ಸದಸ್ಯರ, ತರಬೇತುದಾರರ ಸಾಂಘಿಕ ಪ್ರಯತ್ನದಿಂದ ಈ ಪಟ್ಟ ಒಲಿದಿದೆ.

ಕನ್ನಡಿಗ ಕೋಚ್‌ ರಮೇಶ್‌ ಕಳೆದ ಸಲ ಬುಲ್ಸ್‌ ತಂಡದಲ್ಲಿದ್ದಾಗ ಅದು ಚಾಂಪಿಯನ್‌ ಆಗಿತ್ತು. ಈಗ ಬೆಂಗಾಲ್‌ ಸರದಿ…
ಹೌದು… ಕೋಚ್‌ ಬಿ.ಸಿ. ರಮೇಶ್‌ ಅವರಿಗೆ ಕಬಡ್ಡಿಯಲ್ಲಿ ಅಗಾಧ ಅನುಭವವಿದೆ. ಅವರು ಮೊದಲು ಕಬಡ್ಡಿ ಆಟಗಾರರಾಗಿದ್ದರು. ಕಬಡ್ಡಿಯ ತಂತ್ರಗಾರಿಕೆ ಅವರಿಗೆ ತಿಳಿದಿದೆ. ತಂಡ ಚಾಂಪಿಯನ್‌ ಆಗಲು ಅವರ ಅನುಭವವೂ ಮುಖ್ಯ ಕಾರಣ.

ಪ್ರೊ ಕಬಡ್ಡಿ ಕೂಟಕ್ಕೂ ಮುನ್ನ ನಿಮ್ಮ ತಯಾರಿ ಯಾವ ರೀತಿ ಇತ್ತು?
ಪ್ರೊ ಕಬಡ್ಡಿ ಆರಂಭವಾಗುವುದಕ್ಕೂ 3 ತಿಂಗಳ ಹಿಂದಿನಿಂದಲೇ ಅಭ್ಯಾಸ ಆರಂಭಿಸಿದ್ದೆ. ಕಳೆದ ಕೆಲವು ಸೀಸನ್‌ಗಳಲ್ಲಿ ಅನಾರೋಗ್ಯ ಕಾಡಿತ್ತು. ಹೀಗಾಗಿ ಈ ಬಾರಿ ಫಿಟ್‌ನೆಸ್‌ಗೆ ಹೆಚ್ಚಿನ ಒತ್ತು ನೀಡಿದ್ದೆ. ಪಂದ್ಯಗಳ ವಿರಾಮದ ನಡುವೆ ಕಬಡ್ಡಿಯ ಹೊಸ ಟೆಕ್ನಿಕ್‌ಗಳ ಬಗ್ಗೆ ತಿಳಿದುಕೊಳ್ಳುತ್ತಿದ್ದೆ. ಸ್ವಿಮ್ಮಿಂಗ್‌, ಜಿಮ್‌ನಲ್ಲೂ ತೊಡಗಿಸಿಕೊಳ್ಳುತ್ತಿದ್ದೆ.

ಕಬಡ್ಡಿಯಲ್ಲಿ ವಿಶೇಷ ಆಸಕ್ತಿ ತೋರುತ್ತಿರುವ ಯುವಕರಿಗೆ ನಿಮ್ಮ ಸಲಹೆ?
ಗ್ರಾಮೀಣ ಪ್ರದೇಶದ ಕಬಡ್ಡಿ ಇಂದು ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದೆ. ಮುಂದಿನ ದಿನಗಳಲ್ಲಿ ಕ್ರಿಕೆಟನ್ನು ಹಿಂದಿಕ್ಕಿದ್ದರೂ ಆಶ್ಚರ್ಯವಿಲ್ಲ. ಗ್ರಾಮೀಣ ಮಟ್ಟದ ಕ್ರೀಡಾಪಟುಗಳಿಗೆ ಆಟದ ಜಾಣ್ಮೆ, ಪ್ರದರ್ಶನ ನೀಡುವ ಕಲೆಯ ಬಗ್ಗೆ ತಿಳಿದುಕೊಳ್ಳಲು ಇತ್ತೀಚಿನ ದಿನಗಳಲ್ಲಿ ಹಲವಾರು ಮಾಧ್ಯಮಗಳಿವೆ.

ರಾಷ್ಟ್ರೀಯ ತಂಡದಲ್ಲಿ ಗುರುತಿಸಿಕೊಂಡಿರುವ ಬಗ್ಗೆ ಹೇಳಿ?
ಭಾರತ ತಂಡದಲ್ಲಿ ಗುರುತಿಸಿಕೊಳ್ಳುವುದು ಪ್ರತಿಯೊಬ್ಬ ಆಟಗಾರನ ಕನಸು. ನಾನು ಈ ಹಿಂದೆ 2 ಬಾರಿ ಭಾರತ ಪರ ಆಡಿದ್ದೇನೆ. ರಾಜ್ಯ ಮಟ್ಟದ ಕಬಡ್ಡಿ ಇದ್ದು, ಇದರಲ್ಲಿ ಉತ್ತಮ ಪ್ರದರ್ಶನ ನೀಡಿ ಆಯ್ಕೆಗಾರರ ಗಮನ ಸೆಳೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುತ್ತೇನೆ.

ಪ್ರೊ ಕಬಡ್ಡಿ ನಿಮ್ಮ ಜೀವನ ಶೈಲಿ, ಪರಿಸ್ಥಿತಿಯನ್ನು ಎಷ್ಟು ಬದಲಾಯಿಸಿದೆ?
ಪ್ರೊ ಕಬಡ್ಡಿಯಿಂದ ನನ್ನ ಜೀವನ ಶೈಲಿಯಲ್ಲಿ ತುಂಬಾ ಬದಲಾವಣೆಯಾಗಿದೆ. ನಾನು ಗ್ರಾಮೀಣ ಪ್ರದೇಶದಿಂದ ಬಂದವನು. ಈ ಹಿಂದೆ ಸುಕೇಶ್‌ ಅಂದರೆ ಯಾರು ಎಂದು ತಿಳಿದಿರಲಿಲ್ಲ. ಆದರೆ ಇಂದು ಹಳ್ಳಿಗಳಲ್ಲೂ ನನ್ನನ್ನು ಗುರುತಿಸುತ್ತಾರೆ.

ಬುಲ್ಸ್‌ ಪರ ಆಡುವ ಕನಸು
ನಾನು ಕರ್ನಾಟಕದವನಾಗಿದ್ದರೂ ರಾಜ್ಯ ತಂಡದಲ್ಲಿ (ಬೆಂಗಳೂರು ಬುಲ್ಸ್‌) ಆಡಲು ಅವಕಾಶ ದೊರಕಿಲ್ಲ ಎಂಬ ನೋವು ಕಾಡುತ್ತಿದೆ. ಆಟಗಾರರನ್ನು ಬಿಡ್ಡಿಂಗ್‌ ಮೂಲಕ ಖರೀದಿ ಮಾಡುವುದರಿಂದ ನಿರ್ದಿಷ್ಟ ತಂಡವನ್ನು ಸೇರಲು ನಮ್ಮಿಂದಾಗದು. ಮುಂದಿನ ಆವೃತ್ತಿಗಳಲ್ಲಿ ಬೆಂಗಳೂರು ತಂಡದಲ್ಲಿ ಗುರುತಿಸಲು ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇನೆ.

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.