![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 19, 2023, 11:07 AM IST
ಮುಂಬೈ: ಕಳೆದ ಒಂದೂವರೆ ತಿಂಗಳಿನಿಂದ ನಡೆಯುತ್ತಿರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಇದೀಗ ಮುಕ್ತಾಯದ ಹಂತದಲ್ಲಿದೆ. ವಿಶ್ವ ಕ್ರಿಕೆಟ್ ನ ಎರಡು ದಿಗ್ಗಜ ತಂಡಗಳಾದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಕೂಟದಲ್ಲಿ ಆಡಿದ ಎಲ್ಲಾ ಹತ್ತು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಮತ್ತು ಸತತ ಎಂಟು ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ತಂಡಗಳು ಇಂದು ಕ್ರಿಕೆಟ್ ನ ಅತ್ಯುನ್ನತ ಪ್ರಶಸ್ತಿಗಾಗಿ ಸೆಣಸಾಡಲಿದೆ.
ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳ ಎದುರು ಫೈನಲ್ ಪಂದ್ಯ ನಡೆಯಲಿದೆ. 2011ರ ಬಳಿಕ ಮೊದಲ ಬಾರಿಗೆ ಫೈನಲ್ ತಲುಪಿರುವ ಭಾರತ ಕಪ್ ಗೆಲ್ಲಬಹುದೇ ಅಥವಾ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಮತ್ತೊಂದು ಬಾರಿ ಪ್ರಶಸ್ತಿ ಗೆಲ್ಲಬಹುದೇ ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ.
ಜ್ಯೋತಿಷಿ ಮತ್ತು ಟ್ಯಾರೋ ತಜ್ಞ ರೋಸಿ ಜಸ್ರೋಟಿಯಾ ಅವರು ಉಭಯ ತಂಡಗಳ ಟ್ಯಾರೋ ಕಾರ್ಡ್ ಗಳನ್ನು ಆಧರಿಸಿ ಇಂದಿನ ಆಟದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
“ಟ್ಯಾರೋ ರೀಡಿಂಗ್ ಪ್ರಕಾರ, ಇಂದು ಜಡ್ಜ್ಮೆಂಟ್ ಕಾರ್ಡ್ ಭಾರತಕ್ಕೆ ಬಂದಿದೆ, ಜಡ್ಜ್ಮೆಂಟ್ ಕಾರ್ಡ್ ಸಕಾರಾತ್ಮಕ ಕಾರ್ಡ್ ಆಗಿದೆ. ಆದರೆ ಏಕಪಕ್ಷೀಯವಾಗಿ ಪಂದ್ಯ ನಡೆಯುವುದಿಲ್ಲ ಎಂದು ಭವಿಷ್ಯ ನುಡಿದಿದೆ. ಭಾರತಕ್ಕೆ ಗೆಲ್ಲಲು ತುಂಬಾ ಸುಲಭವಿಲ್ಲ, ಆಸ್ಟ್ರೇಲಿಯಾ ಸಮಾನ ಸ್ಪರ್ಧಿಯಾಗಲಿದೆ. ಭಾರತಕ್ಕೆ ಈ ಪಂದ್ಯವು ಹಾವಿನಿಂದ ‘ನಾಗಮಣಿ’ಯನ್ನು ಎಳೆದಂತೆ, ಈ ಬಾರಿ ಭಾರತಕ್ಕೆ ಗೆಲ್ಲುವ ಸಾಧ್ಯತೆಗಳು ಹೆಚ್ಚು. ‘ನಾಗಮಣಿ’ ಸಿಗುವುದು ಖಚಿತ” ಎಂದು ರೋಸಿ ಜಸ್ರೋಟಿಯಾ ಹೇಳುತ್ತಾರೆ.
ಕಳೆದ ಬುಧವಾರ ಮುಂಬೈನಲ್ಲಿ ನಡೆದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸಿ ಭಾರತವು ಫೈನಲ್ ಪ್ರವೇಶ ಮಾಡಿದ್ದರೆ, ಗುರುವಾರ ಕೋಲ್ಕತ್ತಾದಲ್ಲಿ ನಡೆದ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಆಸ್ಟ್ರೇಲಿಯಾ ಅಂತಿಮ ಸುತ್ತು ತಲುಪಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.