![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 24, 2021, 6:55 AM IST
ಶಾರ್ಜಾ: ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮಹತ್ವದ ಐಪಿಎಲ್ ಪಂದ್ಯ ಶುಕ್ರವಾರ ನಡೆಯಲಿದೆ.
ಇದು ಯುಎಇಯ ಮೂರನೇ ಮುಖ್ಯ ಮೈದಾನವಾದ ಶಾರ್ಜಾದಲ್ಲಿ ನಡೆಯಲಿದೆ. ಈಗಾಗಲೇ ಯುಎಇ ಚರಣದ ಮೊದಲ ಪಂದ್ಯವನ್ನು ಗೆದ್ದ ಖುಷಿಯಲ್ಲಿರುವ ಚೆನ್ನೈ ಇದೆ. ಆರ್ಸಿಬಿ ಯುಎಇ ಚರಣದ ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತ ಬೇಸರದಲ್ಲಿದೆ.
ಮೇಲ್ನೋಟಕ್ಕೆ ಚೆನ್ನೈ ಈ ಪಂದ್ಯದ ನೆಚ್ಚಿನ ತಂಡ. ಭಾನುವಾರದ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈಯನ್ನು ಮಣಿಸುವ ಮೂಲಕ ಧೋನಿ ಪಡೆ ಶುಭಾರಂಭ ಮಾಡಿದೆ. ಇತ್ತ ಆರ್ಸಿಬಿ ಈ ಬಾರಿ ಐಪಿಎಲ್ನ ಮೊದಲಭಾಗದಲ್ಲಿ ಬಲಿಷ್ಠ ಶಕ್ತಿಯಾಗಿ ಪುನರ್ ಸಂಘಟನೆಗೊಂಡಿದ್ದರೂ, ಯುಎಇ ಚರಣದಲ್ಲಿ ನಿರೀಕ್ಷೆಗೆ ತಕ್ಕ ಪ್ರದರ್ಶನ ತೋರುವಲ್ಲಿ ಎಡವಿದೆ.
ಅಸ್ಥಿರ ಪ್ರದರ್ಶನ: ಕಳೆದ ಪಂದ್ಯದಲ್ಲಿ ಕೋಲ್ಕತ ವಿರುದ್ಧ ಬ್ಯಾಟಿಂಗ್ ಕುಸಿತಕ್ಕೆ ಸಿಲುಕಿ ಶೋಚನೀಯ ಸೋಲು ಕಂಡಿರುವ ಆರ್ಸಿಬಿಗೆ ಇದೊಂದು ದೊಡ್ಡ ಅಗ್ನಿಪರೀಕ್ಷೆ. ತಾರಾ ಆಟಗಾರರನ್ನು ಹೊಂದಿಯೂ ಈವರೆಗೆ ಕಪ್ ಎತ್ತಲು ವಿಫಲವಾಗಿರುವ ಆರ್ಸಿಬಿ ಪ್ರತೀ ಕೂಟದಲ್ಲೂ ಅಚ್ಚರಿಯ ಹಾಗೂ ಕಳಪೆ ಪ್ರದರ್ಶನ ನೀಡುವುದು ಮಾಮೂಲು. ಒಮ್ಮೆ ಇನ್ನೂರರ ಗಡಿ ದಾಟುತ್ತದೆ, ಇನ್ನೊಮ್ಮೆ ನೂರರೊಳಗೆ ಗಂಟುಮೂಟೆ ಕಟ್ಟುತ್ತದೆ. ಒಟ್ಟಾರೆ ಅಸ್ಥಿರ ಪ್ರದರ್ಶನವೇ ತಂಡಕ್ಕೆ ಮುಳುವಾಗುತ್ತಿರುವುದು ವಿಪರ್ಯಾಸ.
ಬೆಂಗಳೂರಿಗೆ ಬ್ಯಾಟಿಂಗ್ ಬಲವೇ ಆಸ್ತಿ. ಪಡಿಕ್ಕಲ್, ಕೊಹ್ಲಿ, ಎಬಿಡಿ, ಮ್ಯಾಕ್ಸ್ವೆಲ್, ಸಿಡಿದು ನಿಂತರೆ ದೊಡ್ಡ ಮೊತ್ತಕ್ಕೇನೂ ಕೊರತೆ ಇಲ್ಲ. ಆದರೆ ಕೆಲವೊಮ್ಮೆ ಸಾಮೂಹಿಕ ಕುಸಿತ ಕಾಣುವ ಮೂಲಕ ಆಘಾತ ಹುಟ್ಟಿಸುತ್ತದೆ. ಇದಕ್ಕೆ ಕೋಲ್ಕತ ಎದುರಿನ ಪ್ರದರ್ಶನವೇ ಆತ್ಯುತ್ತಮ ನಿದರ್ಶನ.
ಕೊಹ್ಲಿಗೆ ಹಲವು ಸವಾಲು: ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ನಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಎರಡಂಕಿಯ ಸ್ಕೋರ್ ದಾಖಲಿಸಲಿಕ್ಕೂ ಪರದಾಡುತ್ತಿದ್ದಾರೆ. ಈ ಪಂದ್ಯದಲ್ಲಿ ಬ್ಯಾಟಿಂಗ್ ಫಾರ್ಮ್ಗೆ ಮರಳಬೇಕಾದ ಅನಿವಾರ್ಯತೆ ಕೊಹ್ಲಿ ಮುಂದಿದೆ. ಜತೆಗೆ ತಂಡದ ನಾಯಕನಾಗಿ ಇದು ತನ್ನ ಕೊನೆಯ ಋತು ಎಂಬುದಾಗಿ ಕೊಹ್ಲಿ ಇತ್ತೀಚೆಗಷ್ಟೇ ಪ್ರಕಟಿಸಿದ್ದರು. ಆದರೆ ಇನ್ನೊಂದು ಪಂದ್ಯವನ್ನು ಸೋತರೂ ಕೊಹ್ಲಿ ನಾಯಕತ್ವ ಕಳೆದುಕೊಳ್ಳಲಿದ್ದಾರೆ ಎಂಬ ವದಂತಿಗಳೂ ಇವೆ! ಹೀಗಿರುವಾಗ ಕೊಹ್ಲಿ ಬ್ಯಾಟ್ ಮಾತಾಡಬೇಕು, ತಂಡ ಗೆಲುವಿನ ಹಳಿ ಏರಬೇಕು.
ಆರ್ಸಿಬಿ ಬೌಲಿಂಗ್ ಕೂಡ ಸುಧಾರಣೆ ಕಾಣಬೇಕಿದೆ. ಲಂಕಾ ಸ್ಪಿನ್ನರ್ ಹಸರಂಗ, ಕಿವೀಸ್ ವೇಗಿ ಕೈಲ್ ಜೇಮಿಸನ್, ಹರ್ಷಲ್ ಪಟೇಲ್, ಸಿರಾಜ್ ಅವರ ಬೌಲಿಂಗ್ ಹರಿತಗೊಳ್ಳಬೇಕಾಗಿದೆ.
ಚೆನ್ನೈ ಸಮರ್ಥ ಪಡೆ: ಚೆನ್ನೈ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಸಮರ್ಥವಾಗಿದೆ. ಇದಕ್ಕಿಂತ ಮಿಗಿಲಾಗಿ ಧೋನಿ ಅವರ ಜಾಣ್ಮೆಯ ನಾಯಕತ್ವವಿದೆ. ಇಲ್ಲಿ 8ನೇ ಕ್ರಮಾಂಕದವರೆಗೂ ಬ್ಯಾಟ್ ಬೀಸುವವರಿದ್ದಾರೆ. ಇವರಲ್ಲಿ ಅನೇಕರು ಆಲ್ರೌಂಡರ್ ಆಗಿರುವುದೊಂದು ಪ್ಲಸ್ ಪಾಯಿಂಟ್. ಋತುರಾಜ್ ಗಾಯಕ್ವಾಡ್, ಫಾ ಡು ಪ್ಲೆಸಿಸ್, ಮೊಯಿನ್ ಅಲಿ, ಅಂಬಾಟಿ ರಾಯುಡು, ಡ್ವೇನ್ ಬ್ರಾವೊ, ರವೀಂದ್ರ ಜಡೇಜ… ಹೀಗೆ ಪಟ್ಟಿ ಬೆಳೆಯುತ್ತದೆ. ಆದರೆ ಧೋನಿ ಮತ್ತು ಸುರೇಶ್ ರೈನಾ ಬ್ಯಾಟಿಂಗ್ ಲಯ ಹೊರಟು ಹೋಗಿದೆ.
ಬೌಲಿಂಗ್ ವಿಭಾಗದಲ್ಲಿ ದೀಪಕ್ ಚಹರ್, ಶಾರ್ದೂಲ್ ಠಾಕೂರ್ ಉತ್ತಮ ಫಾರ್ಮ್ನಲ್ಲಿದ್ದಾರೆ. ಸ್ಪಿನ್ ವಿಭಾಗವೂ ಅಪಾಯಕಾರಿ. ಜಡೇಜ ಮತ್ತು ಮೊಯಿನ್ ಅಲಿ ಉತ್ತಮ ಬ್ರೇಕ್ ಒದಗಿಸಬಲ್ಲರು.
ಕ್ವಾರಂಟೈನ್ ಸಮಸ್ಯೆಯಿಂದ ಕಳೆದ ಪಂದ್ಯದಿಂದ ಹೊರಗುಳಿದಿದ್ದ ಇಂಗ್ಲೆಂಡ್ ಆಲ್ರೌಂಡರ್ ಸ್ಯಾಮ್ ಕರನ್ ತಂಡಕ್ಕೆ ಮರಳುವ ಸಾಧ್ಯತೆಯಿದೆ. ಆಗ ದಕ್ಷಿಣ ಆಫ್ರಿಕಾದ ವೇಗಿ ಲುಂಗಿ ಎನ್ಗಿಡಿ ಜಾಗ ಬಿಡಬೇಕಾಗಬಹುದು.
ಮುಖಾಮುಖಿ
ಒಟ್ಟು ಪಂದ್ಯ 27
ಬೆಂಗಳೂರು ಜಯ 09
ಚೆನ್ನೈ ಕಿಂಗ್ಸ್ ಜಯ 17
ಫಲಿತಾಂಶವಿಲ್ಲ 01
ಪಂದ್ಯಾರಂಭ: ರಾತ್ರಿ 7.30
ನೇರಪ್ರಸಾರ: ಸ್ಟಾರ್ನ್ಪೋರ್ಟ್ಸ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.