“ನಿಮ್ಮಿಂದ ದೇಶದ ಹೆಸರು ಪ್ರಜ್ವಲಿಸಿತು’; ಪದಕವೀರ ಗುರುರಾಜ್‌ ಪೂಜಾರಿಗೆ ಉದಯವಾಣಿ ಗೌರವ


Team Udayavani, Aug 11, 2022, 6:20 AM IST

“ನಿಮ್ಮಿಂದ ದೇಶದ ಹೆಸರು ಪ್ರಜ್ವಲಿಸಿತು’; ಪದಕವೀರ ಗುರುರಾಜ್‌ ಪೂಜಾರಿಗೆ ಉದಯವಾಣಿ ಗೌರವ

ಮಣಿಪಾಲ:ಐದನೇ ಬಾರಿ ಭಾರವನ್ನು ಮೇಲಕ್ಕೆತ್ತುತ್ತಿದ್ದಂತೆಯೇ ಭಾರತದ ಜನರ ನಿರೀಕ್ಷೆ ಮೇರೆ ಮೀರಿತು. ಪದಕ ಘೋಷಣೆ ಆಗುತ್ತಿದ್ದಂತೆಯೇ ದೇಶದ ಹೆಸರು ಗುರುರಾಜ್‌ರಿಂದಾಗಿ ಪ್ರಜ್ವಲಿಸು ವಂತಾಯಿತು. ಭಾರತ ಪದಕ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಇರುವಂತಾಯಿತು ಎಂದು ಮಣಿಪಾಲ್‌ ಮೀಡಿಯಾ ನೆಟ್‌ವರ್ಕ್‌ ಲಿಮಿಟೆಡ್‌ನ‌ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನೋದ್‌ ಕುಮಾರ್‌ ಹೇಳಿದರು.

ಅವರು ಬುಧವಾರ “ಉದಯವಾಣಿ’ ಕಚೇರಿಯಲ್ಲಿ ಕಾಮನ್ವೆಲ್ತ್‌ ಗೇಮ್ಸ್‌ನ ವೇಟ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದ ಗುರುರಾಜ್‌ ಪೂಜಾರಿ ಅವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಿ ಮಾತನಾಡಿದರು.

ಸಮಸ್ತ ಭಾರತೀಯರ ಆಶೀರ್ವಾದ ಗುರುರಾಜ್‌ ಮೇಲಿತ್ತು. ಪದಕದಿಂದಾಗಿ ಕರಾವಳಿ ಕರ್ನಾಟಕ, ಕುಂದಾಪುರದ ಹೆಸರು ಜಾಜ್ವಲ್ಯಮಾನವಾಯಿತು. ಅನಾರೋಗ್ಯದಿಂದಿದ್ದರೂ ಕೊನೆಕ್ಷಣದಲ್ಲಿ ಸಾಧನೆ ಮಾಡಲು ಶಕ್ತಿಯನ್ನು ಭಗವಂತನೇ ಕರುಣಿಸಿದ. ನಿಮ್ಮ ಆತ್ಮಬಲ, ಪರಿಶ್ರಮ, ಬದ್ಧತೆ ಪ್ರಶ್ನಾತೀತ. ಅದಕ್ಕಾಗಿ ನಮಗೆಲ್ಲ ಹೆಮ್ಮೆ ಎನಿಸುತ್ತದೆ. ಯುವಕರಿಗೆ ಸ್ಫೂರ್ತಿಯಾದಿರಿ. ಪದಕ ಗೆದ್ದ ನಿಮಗೆ ನಮ್ಮ ಸಂಸ್ಥೆಯ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು. ಮುಂದಿನ ಬಾರಿ ಚಿನ್ನದ ಪದಕವೇ ದೊರೆಯುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ ಎಂದರು.

ಒಬ್ಬ ಕ್ರೀಡಾಪಟುವಿಗೆ ನೀಡಬೇಕಾದ ಮಾನ್ಯತೆ, ಪ್ರಾಶಸ್ತ್ಯವನ್ನು “ಉದಯವಾಣಿ’ ಸದಾ ನೀಡುತ್ತದೆ. ನಿಮಗೂ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಬೆಂಬಲದ ಅವಶ್ಯವಿದ್ದರೆ ಪತ್ರಿಕೆ ಖಂಡಿತವಾಗಿಯೂ ನೀಡುತ್ತದೆ ಎಂದರು.

ಸಮ್ಮಾನಕ್ಕೆ ಉತ್ತರಿಸಿದ ಗುರುರಾಜ್‌, ಎಲ್ಲೇ ಸಮ್ಮಾನ, ಅಭಿನಂದನೆ ನಡೆದರೂ ಹುಟ್ಟೂರಲ್ಲಿ ಸಮ್ಮಾನ ಪಡೆಯಲು ವಿಶೇಷ ಅಭಿಮಾನವಾಗುತ್ತದೆ. ಪತ್ರಿಕೋದ್ಯಮ ವ್ಯಾಸಂಗ ಮಾಡಿ ಕ್ರೀಡೆಯಲ್ಲಿ ಸಾಧನೆ ಮಾಡಿದ ನನ್ನನ್ನು ಗುರುತಿಸಿ, ಬೆಂಬಲಿಸಿ, ಪ್ರೋತ್ಸಾಹಿಸಿದ “ಉದಯವಾಣಿ’ಗೆ ಧನ್ಯವಾದಗಳು ಎಂದರು.

ಬಳಿಕ ಗುರುರಾಜ್‌ ಅವರೊಂದಿಗೆ ಫೇಸ್‌ಬುಕ್‌ ಲೈವ್‌ ಕಾರ್ಯಕ್ರಮ ನಡೆಯಿತು. ಅವರ ತಂದೆ ಮಹಾಬಲ ಪೂಜಾರಿ, ಪತ್ನಿ ಸೌಜನ್ಯಾ, ಸಹೋದರರಾದ ಮನೋಹರ್‌, ಉದಯ್‌ ಉಪಸ್ಥಿತರಿದ್ದರು.

ಚಿನ್ನವೇ ಸಿಗಲಿ
“ಮುಂಬರುವ ಜಾಗತಿಕ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕವೇ ದೊರೆಯುವಂತಾಗಲಿ. ಈ ಬಾರಿ ಅನಾರೋಗ್ಯದಿಂದಾಗಿ ಕೊನೆಯ ಕ್ಷಣದಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಡುವಂತಾದರೂ ಮುಂದಿನ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕವೇ ಕೊರಳನ್ನು ಅಲಂಕರಿಸುವಂತಾಗಲಿ. ಇದು ನಮ್ಮೆಲ್ಲರ ಹಾಗೂ ದೇಶದ ಕೋಟ್ಯಂತರ ಮಂದಿಯ ಹಾರೈಕೆಯೂ ಹೌದು.
– ವಿನೋದ್‌ ಕುಮಾರ್‌
ಎಂಡಿ ಮತ್ತು ಸಿಇಒ, ಎಂಎಂಎನ್‌ಎಲ್‌

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.