![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 30, 2017, 7:30 AM IST
ಮೊಹಾಲಿ: ಡಿಎಸ್ಪಿ (ಉಪ ಪೊಲೀಸ್ಅಧೀಕ್ಷಕ) ಹುದ್ದೆ ನೀಡಲು ಹರ್ಯಾಣ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ, ಬಾಕ್ಸರ್ ಮನೋಜ್ ಕುಮಾರ್, ಇಲ್ಲಿನ ಪಂಜಾಬ್-ಹರ್ಯಾಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಹರ್ಯಾಣ ಸರ್ಕಾರದ ಗೃಹ ಮತ್ತು ಹಣಕಾಸು ಇಲಾಖೆ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ. ಆಗಸ್ಟ್ 29ರೊಳಗೆ ನ್ಯಾಯಾಲಯಕ್ಕೆ ಉತ್ತರಿಸುವಂತೆ ಸೂಚಿಸಿದೆ.
ಮನೋಜ್ ಕುಮಾರ್ 2012ರ ಲಂಡನ್ ಒಲಿಂಪಿಕ್ಸ್ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದರು. ಇದಕ್ಕೂ ಮೊದಲು 2010ರಲ್ಲಿ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅಂದಿನ ಸರ್ಕಾರ ಇವರಿಗೆ ಡಿಎಸ್ಪಿ ಹುದ್ದೆ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಆ ನಂತರ ಕೊಟ್ಟ ಭರವಸೆಯನ್ನು ಮರೆತಿತ್ತು. ಆದಾದ ಬಳಿಕ ಹಲವರಿಗೆ ಹುದ್ದೆ ನೀಡಿದ್ದರೂ 7 ವರ್ಷದಿಂದ ತನ್ನನ್ನು ಕಡೆಗಣಿಸಲಾಗಿದೆ ಎಂದು ಮನೋಜ್ ಕುಮಾರ್ ಈಗ ಆರೋಪಿಸಿದ್ದಾರೆ.
2007ರಲ್ಲಿ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಆಡಿದ್ದ ಹರ್ಯಾಣದ ಜೋಗಿಂದರ್ ಶರ್ಮಗೆ ಡಿಎಸ್ಪಿ ಹುದ್ದೆ ನೀಡಲಾಗಿತ್ತು. ಒಂದೇ ಒಂದು ಟಿ20 ಆಡಿದ್ದಕ್ಕೆ ಅವರಿಗೆ ಡಿಎಸ್ಪಿ ಹುದ್ದೆ ನೀಡಲಾಗಿದೆ. ಆದರೆ ದೊಡ್ಡ ಕೂಟದಲ್ಲಿ ಭಾರತ ಪ್ರತಿನಿಧಿಸಿರುವ ನನ್ನನ್ನು ಸರ್ಕಾರ ನಿರ್ಲಕ್ಷಿéಸಿದೆ ಎಂದು ಅವರು ದೂರಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.