ಭಾರತ ವಿರುದ್ಧದ ದ್ವಿತೀಯ ಟೆಸ್ಟ್‌ ಪಂದ್ಯಕ್ಕೂ ವಾರ್ನರ್‌, ಅಬೋಟ್‌ ಇಲ್ಲ


Team Udayavani, Dec 24, 2020, 7:53 AM IST

ಭಾರತ ವಿರುದ್ಧದ ದ್ವಿತೀಯ ಟೆಸ್ಟ್‌ ಪಂದ್ಯಕ್ಕೂ ವಾರ್ನರ್‌, ಅಬೋಟ್‌ ಇಲ್ಲ

ಮೆಲ್ಬರ್ನ್: ಶನಿವಾರದಿಂದ ಇಲ್ಲಿ ಆರಂಭವಾಗಲಿರುವ ಭಾರತದೆದುರಿನ ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯದಿಂದಲೂ ಆಸ್ಟ್ರೇಲಿಯದ ಆರಂಭಕಾರ ಡೇವಿಡ್‌ ವಾರ್ನರ್‌ ಮತ್ತು ಪೇಸ್‌ ಬೌಲರ್‌ ಸೀನ್‌ ಅಬೋಟ್‌ ಹೊರಬಿದ್ದಿದ್ದಾರೆ.

ಇಬ್ಬರೂ ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ, ಮೂರನೇ ಟೆಸ್ಟ್‌ ವೇಳೆ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆ ಇದೆ ಎಂಬುದಾಗಿ “ಕ್ರಿಕೆಟ್‌ ಆಸ್ಟ್ರೇಲಿಯ’ (ಸಿಎ) ತಿಳಿಸಿದೆ. ಇವರಿಬ್ಬರಿಗೆ ಬದಲಿಯಾಗಿ ಬೇರೆ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳುವ ಅಗತ್ಯ ಬೀಳದು ಎಂದೂ “ಸಿಎ’ ಹೇಳಿದೆ.

ಇವರಿಬ್ಬರ ಗೈರಲ್ಲೂ ಅಡಿಲೇಡ್‌ ಟೆಸ್ಟ್‌ ಪಂದ್ಯದಲ್ಲಿ ಭಾರತವನ್ನು ಹೀನಾಯವಾಗಿ ಸೋಲಿಸಿದ ಕಾರಣ ಆಸೀಸ್‌ ತಂಡಕ್ಕೆ ಬದಲಿ ಆಟಗಾರರ ಅನಿವಾರ್ಯತೆ ಇಲ್ಲ ಎಂಬುದು ಸದ್ಯದ ಲೆಕ್ಕಾಚಾರ.

ವಾರ್ನರ್‌ ಮತ್ತು ಅಬೋಟ್‌ ಸಿಡ್ನಿಯಲ್ಲಿ ವಿಶ್ರಾಂತಿಯಲ್ಲಿದ್ದರು. ಆದರೆ ಅಲ್ಲೀಗ ಮತ್ತೆ ಕೋವಿಡ್‌ ಕೇಸ್‌ ಕಂಡುಬಂದ ಕಾರಣ ಇಬ್ಬರೂ ಮೆಲ್ಬರ್ನ್ಗೆ ಆಗಮಿಸಿದ್ದಾರೆ.

ಬಾರತ ತಂಡದಲ್ಲಿ ಬದಲಾವಣೆ ಸಾಧ್ಯತೆ

ಅಡಿಲೇಡ್‌ನ‌ಲ್ಲಿ ನಡೆದ ಪಿಂಕ್‌ ಟೆಸ್ಟ್‌ ಪಂದ್ಯದಲ್ಲಿ 36 ರನ್ನಿಗೆ ಕುಸಿದು ಹೀನಾಯ ಸೋಲಿಗೆ ತುತ್ತಾದ ಕಾರಣ, ದ್ವಿತೀಯ ಟೆಸ್ಟ್‌ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಬಹಳಷ್ಟು ಬದಲಾವಣೆ ಗೋಚರಿಸುವ ಸಾಧ್ಯತೆ ಇದೆ. ಗಿಲ್‌, ಜಡೇಜ ಅವರ ಸೇರ್ಪಡೆ ಬಹುತೇಕ ಖಚಿತವಾಗಿದೆ. ಕೀಪರ್‌ ಸಾಹಾ ಬದಲು ರಿಷಭ್‌ ಪಂತ್‌ ಆಡಲೂಬಹುದು. ಅವರು ಸಾಹಾಗಿಂತ ಮೊದಲು ಅಭ್ಯಾಸಕ್ಕೆ ಇಳಿದರು.

ಇದನ್ನೂ ಓದಿ:ಐಪಿಎಲ್‌ ತಂಡಗಳ ಸಂಖ್ಯೆ; ಇಂದಿನ ಬಿಸಿಸಿಐ ಸಭೆಯಲ್ಲಿ ಇತ್ಯರ್ಥ

ಫಾರ್ಮ್ನಲ್ಲಿಲ್ಲದ ಪೃಥ್ವಿ ಶಾ ಬದಲು ಶುಭಮನ್‌ ಗಿಲ್‌ ಇನ್ನಿಂಗ್ಸ್‌ ಆರಂಭಿಸುವ ಸಾಧ್ಯತೆ ಇದೆ. ಶಾ ಅವರಿಗೆ ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಠೊಡ್‌ ಪಾಠ ಹೇಳಿಕೊಡುತ್ತಿದ್ದುದು ಕಂಡುಬಂತು. ರವೀಂದ್ರ ಜಡೇಜ ಆಗಮಿಸಿದರೆ ತಂಡಕ್ಕೆ ಸಮರ್ಥ ಆಲ್‌ರೌಂಡರ್‌ ಓರ್ವ ಲಭಿಸಿದಂತಾಗುತ್ತದೆ.

ಗಾಯಾಳಾಗಿ ಹೊರಬಿದ್ದಿರುವ ಮೊಹಮ್ಮದ್‌ ಶಮಿ ಸ್ಥಾನಕ್ಕಾಗಿ ಮೊಹಮ್ಮದ್‌ ಸಿರಾಜ್‌, ನವದೀಪ್‌ ಸೈನಿ ರೇಸ್‌ನಲ್ಲಿದ್ದಾರೆ. ಇವರಿಬ್ಬರೂ ರಹಾನೆಗೆ ಬಹಳ ಹೊತ್ತು ಬೌಲಿಂಗ್‌ ನಡೆಸಿದರು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.