Davis Cup ವಿಶ್ವ ಬಣ ಹೋರಾಟ: ಪಾಕಿಸ್ಥಾನಕ್ಕೆ ಪ್ರಯಾಣಿಸದಿರಲು ಸುಮಿತ್‌, ಮುಕುಂದ್‌ ನಿರ್ಧಾರ


Team Udayavani, Nov 24, 2023, 11:06 PM IST

tennis

ಹೊಸದಿಲ್ಲಿ: ಭಾರತದ ಅಗ್ರ ರ್‍ಯಾಂಕಿನ ಸಿಂಗಲ್ಸ್‌ ಆಟಗಾರರಾದ ಸುಮಿತ್‌ ನಗಲ್‌ ಮತ್ತು ಶಶಿ ಕುಮಾರ್‌ ಮುಕುಂದ್‌ ಅವರು ಮುಂಬರುವ ಡೇವಿಸ್‌ ಕಪ್‌ ಹೋರಾಟಕ್ಕಾಗಿ ಪಾಕಿಸ್ಥಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ರಾಷ್ಟ್ರೀಯ ಟೆನಿಸ್‌ ಫೆಡರೇಶನ್‌ (ಎಐಟಿಎ)ಗೆ ತಿಳಿಸಿದ್ದಾರೆ. ಆಟಗಾರರ ಈ ನಿರ್ಧಾರದಿಂದ ಗೊಂದಲಕ್ಕೆ ಒಳಗಾಗಿರುವ ಎಐಟಿಎ ಮುಂದಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲು ನಿರ್ಧರಿಸಿದೆ.
ಡೇವಿಸ್‌ ಕಪ್‌ ವಿಶ್ವ ಬಣ ಒಂದರ ಪ್ಲೇ ಆಫ್ ಹೋರಾಟವು ಪಾಕಸ್ಥಾನದಲ್ಲಿ ಮುಂದಿನ ಫೆಬ್ರವರಿಯಲ್ಲಿ ನಡೆಯಲಿದೆ. ಈ ಕೂಟಕ್ಕೆ ತಮ್ಮ ಅಲಭ್ಯದ ಬಗ್ಗೆ ಅವರಿಬ್ಬರು ಫೆಡರೇಶನ್‌ಗೆ ಮಾಹಿತಿ ನೀಡಿದ್ದಾರೆ. ಆದರೆ ನಿರ್ದಿಷ್ಟ ಕಾರಣವನ್ನು ಅವರಿಬ್ಬರು ತಿಳಿಸಿಲ್ಲ.

ಡೇವಿಸ್‌ ಕಪ್‌ ಹುಲ್ಲುಹಾಸಿನ ಅಂಗಣದಲ್ಲಿ ನಡೆಯಲಿದೆ. ಇಂತಹ ಅಂಗಣದಲ್ಲಿ ಆಡುವುದು ಸುಮಿತ್‌ ಅವರಿಗೆ ಬಯಸುವುದಿಲ್ಲ, ಅವರ ಶೈಲಿಯ ಆಟಕ್ಕೆ ಈ ಅಂಗಣ ಒಗ್ಗಿಕೊಳ್ಳುವುದಿಲ್ಲ. ಮುಕುಂದ್‌ ಅವರು ವೈಯಕ್ತಿಕ ಕಾರಣಗಳಿಗಾಗಿ ಡೇವಿಸ್‌ ಕಪ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಹುಲ್ಲುಹಾಸಿನಲ್ಲಿ ಪಂದ್ಯಗಳು ನಡೆಯುವ ಕಾರಣ ಪಾಕಿಸ್ಥಾನ ವಿರುದ್ಧದ ಹೋರಾಟಕ್ಕೆ ನನ್ನನ್ನು ಪರಿಗಣಿಸುವುದು ಬೇಡವೆಂದು ದೀರ್ಘ‌ ಸಮಯದ ಮೊದಲೇ ನಗಲ್‌ ಅವರು ಎಐಟಿಎಗೆ ತಿಳಿಸಿದ್ದರು ಎಂದು ಫೆಡರೇಶನ್‌ನ ಮೂಲಗಳು ತಿಳಿಸಿವೆ.

ಸದ್ಯದ ಸ್ಥಿತಿಯಲ್ಲಿ ಭಾರತದ ಸವಾಲಿನ ನೇತೃತ್ವವನ್ನು ರಾಮ್‌ಕುಮಾರ್‌ ರಾಮನಾಥನ್‌ ವಹಿಸಿಕೊಳ್ಳುವ ಸಾಧ್ಯತೆಯಿದೆ. ದಿಗ್ವಿಜಯ್‌ ಪ್ರತಾಪ್‌ ಸಿಂಗ್‌ ಕೂಡ ಆಡುವ ಸಾಧ್ಯತೆಯಿದೆ. ಅವರು ಕಳೆದ ಸಪ್ಟೆಂಬರ್‌ನಲ್ಲಿ ನಡೆದ ಮೊರೊಕ್ಕೊ ವಿರುದ್ಧದ ಹೋರಾಟದಲ್ಲಿ ಭಾರತ ಪರ ಮೊದಲ ಬಾರಿ ಆಡಿದ್ದರು.

ಟಾಪ್ ನ್ಯೂಸ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas-das

India-South Africa; ವನಿತೆಯರ ಟಿ20 ಸರಣಿ ಇಂದಿನಿಂದ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

1-jock

Wimbledon ಟೆನಿಸ್‌ : ಜೊಕೋವಿಕ್‌ 3ನೇ ಸುತ್ತಿಗೆ

INdia-team

Team India: ಮುಂಬೈಯಲ್ಲಿ ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ!

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

Nanna Devru; ದೇವ್ರ ನಂಬಿ ಬಂದ ಮಯೂರಿ

Nanna Devru; ದೇವ್ರ ನಂಬಿ ಬಂದ ಮಯೂರಿ

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.