WPL :ನಿರ್ಣಾಯಕ ಪಂದ್ಯದಲ್ಲಿ ಆರ್ಸಿಬಿಗೆ 1 ರನ್ ಸೋಲು
Team Udayavani, Mar 10, 2024, 11:05 PM IST
ಹೊಸದಿಲ್ಲಿ: ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಒಂದು ರನ್ ಸೋಲನುಭವಿಸಿದ ಆರ್ಸಿಬಿಯ ಪ್ಲೇ ಆಫ್ ಹಾದಿ ಕಠಿನಗೊಂಡಿದೆ. ಆತಿಥೇಯ ಡೆಲ್ಲಿ ಅಗ್ರಸ್ಥಾನಕ್ಕೇರಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 5 ವಿಕೆಟಿಗೆ 181 ರನ್ ಪೇರಿಸಿದರೆ, ಆರ್ಸಿಬಿ 7 ವಿಕೆಟಿಗೆ 180 ರನ್ ಮಾಡಿ ಶರಣಾಯಿತು.
ಚೇಸಿಂಗ್ ವೇಳೆ ನಾಯಕಿ ಸ್ಮತಿ ಮಂಧನಾ (5) ಬೇಗ ಔಟಾದರು. ಎಲ್ಲಿಸ್ ಪೆರ್ರಿ (49) ಮತ್ತು ಸೋಫಿ ಮೊಲಿನಾಕ್ಸ್ (33) 2ನೇ ವಿಕೆಟಿಗೆ 80 ರನ್ ಪೇರಿಸಿ ಹೋರಾಟ ಜಾರಿಯಲ್ಲಿರಿಸಿದರು. ಬಳಿಕ ರಿಚಾ ಘೋಷ್ (51) ಸಿಡಿದು ನಿಂತರು. ಅಂತಿಮ ಓವರ್ನಲ್ಲಿ ಆರ್ಸಿಬಿ ಜಯಕ್ಕೆ 17 ರನ್ ಬೇಕಿತ್ತು. ಅಂತಿಮ ಎಸೆತದಲ್ಲಿ ರಿಚಾ ರನೌಟ್ ಆದರು.
ಡೆಲ್ಲಿ ಆರಂಭದಿಂದಲೇ ಬಿರುಸಿನ ಆಟಕ್ಕಿಳಿಯಿತು. ಅಗ್ರ ಕ್ರಮಾಂಕದ ಆಟಗಾರ್ತಿಯರೆಲ್ಲ ಉತ್ತಮ ಮೊತ್ತ ಪೇರಿಸಿದರು. ಜೆಮಿಮಾ ರೋಡ್ರಿಗಸ್ ಅವರಿಂದ ಅರ್ಧ ಶತಕ ದಾಖಲಾಯಿತು (58). ಅಲೈಸ್ ಕ್ಯಾಪ್ಸಿ 48, ಆರಂಭಿಕರಾದ ಮೆಗ್ ಲ್ಯಾನಿಂಗ್ 29 ಮತ್ತು ಶಫಾಲಿ ವರ್ಮ 23 ರನ್ ಹೊಡೆದರು.
ಕೌರ್ ಖುಷಿ
ಶನಿವಾರದ ಗುಜರಾತ್ ವಿರುದ್ಧದ ದೊಡ್ಡ ಮೊತ್ತದ ಪಂದ್ಯವನ್ನು ಯಶಸ್ವಿಯಾಗಿ ಚೇಸ್ ಮಾಡಿದ ಬಳಿಕ ಮಾತಾಡಿದ ಮುಂಬೈ ಇಂಡಿಯನ್ಸ್ ನಾಯಕಿ, “ಇದೊಂದು ಬಿಗ್ ಮ್ಯಾಚ್ ಆಗಿತ್ತು. ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡವೆಂಬ ಕಾರಣಕ್ಕೆ ಖುಷಿಯಾಗುತ್ತಿದೆ. ನನ್ನ ಬ್ಯಾಟಿಂಗ್ ಫಾರ್ಮ್ ತೃಪ್ತಿ ನೀಡಿದೆ’ ಎಂದು ಹೇಳಿದರು.
ಗುಜರಾತ್ 7 ವಿಕೆಟಿಗೆ 190 ರನ್ ಪೇರಿಸಿದರೆ, ಮುಂಬೈ 19.5 ಓವರ್ಗಳಲ್ಲಿ ಮೂರೇ ವಿಕೆಟಿಗೆ 191 ರನ್ ಬಾರಿಸಿತು. ಕೌರ್ ಕೇವಲ 48 ಎಸೆತಗಳಿಂದ ಅಜೇಯ 95 ರನ್ ಸಿಡಿಸಿ (10 ಫೋರ್, 5 ಸಿಕ್ಸರ್) ಮುಂಬೈ ಗೆಲುವಿನ ರೂವಾರಿ ಎನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Womens T20 World Cup: ಪಾಕ್ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತ ಭಾರತ
INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್ ಯಾರು?
T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್
Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್ ಸವಾಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.