![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 13, 2019, 5:30 AM IST
ಹೊಸದಿಲ್ಲಿ: ಇನ್ನು ಎರಡು ವಾರ ಕಳೆದರೆ ಭಾರತ ಕ್ರಿಕೆಟ್ ತಂಡದ ವೆಸ್ಟ್ ಇಂಡೀಸ್ ಪ್ರವಾಸ ಆರಂಭವಾಗಲಿದೆ. ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮ ಅವರು ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ. ಕೊಹ್ಲಿ, ಬುಮ್ರಾ ಮತ್ತು ಧೋನಿ ಅವರು ವಿಂಡೀಸ್ ಪ್ರವಾಸಕ್ಕೆ ಇರುವ ಸಾಧ್ಯತೆಯಿಲ್ಲ.
ಪೂರ್ಣ ಪ್ರಮಾಣದ ಸರಣಿ
ವಿಂಡೀಸ್ ಪ್ರವಾಸದ ವೇಳೆ ಭಾರತೀಯ ತಂಡವು ಎರಡು ಟೆಸ್ಟ್, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನಾಡಲಿದೆ. ಆ. 3ರಂದು ಮೂರು ಪಂದ್ಯಗಳ ಟ್ವೆಂಟಿ20 ಸರಣಿಯ ಮೊದಲ ಪಂದ್ಯ ನಡೆಯಲಿದೆ. ಮೊದಲೆರಡು ಪಂದ್ಯಗಳು ಫ್ಲೋರಿಡಾದಲ್ಲಿ ನಡೆಯಲಿದೆ. ಟಿ20 ಸರಣಿಯ ಬಳಿಕ ಏಕದಿನ ಮತ್ತು ಟೆಸ್ಟ್ ಸರಣಿ ನಡೆಯಲಿದೆ. ಕೊಹ್ಲಿ ಅವರಿಗೆ ದೀರ್ಘ ಅವಧಿಗೆ ವಿಶ್ರಾಂತಿ ನೀಡಿದರೆ ಟೆಸ್ಟ್ ಸರಣಿಗೆ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.
ಜು. 14ರ ಬಳಿಕ ಆಯ್ಕೆ
ವಿಶ್ವಕಪ್ನಲ್ಲಿ ಸೆಮಿಫೈನಲ್ನಲ್ಲಿ ಸೋತ ಭಾರತೀಯ ತಂಡವು ಜೂ. 14ರಂದು ಭಾರತಕ್ಕೆ ಆಗಮಿಸಲಿದೆ. ಆಬಳಿಕ ವಿಂಡೀಸ್ ಸರಣಿಗೆ ಭಾರತೀಯ ತಂಡವನ್ನು ಆಯ್ಕೆ ಮಾಡಲಾಗುತ್ತದೆ. ವಿಶ್ವಕಪ್ ಫೈನಲ್ ಮುಗಿದ ಬಳಿಕ ಎಲ್ಲ ಆಟಗಾರರು ಲಂಡನ್ನಿಂದ ಭಾರತಕ್ಕೆ ಆಗಮಿಸುವ ಸಾಧ್ಯತೆಯಿದೆ.
ಕೊಹ್ಲಿ, ಬುಮ್ರಾಗೆ ವಿಶ್ರಾಂತಿ
ಕಳೆದ ಎರಡು ವರ್ಷಗಳಿಂದ ಮೂರು ಮಾದರಿಯ ಕ್ರಿಕೆಟ್ನಲ್ಲಿ ಅವಿತರವಾಗಿ ಆಡಿದ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ಟಿ20 ಮತ್ತು ಏಕದಿನ ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಮೊದಲ ಎರಡು ಟೆಸ್ಟ್ಗೂ ಅವರಿಗೆ ವಿಶ್ರಾಂತಿ ನೀಡಲು ಚಿಂತನೆ ನಡೆಸಲಾಗುತ್ತಿದೆ. ಅವರಿಬ್ಬರು ತಂಡದ ಪ್ರಮುಖ ಆಟಗಾರರಾದ ಕಾರಣ ಮುಂದಿನ ತವರಿನ ಸರಣಿಗೆ ಸಿದ್ಧರಾಗಲು ವಿಶ್ರಾಂತಿಯ ಅಗತ್ಯ ಅವರಿಗಿದೆ ಎಂದು ತಂಡ ವ್ಯವಸ್ಥಾಪಕರು ಹೇಳಿದ್ದಾರೆ. ಆದರೆ ಧೋನಿ ಅವರ ಲಭ್ಯತೆ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ. ಅವರು ವಿಂಡೀಸ್ ಸರಣಿಗೆ ಲಭ್ಯರಿರುತ್ತಾರೆಯೇ ಅಥವಾ ವಿಶ್ರಾಂತಿ ಪಡೆಯುತ್ತಾರೆಯೇ ಎಂಬುದು ಖಚಿತವಾಗಿಲ್ಲ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.