ಧವನ್ ರನ್ನು ಕ್ಯಾಪ್ಟನ್ ಮಾಡಿದ್ದರು.: ಆಯ್ಕೆಗಾರರಿಗೆ ಕ್ರಿಕೆಟ್ ಜ್ಞಾನವಿಲ್ಲವೆಂದ ಮಾಜಿಆಟಗಾರ
Team Udayavani, Jun 19, 2023, 4:35 PM IST
ಮುಂಬೈ: ಭಾರತ ಪುರುಷರ ಕ್ರಿಕೆಟ್ ತಂಡದ ಕಳೆದೊಂದು ದಶಕದ ಐಸಿಸಿ ಟ್ರೋಫಿ ಬರದ ಬಗ್ಗೆ ಹಲವಾರು ಮಾಜಿ ಆಟಗಾರರು ಟೀಕೆ ಮಾಡುತ್ತಿದ್ದಾರೆ. ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲಿನ ಬಳಿಕ ಈ ಟೀಕೆಗಳು ಹೆಚ್ಚಾಗಿದೆ. ಮಾಜಿ ಆಟಗಾರ ದಿಲೀಪ್ ವೆಂಗ್ ಸರ್ಕಾರ್ ಅವರು ಟೀಂ ಇಂಡಿಯಾದ ಆಯ್ಕೆ ಸಮಿತಿಯ ವಿರುದ್ಧ ಕಿಡಿಕಾರಿದ್ದಾರೆ.
ಕೆಲವು ಆಯ್ಕೆದಾರರಿಗೆ ಅವರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ದೂರದೃಷ್ಟಿ ಅಥವಾ ಆಳವಾದ ಜ್ಞಾನವಿಲ್ಲ ಎಂದು ವೆಂಗ್ ಸರ್ಕಾರ್ ಟೀಕಿಸಿದ್ದಾರೆ.
“ದುರದೃಷ್ಟಕರ ಅಂಶವೆಂದರೆ ಕಳೆದ ಆರು-ಏಳು ವರ್ಷಗಳಿಂದ ನಾನು ನೋಡಿದ ಆಯ್ಕೆದಾರರಿಗೆ ದೂರದೃಷ್ಟಿ, ಆಟದ ಬಗ್ಗೆ ಅಥವಾ ಕ್ರಿಕೆಟ್ ಪ್ರಜ್ಞೆಯ ಬಗ್ಗೆ ಆಳವಾದ ಜ್ಞಾನವಿಲ್ಲ. ಅವರು ಶಿಖರ್ ಧವನ್ ಅವರನ್ನು ಭಾರತ ನಾಯಕನನ್ನಾಗಿ ಮಾಡಿದರು; (ಶ್ರೀಲಂಕಾ ಸರಣಿಗೆ) ಅಲ್ಲಿ ನೀವು ಭವಿಷ್ಯದ ನಾಯಕನನ್ನು ಆಯ್ಕೆ ಮಾಡಿ ಅವಕಾಶ ನೀಡಬಹುದಿತ್ತು” ಎಂದು ವೆಂಗ್ಸರ್ಕರ್ ತಿಳಿಸಿದರು.
ಭಾರತ ತಂಡದಲ್ಲಿ ನಾಯಕನ ಸ್ಥಾನಕ್ಕೆ ಆಯ್ಕೆಗಾರರು ಯಾರನ್ನೂ ಬೆಳೆಸದಿರುವ ಬಗ್ಗೆ ವೆಂಗ್ಸರ್ಕರ್ ತಮ್ಮ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ. ಬಿಸಿಸಿಐ ವಿರುದ್ಧ ಕಿಡಿಕಾರಿದ ಅವರು, ಕೇವಲ ಇಂಡಿಯನ್ ಪ್ರೀಮಿಯರ್ ಲೀಗ್ ಇದ್ದರೆ ಸಾಕಾಗುವುದಿಲ್ಲ ಎಂದು ಸಲಹೆ ನೀಡಿದರು.
ಇದನ್ನೂ ಓದಿ:Adipurush ; ಸಂಭಾಷಣೆಕಾನಿಗೆ ಬೆದರಿಕೆ: ಮುಂಬಯಿ ಪೊಲೀಸರಿಂದ ಭದ್ರತೆ
“ನೀವು ಯಾರನ್ನೂ ಸಿದ್ದಗೊಳಿಸಿಲ್ಲ. ಸಂದರ್ಭ ಬರುವವರೆಗೆ ಕಾಯುತ್ತೀರಿ. ಪ್ರಪಂಚದ ಶ್ರೀಮಂತ ಕ್ರಿಕೆಟ್ ಮಂಡಳಿ ಬಗ್ಗೆ ಮಾತನಾಡುತ್ತೀರಿ, ಬೆಂಚ್ ಸ್ಟ್ರೆಂತ್ ಎಲ್ಲಿದೆ? ಕೇವಲ ಐಪಿಎಲ್ ಅನ್ನು ಹೊಂದಿದ್ದು, ಮಾಧ್ಯಮ ಹಕ್ಕುಗಳಲ್ಲಿ ಕೋಟಿ ರೂಪಾಯಿ ಗಳಿಸಿದೆ, ಅದು ಮಾತ್ರ ಸಾಧನೆ ಆಗಬಾರದು” ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.