Royal Challengers Bangalore; ಫಿನಿಶಿಂಗ್‌ ಪಾತ್ರದಲ್ಲಿ ಡಿ.ಕೆ. ಮಿಂಚು


Team Udayavani, Mar 27, 2024, 6:02 AM IST

dinesh karthik shining in finisher role

ಬೆಂಗಳೂರು: “ಇದು ನನ್ನ ಕೊನೆಯ ಐಪಿಎಲ್‌. ಹೀಗಾಗಿ ನಾನು ಸಾಮರ್ಥ್ಯಕ್ಕೂ ಮಿಗಿಲಾದ ಪ್ರದರ್ಶನ ನೀಡುವ ಹಾಗೂ ಫಿನಿಶಿಂಗ್‌ ಪಾತ್ರವನ್ನು ಯಶಸ್ವಿಯಾಗಿ ನಿಭಾಯಿಸುವ ಯೋಜನೆಯಲ್ಲಿದ್ದೇನೆ’ ಎಂಬುದಾಗಿ ಆರ್‌ಸಿಬಿಯ ಅನುಭವಿ ಆಟಗಾರ ದಿನೇಶ್‌ ಕಾರ್ತಿಕ್‌ ಐಪಿಎಲ್‌ ಆರಂಭಕ್ಕೂ ಮೊದಲೇ ಹೇಳಿದ್ದರು. ಮೊದಲೆರಡು ಪಂದ್ಯಗಳಲ್ಲಿ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ಪಂಜಾಬ್‌ ಎದುರಿನ ಚೇಸಿಂಗ್‌ ವೇಳೆ, ಆರ್‌ಸಿಬಿಗೆ ಕೊನೆಯ 3 ಓವರ್‌ಗಳಲ್ಲಿ 36 ರನ್‌ ತೆಗೆಯುವ ಕಠಿನ ಸವಾಲು ಎದುರಾಗಿತ್ತು. ಈ ಹಂತದಲ್ಲಿ ದಿನೇಶ್‌ ಕಾರ್ತಿಕ್‌ ಜತೆ ಕ್ರೀಸ್‌ನಲ್ಲಿದ್ದವರು ಇಂಪ್ಯಾಕ್ಟ್ ಪ್ಲೇಯರ್‌ ಮಹಿಪಾಲ್‌ ಲೊಮ್ರೋರ್‌. ಇವರು ಯಶ್‌ ದಯಾಳ್‌ ಬದಲು ಆಡಲಿಳಿದಿದ್ದರು.

ಅರ್ಷದೀಪ್‌ ಸಿಂಗ್‌ ಎಸೆದ 18ನೇ ಓವರ್‌ನಲ್ಲಿ ಲೊಮ್ರೋರ್‌ ಒಂದು ಫೋರ್‌, ಒಂದು ಸಿಕ್ಸರ್‌ ಸಿಡಿಸಿ ಲೆಕ್ಕಾಚಾರವನ್ನು ಒಂದಿಷ್ಟು ಸರಳಗೊಳಿಸಿದರು. 2 ಓವರ್‌ಗಳಲ್ಲಿ 23 ರನ್‌ ಬೇಕಾಯಿತು. ಬೌಲರ್‌ ಬೇರೆ ಯಾರೂ ಅಲ್ಲ, ಆರ್‌ಸಿಬಿಯಿಂದ ಬೇರ್ಪಟ್ಟ ಹರ್ಷಲ್‌ ಪಟೇಲ್‌. ಇವರ ಮೇಲೆ ಸವಾರಿ ಮಾಡಿದ ದಿನೇಶ್‌ ಕಾರ್ತಿಕ್‌ ಒಂದು ಬೌಂಡರಿ, ಒಂದು ಸಿಕ್ಸರ್‌ ಬಾರಿಸಿದರು. ಅರ್ಷದೀಪ್‌ ಪಾಲಾದ ಕೊನೆಯ ಓವರ್‌ನಲ್ಲಿ 10 ರನ್‌ ಅಗತ್ಯ ಬಿತ್ತು. ಕಾರ್ತಿಕ್‌ ಮೊದಲ ಎಸೆತವನ್ನೇ ಸಿಕ್ಸರ್‌ಗೆ ಬಡಿದಟ್ಟಿದರು. 2ನೇ ಎಸೆತ ವೈಡ್‌. ಅನಂತರ ಬೌಂಡರಿ ಶಾಟ್‌!

ಹೀಗೆ ಹತ್ತೇ ಎಸೆತಗಳಿಂದ ಅಜೇಯ 28 ರನ್‌ (3 ಬೌಂಡರಿ, 2 ಸಿಕ್ಸರ್‌) ಬಾರಿಸಿದ ದಿನೇಶ್‌ ಕಾರ್ತಿಕ್‌ ಆರ್‌ಸಿಬಿ ಗೆಲುವು ಸಾರಿದರು. ಚೆನ್ನೈ ಎದುರಿನ ಆರಂಭಿಕ ಪಂದ್ಯದಲ್ಲೂ ದಿನೇಶ್‌ ಕಾರ್ತಿಕ್‌ ಮಿಂಚಿನ ಗತಿಯಲ್ಲಿ 38 ರನ್‌ ಬಾರಿಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸುವಲ್ಲಿ ಯಶಸ್ವಿಯಾಗಿದ್ದರು.

2023ರ ಐಪಿಎಲ್‌ನಲ್ಲಿ ದಿನೇಶ್‌ ಕಾರ್ತಿಕ್‌ ತೀರಾ ಕಳಪೆ ನೀಡಿದ್ದರು. ತಂಡಕ್ಕೆ ಅಗತ್ಯವಿದ್ದಾಗಲೆಲ್ಲ ಕೈಕೊಡುತ್ತ ಬಂದಿದ್ದರು. ಹೀಗಾಗಿ ಈ ಬಾರಿ ಇವರ ಮೇಲೆ ಆರ್‌ಸಿಬಿ ಅಭಿಮಾನಿಗಳಿಗೆ ವಿಶೇಷ ನಂಬಿಕೆ ಇರಲಿಲ್ಲ. ಆದರೀಗ ಕಾರ್ತಿಕ್‌ ನಿರೀಕ್ಷೆಗೂ ಮೀರಿದ ಬ್ಯಾಟಿಂಗ್‌ ಮೂಲಕ ಕೆಳ ಕ್ರಮಾಂಕದಲ್ಲಿ ತಂಡಕ್ಕೆ ಶಕ್ತಿ ತುಂಬುತ್ತಿದ್ದಾರೆ. ಇದೊಂದು ಒಳ್ಳೆಯ ಬೆಳವಣಿಗೆ.

ವಿದೇಶಿಗರ ವೈಫ‌ಲ್ಯ

ಮೊದಲೆರಡು ಪಂದ್ಯಗಳಲ್ಲಿ ಗಮನಿಸಿದಂತೆ ಆರ್‌ಸಿಬಿಯ ವಿದೇಶಿ ಕ್ರಿಕೆಟಿಗರು ಭಾರೀ ವೈಫ‌ಲ್ಯ ಕಾಣುತ್ತಿದ್ದಾರೆ. ಇಂಥ ಸ್ಥಿತಿಯಲ್ಲಿ ದಿನೇಶ್‌ ಕಾರ್ತಿಕ್‌, ಅನುಜ್‌ ರಾವತ್‌, ಮಹಿಪಾಲ್‌ ಲೊಮ್ರೋರ್‌ ಅವರಂಥ ಕೆಳ ಕ್ರಮಾಂಕದ ಆಟಗಾರರು ರನ್‌ ಗಳಿಸುತ್ತಿರುವುದು ಆರ್‌ಸಿಬಿಯ ಹೆಚ್ಚುಗಾರಿಕೆ ಎನ್ನಬಹುದು.

ಆರ್‌ಸಿಬಿಯ ವಿದೇಶಿ ಕ್ರಿಕೆಟಿಗರ “ಸಾಧನೆ’ಯನ್ನೊಮ್ಮೆ ಗಮನಿಸಿ. ಮೊದಲ ಪಂದ್ಯದಲ್ಲಿ ನಾಯಕ ಫಾ ಡು ಪ್ಲೆಸಿಸ್‌ 35 ರನ್‌ ಮಾಡಿದರೂ ಪಂಜಾಬ್‌ ವಿರುದ್ಧ ಮೂರೇ ರನ್ನಿಗೆ ಆಟ ಮುಗಿಸಿದರು. ಗ್ಲೆನ್‌ ಮ್ಯಾಕ್ಸ್‌ವೆಲ್‌ ಎರಡೂ ಪಂದ್ಯಗಳಲ್ಲಿ ಠುಸ್‌ ಆಗಿದ್ದಾರೆ. ಚೆನ್ನೈ ವಿರುದ್ಧ ಗೋಲ್ಡನ್‌ ಡಕ್‌ ಸಂಕಟವಾದರೆ, ಪಂಜಾಬ್‌ ವಿರುದ್ಧ ಗಳಿಸಿದ್ದು 3 ರನ್‌ ಮಾತ್ರ.

ತಂಡದ ಪಾಲಿನ ದೊಡ್ಡ ಭರವಸೆಯಾಗಿದ್ದ ಕ್ಯಾಮರಾನ್‌ ಗ್ರೀನ್‌ ಗಳಿಸಿದ್ದು 18 ಮತ್ತು 3 ರನ್‌ ಮಾತ್ರ. ಪಂಜಾಬ್‌ ವಿರುದ್ಧ ಇವರನ್ನು ವನ್‌ಡೌನ್‌ನಲ್ಲಿ ಕಳುಹಿಸಿದ ಪ್ರಯೋಗ ಯಶಸ್ವಿಯಾಗಲಿಲ್ಲ.

ವೆಸ್ಟ್‌ ಇಂಡೀಸ್‌ ವೇಗಿ ಅಲ್ಜಾರಿ ಜೋಸೆಫ್ ಯಾವುದೇ ಪರಿಣಾಮ ಬೀರಿಲ್ಲ. ಜತೆಗೆ ಭಾರೀ ದುಬಾರಿಯೂ ಆಗುತ್ತಿದ್ದಾರೆ. ಮೊದಲ ಪಂದ್ಯದಲ್ಲಿ 3.4 ಓವರ್‌ಗಳಿಂದ 38 ರನ್‌ ನೀಡಿ ವಿಕೆಟ್‌ ಲೆಸ್‌ ಎನಿಸಿದರು. ಪಂಜಾಬ್‌ ವಿರುದ್ಧ ಒಂದು ವಿಕೆಟ್‌ ಕೆಡವಲು 43 ರನ್‌ ನೀಡಿದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.